ಐಎಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರಿಕೆ
Team Udayavani, Sep 13, 2019, 10:33 PM IST
ಬೆಂಗಳೂರು: ಕಂದಾಯ ಇಲಾಖೆಯ ಸರ್ವೇ ಮತ್ತು ಭೂ ದಾಖಲೆ ಇಲಾಖೆ ಆಯುಕ್ತರ ಹುದ್ದೆಗೆ ಇತ್ತೀಚೆಗಷ್ಟೇ ವರ್ಗಾವಣೆಗೊಂಡಿದ್ದ ಡಾ.ಎಂ.ಟಿ. ರೇಜು ಅವರನ್ನು ಮತ್ತೆ ಸರ್ವ ಶಿಕ್ಷಾ ಅಭಿಯಾನದ ರಾಜ್ಯ ಸಂಯೋಜಕ ನಿರ್ದೇಶಕ ಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಮೆರಟೈಮ್ ಬೋರ್ಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ಹೆಚ್ಚುವರಿಯಾಗಿ ಸರ್ವೇ ಮತ್ತು ಭೂ ದಾಖಲೆ ಇಲಾಖೆ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ.
ವಿ. ಮಂಜುಳಾ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಜತೆಗೆ ಹೆಚ್ಚುವರಿಯಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಆಡಳಿತ ಸುಧಾರಣೆ ತರಬೇತಿ ಮತ್ತು ರಾಜಕೀಯ ಪಿಂಚಣಿ) ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ.
ಡಾ.ಎಸ್.ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕಾರ್ಯದರ್ಶಿ ಹುದ್ದೆ ಜತೆಗೆ ಹೆಚ್ಚುವರಿಯಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಯನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದೆ.