ಕುತೂಹಲಕಾರಿ ಕಥೆ ಹೇಳಲು ರೆಡಿಯಾದ ನಿರೂಪ್ ಭಂಡಾರಿ;ಜೂ.6ಕ್ಕೆ ವಿಂಡೋ ಸೀಟ್‌ ಟ್ರೈಲರ್ ಬಿಡುಗಡೆ

ವಿಂಡೋ ಸೀಟ್ ಅಂದ್ರೆ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ನೆನಪುಗಳಿರುತ್ತವೆ, ಕಥೆಗಳಿರುತ್ತವೆ.

Team Udayavani, Jun 3, 2022, 2:34 PM IST

ಕುತೂಹಲಕಾರಿ ಕಥೆ ಹೇಳಲು ರೆಡಿಯಾದ ನಿರೂಪ್ ಭಂಡಾರಿ;ಜೂ.6ಕ್ಕೆ ವಿಂಡೋ ಸೀಟ್‌ ಟ್ರೈಲರ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಈಗಂತೂ ಭಿನ್ನ ವಿಭಿನ್ನ ಟೈಟಲ್ ಹಾಗೂ ಚಿತ್ರಕತೆಗಳ ಸಿನಿಮಾಗಳು ಮೂಡಿಬರ್ತಿವೆ. ಅದೇ ಸಾಲಿಗೆ ಸೇರುವ ಮತ್ತೊಂದು ವಿಭಿನ್ನ ಕಥಾಹಂದರದ ಸಿನಿಮಾ ವಿಂಡೋ ಸೀಟ್. ಶೀತಲ್ ಶೆಟ್ಟಿ ನಿರ್ದೇಶನದ ಚೊಚ್ಚಲ ಸಿನಿಮಾ ಇದು. ಹೀಗಾಗಿ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ. ನಿರೂಪ್ ಭಂಡಾರಿ, ನಟಿಯರಾದ ಅಮೃತಾ ಅಯ್ಯಂಗಾರ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿರುವ ವಿಂಡೋ ಸೀಟ್ ಸಿನಿಮಾ ಟೈಟಲ್ ಫಿಕ್ಸ್ ಆದ ದಿನದಿಂದ್ಲೂ ತನ್ನದೇ ಆದ ವಿಶೇಷತೆಗಳಿಂದ ಸಿನಿ ಪ್ರಿಯರ ಗಮನ ಸೆಳೆಯುತ್ತಿದೆ. ಈಗಾಗ್ಲೇ ಹೊರಬಂದಿರೋ ಚಿತ್ರದ ಟೀಸರ್, ಹಾಡು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ಸದ್ಯ ಚಿತ್ರದ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಹೌದು, ಟೀಸರ್, ಸಾಂಗ್ಸ್ ನೋಡಿ ಖುಷಿ ಪಟ್ಟಿದ್ದ ಪ್ರೇಕ್ಷಕರು ವಿಂಡೋಸೀಟ್ ಚಿತ್ರದ ಟ್ರೈಲರ್ ನ್ನು ಕಣ್ತುಂಬಿಕೊಳ್ಳಲು ಕಾಯ್ತಿದ್ದಾರೆ. ಸದ್ಯ ಚಿತ್ರತಂಡ ಚಿಕ್ಕದೊಂದು ಸೊಗಸಾದ ಪ್ರೋಮೋ ರಿವೀಲ್ ಮಾಡಿದ್ದು ಆ ಮೂಲಕ ತಮ್ಮ ಸಿನಿಮಾದ ಟ್ರೈಲರ್ ರಿಲೀಸ್ ಡೇಟ್ ನ್ನು ತಿಳಿಸಿದೆ. ಜೂನ್ 6ಕ್ಕೆ ವಿಂಡೋ ಸೀಟ್ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ. ಅಂದಹಾಗೆ ನಿರೂಪ್ ಭಂಡಾರಿ ಅವರ ಭಾವನಾತ್ಮಕ ನಿರೂಪಣೆಯ ಈ ಪ್ರೋಮೋ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತೆ.

ವಿಂಡೋ ಸೀಟ್ ಅಂದ್ರೆ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ನೆನಪುಗಳಿರುತ್ತವೆ, ಕಥೆಗಳಿರುತ್ತವೆ. ಆದ್ರೆ ವಿಂಡೋ ಸೀಟ್ ಅನ್ನೋ ಟೈಟಲ್ ನಲ್ಲೇ ಮೂಡಿಬರ್ತಿರುವ ಈ ಚಿತ್ರದಲ್ಲಿ ಏನೆಲ್ಲಾ ಕುತೂಹಲಕಾರೀ ವಿಚಾರಗಳಿರುತ್ತವೆ ಅನ್ನೋದನ್ನು ಟ್ರೈಲರ್ ನಲ್ಲಿ ತಿಳಿಸಲಿದೆ ಚಿತ್ರತಂಡ. ಆ ಟ್ರೈಲರ್ ಹೇಗಿರಲಿದೆ ಅನ್ನೋದ್ರ ಚಿಕ್ಕ ಝಲಕ್ ಈ ಪ್ರೋಮೋ. ಚಿತ್ರದ ನಾಯಕ ರಘು ವಿಂಡೋ ಸೀಟ್ ಕಹಾನಿಯಲ್ಲಿ ನಗು, ಅಳು, ನ್ಯಾಯಕ್ಕಾಗಿ ಹೋರಾಟ, ಪ್ರೀತಿ ಈ ಎಲ್ಲದರ ಸಮ್ಮಿಶ್ರಣವಿದೆ ಅಂದ್ಮೇಲೆ ಸಿನಿಮಾದಲ್ಲಿ ಸಂತಿಂಗ್ ಸ್ಪೆಷಾಲಿಟಿ ಇದೆ ಅನ್ನೋದ್ರಲ್ಲಿ ಸಂದೇಹವಿಲ್ಲ.

ತಮ್ಮದೇ ಶೈಲಿಯ ನಿರೂಪಣೆ ಮೂಲಕ ಜನಪ್ರಿಯರಾಗಿದ್ದ ಶೀತಲ್ ಶೆಟ್ಟಿ ಸಿನಿಮಾ ಫೀಲ್ಡ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ರು. ನಟಿಯಾಗಿಯೂ ಸೈ ಅನ್ನಿಸಿಕೊಂಡ ಶೀತಲ್ ಗೆ ಹೆಚ್ಚು ಒಲವಿದ್ದದ್ದು ನಿರ್ದೇಶನದಲ್ಲಿ. ಹೀಗಾಗಿ ಸಂಗಾತಿ ಮತ್ತು ಕಾರು ಅನ್ನೋ ಎರಡು ಕಿರುಚಿತ್ರಗಳನ್ನು ಡೈರೆಕ್ಟ್ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸಿದ್ರು. ಇದೀಗ ವಿಂಡೋ ಸೀಟ್ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದಾರೆ. ಅಂದಹಾಗೆ ಕೆಎಸ್ ಕೆ ಬ್ಯಾನರ್ ನಲ್ಲಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಂಡೋ ಸೀಟ್ ಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಸಾಗರದ ಸುಂದರ ತಾಣಗಳಲ್ಲಿ ಈ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸದ್ಯ ಹೊರಬಂದಿರೋ ಪ್ರೋಮೋ ಟ್ರೈಲರ್ ಬಗ್ಗೆ ಪ್ರೇಕ್ಷಕರ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.