ಸಂಚಾರ ನಿಯಮ ನಿರ್ಲಕ್ಷ್ಯ ಪ್ರಕರಣ ; ಬರೀ ಲೆಕ್ಕಕ್ಕಷ್ಟೇ… ಆಟಕ್ಕಲ್ಲ !


Team Udayavani, Apr 2, 2022, 12:37 PM IST

ಸಂಚಾರ ನಿಯಮ ನಿರ್ಲಕ್ಷ್ಯ ಪ್ರಕರಣ ; ಬರೀ ಲೆಕ್ಕಕ್ಕಷ್ಟೇ… ಆಟಕ್ಕಲ್ಲ !

ಮಹಾನಗರ : ನಗರ ಹಾಗೂ ಹೊರ ವಲಯದಲ್ಲಿ ಹೆದ್ದಾರಿ ಮತ್ತು ಒಳರಸ್ತೆಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ದಿನೇ ದಿನೆ ಹೆಚ್ಚುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ.

ದ್ವಿಚಕ್ರ ವಾಹನಗಳ ಸಹಿತ ಬಸ್‌, ಕಾರು, ಲಾರಿ ಮೊದಲಾದ ವಾಹನಗಳ ಅತೀ ವೇಗ, ನಿರ್ಲಕ್ಷ್ಯದ ಚಾಲನೆ ಒಂದು ಸಮಸ್ಯೆಯಾದರೆ, ಬಸ್‌ ಗಳ ಕರ್ಕಶ ಹಾರ್ನ್ ಮತ್ತೂಂದು ದೊಡ್ಡ ಸಮಸ್ಯೆಯಾಗಿ ನಾಗರಿಕರನ್ನ ಕಾಡತೊಡಗಿದೆ. ಇವುಗಳೊಂದಿಗೆ ಇತ್ತೀಚೆಗೆ ಕೆಲವರ ಹೊಸ ಹುಚ್ಚು ಸಾಹಸಗಳೂ ಅಪಾಯಕಾರಿಯಾಗಿ ಪರಿಣಮಿಸುತ್ತಿವೆ.

ಟೈಮಿಂಗ್ಸ್‌ ಗಲಾಟೆ
ಖಾಸಗಿ ಬಸ್‌ಗಳ ಓವರ್‌ಟೇಕ್‌ ಭರಾಟೆ ಹೆಚ್ಚಾಗಿದೆ. ಬೆಳಗ್ಗೆ ಮತ್ತು ಸಂಜೆ ಜನ, ವಾಹನ ಸಂಚಾರ ದಟ್ಟಣೆಯ ವೇಳೆ ಬಸ್‌ಗಳ ಪೈಪೋಟಿಯ ಸಂಚಾರ ಇತರ ವಾಹನ ಚಾಲಕರಲ್ಲಿ ಭೀತಿ ಮೂಡಿಸಿದೆ. ಸಿಬಂದಿ ನಡುವೆ ಟೈಮಿಂಗ್ಸ್‌ ವಿಚಾರವಾಗಿ ಆಗಾಗ್ಗೆ ಘರ್ಷಣೆಗಳು ಸಂಭವಿಸುತ್ತಿದ್ದು ಬಸ್‌ಗಳನ್ನು ರಸ್ತೆಯಲ್ಲೇ ಅಡ್ಡ ಇಟ್ಟ ಘಟನೆಗಳು ಕೂಡ ನಡೆದಿದೆ. ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ.

ಲೌಡ್‌ ಸ್ಪೀಕರ್‌ಗೆ ಇಲ್ಲ ಕಡಿವಾಣ
ಸಿಟಿ, ಎಕ್ಸ್‌ಪ್ರೆಸ್‌ ಸಹಿತ ಬಹುತೇಕ ಖಾಸಗಿ ಬಸ್‌ಗಳಲ್ಲಿ ಲೌಡ್‌ಸ್ಪೀಕರ್‌ ಆರ್ಭಟ ಇದೆ. ಕೆಲವು ಮಂದಿ ಚಾಲಕರು ಜಂಕ್ಷನ್‌ಗಳ ಬಳಿ ಬರುವ ವೇಳೆ ಸ್ಪೀಕರ್‌ ವಾಲ್ಯೂಮ್‌ ಸ್ವಲ್ಪ ತಗ್ಗಿಸುತ್ತಾರೆ. ಅನಂತರ ಅದರ ಸದ್ದು ಪ್ರಯಾಣಿಕರ ನೆಮ್ಮದಿ ಕೆಡಿಸುತ್ತದೆ. ಪ್ರಯಾಣಿಕರು ತಮ್ಮ ನಿಲ್ದಾಣ ಬರುವಾಗ ಬಸ್‌ ನಿಲ್ಲಿಸಲು ಬೊಬ್ಬೆ ಹೊಡೆಯಬೇಕಾದ ಸ್ಥಿತಿ ಇದೆ.

ಮೊಬೈಲ್‌ ಪೋನ್‌ ಬಳಕೆ
ಸಂಚಾರಿ ಪೊಲೀಸರ ಕಣ್ತಪ್ಪಿಸಿ ಮೊಬೈಲ್‌ ಬಳಕೆ ನಡೆಯುತ್ತಲೇ ಇದೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಒಳಗೆ ಮೊಬೈಲ್‌ ಇಟ್ಟು ಮಾತನಾಡುವುದು, ಇಯರ್‌ ಪೋನ್‌, ಬ್ಲೂ ಟೂತ್‌ ಮೊದಲಾದವುಗಳನ್ನು ಬಳಕೆ ಮಾಡುವುದು ಸರ್ವೇಸಾಮಾನ್ಯ. ಕಾರು ಚಾಲನೆ ವೇಳೆಯೂ ಮೊಬೈಲ್‌ ಬಳಕೆ ಯಾವುದೇ ಅಂಜಿಕೆ ಇಲ್ಲದೆ ನಡೆಯುತ್ತಿರುವುದು ಕಂಡುಬಂದಿದೆ.

ನಿಗಾ-ಕಾರ್ಯಾಚರಣೆ ಹೆಚ್ಚಾಗಲಿ
ರಾಷ್ಟ್ರೀಯ ಹೆದ್ದಾರಿ, ನಗರದೊಳಗಿನ ರಸ್ತೆಗಳು ಸೇರಿದಂತೆ ವಿವಿಧೆಡೆ ಪೊಲೀಸರ ನಿಗಾ ಹೆಚ್ಚಾಗಬೇಕಿದೆ. ಪೊಲೀಸರು ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ದಂಡ ವಸೂಲಿಗೆ ಆದ್ಯತೆ ನೀಡುತ್ತಿದ್ದಾರೆ.

ಇದನ್ನೂ ಓದಿ : ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಎನ್ ಸಿಬಿಯ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವು

ಕರ್ಕಶ ಹಾರ್ನ್ ಹಾವಳಿ
ನಿಷೇಧಿತವಾದ ಹಾರ್ನ್ಗಳ ಬಳಕೆ ಯನ್ನು ತಡೆಯುವಲ್ಲಿ ಪೊಲೀಸರು ಇನ್ನೂ ಯಶಸ್ಸಾಗಿಲ್ಲ. ಅಪರೂಪ ಕ್ಕೊಮ್ಮೆ ಕಾರ್ಯಾಚರಣೆ ನಡೆಸಿ ಕೆಲವು ಬಸ್‌ಗಳ ಹಾರ್ನ್ ಕಿತ್ತು ಹಾಕುತ್ತಾರೆ. ಮರುದಿನದಿಂದಲೇ ಮತ್ತೆ ಅದೇ ರೀತಿಯ ಹಾರ್ನ್ಗಳನ್ನು ಬಳಸಲಾಗುತ್ತಿದೆ. ಶಾಲೆ, ಆಸ್ಪತ್ರೆ ಮೊದಲಾದ ಸ್ಥಳಗಳಲ್ಲಿಯೂ ಯಾವುದೇ ಅಂಜಿಕೆ ಇಲ್ಲದೆ ಕರ್ಕಶ ಹಾರ್ನ್ಗಳನ್ನು ಬಳಕೆ ಮಾಡಲಾಗುತ್ತಿದೆ.

ಜಾಲಿರೈಡ್‌, ಸ್ಟಂಟ್‌
ನಗರದ ರಸ್ತೆಗಳು, ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳ ಸ್ಟಂಟ್‌, ಅತೀ ವೇಗ ಹಲವರ ಜೀವಕ್ಕೆ ಅಪಾಯ ತಂದೊಡ್ಡಿದೆ. ನಿರ್ಲಕ್ಷ್ಯದ ಚಾಲನೆಗೆ ಈಗಾಗಲೇ ಹಲವರು ಬಲಿಯಾಗಿದ್ದಾರೆ. ವೀಲಿಂಗ್‌ಗೆ ಸಂಬಂಧಿಸಿ ಈಗಾಗಲೇ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಆದರೂ ಬೈಕ್‌ ಸ್ಟಂಟ್‌ ಹಲವೆಡೆ ಮುಂದುವರಿದಿದೆ. ವೀಕೆಂಡ್‌ ದಿನಗಳಲ್ಲಿ ಜಾಲಿ ರೈಡ್‌ ಹೆಸರಿನಲ್ಲಿ ನಿರ್ಲಕ್ಷ್ಯದ ಬೈಕ್‌ ಸವಾರಿ ಹೆಚ್ಚಾಗಿದೆ.

ತಿಂಗಳಲ್ಲಿ 61.42 ಲ.ರೂ. ದಂಡ ವಸೂಲಿ
ಫೆಬ್ರವರಿ ತಿಂಗಳಲ್ಲಿ ಅತೀ ವೇಗಕ್ಕೆ ಸಂಬಂಧಿಸಿ 3 ಪ್ರಕರಣ, ಮೊಬೈಲ್‌ ಪೋನ್‌ ಬಳಕೆಗೆ ಸಂಬಂ ಧಿಸಿ 205 ಪ್ರಕರಣ, ಫ‌ುಟ್‌ಪಾತ್‌ ಮೇಲೆ ಬೈಕ್‌ ಸವಾರಿ ಮಾಡಿರುವ ಸಂಬಂಧವಾಗಿ 8 ಪ್ರಕ ರಣ, ಕರ್ಕಶ ಹಾರ್ನ್ ಬಳಕೆಗೆ ಸಂಬಂಧಿಸಿ 34 ಪ್ರಕರಣ, ನಿರ್ಲಕ್ಷ್ಯದ ಚಾಲನೆಗೆ ಸಂಬಂಧಿಸಿ 147 ಪ್ರಕರಣ ಸಹಿತ ಒಟ್ಟು 16,448 ಪ್ರಕರ ಣಗಳನ್ನು ದಾಖಲಿಸಿ 61, 42,400 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.