ಸರಕಾರ ಅತಂತ್ರದಲ್ಲೂ ವರ್ಗಾವಣೆಯ ಸುಗ್ಗಿ


Team Udayavani, Jul 17, 2019, 5:57 AM IST

transfar

ಬೆಂಗಳೂರು: ರಾಜ್ಯದಲ್ಲಿನ ಅತಂತ್ರ ರಾಜಕೀಯ ಬೆಳವಣಿಗೆಯ ನಡುವೆಯೇ ಸಾರಿಗೆ ಇಲಾಖೆಯಲ್ಲಿ ಮಾತ್ರ ಸಚಿವರು ದಾಖಲೆ ಪ್ರಮಾಣದಲ್ಲಿ ವರ್ಗಾವಣೆ ಮಾಡುತ್ತಿದ್ದಾರೆ!

ಎರಡು ವಾರಗಳಲ್ಲಿ ಈ ಇಲಾಖೆಯೊಂದರಲ್ಲಿ 250ಕ್ಕೂ ಅಧಿಕ ವರ್ಗಾವಣೆಗಳಾಗಿವೆ. ಸರಕಾರ ಅಸ್ಥಿರಗೊಳ್ಳು ತ್ತಿರುವ ಬೆನ್ನಲ್ಲೇ ಸಾರಿಗೆ ಇಲಾಖೆಯಲ್ಲಿ ವರ್ಗಾವಣೆ ಚಟುವಟಿಕೆಗಳು ಗರಿಗೆದರಿದ್ದು, ಈ ಸಂಬಂಧದ ದಾಖಲೆಗಳು “ಉದಯವಾಣಿ’ಗೆ ಲಭ್ಯವಾಗಿವೆ.

11 ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆಸದ ಸಾರಿಗೆ ಇಲಾಖೆ, ಕಳೆದ ವರ್ಷವಷ್ಟೇ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಸಿದ್ಧತೆ ನಡೆಸಿತ್ತು. ಇದರಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಅಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ಉನ್ನತ ಅಧಿಕಾರಿಗಳು ತಯಾರಿ ಕೂಡ ನಡೆಸಿದ್ದರು. ಇದರ ಮೊದಲ ಭಾಗವಾಗಿ ಸುಮಾರು ಒಂದು ಸಾವಿರ ನೌಕರರು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಆಯ್ಕೆಯಾಗಿದ್ದರು. ಅಷ್ಟರಲ್ಲಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಿತು. ಇದರ ಬೆನ್ನಲ್ಲೇ ಸಾರಿಗೆ ಇಲಾಖೆಗೆ ನೂತನ ಸಾರಥಿಯಾಗಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅಧಿಕಾರದ ಚುಕ್ಕಾಣಿ ಹಿಡಿದರು.

ಈ ಮಧ್ಯೆ ನೂತನ ಸಚಿವರು ಮತ್ತು ಐಎಎಸ್‌ ಅಧಿಕಾರಿಗಳ ನಡುವೆ ಶುರುವಾದ ಶೀತಲ ಸಮರ ಆ ಅಧಿಕಾರಿಗಳ ಎತ್ತಂಗಡಿಯಲ್ಲಿ ಸಮಾಪ್ತಿಯಾಗಿತ್ತು. ಜತೆಗೆ ಅಂದಿನ ವರ್ಗಾವಣೆ ಪ್ರಕ್ರಿಯೆ ಕೂಡ ಮೂಲೆಗುಂಪಾಗಿತ್ತು.

ಇಲಾಖೆಯಲ್ಲಿ ಕೊನೆಯದಾಗಿ ವರ್ಗಾವಣೆ ಪ್ರಕ್ರಿಯೆ ನಡೆದದ್ದು 2008ರ ಎಪ್ರಿಲ್‌ನಲ್ಲಿ. ಅನಂತರದಿಂದ ಈವರೆಗೂ ಇಲಾಖೆ ಮೂಲಕ ಅಧಿಕೃತವಾಗಿ ಯಾವುದೇ ವರ್ಗಾವಣೆ ನಡೆದಿರಲಿಲ್ಲ. ಸದ್ಯ ತರಾತುರಿಯಲ್ಲಿ ವರ್ಗಾವಣೆಯಾಗಿರುವ 250 ಸಿಬಂದಿಯ ಪೈಕಿ 70ಕ್ಕೂ ಅಧಿಕ ಮಂದಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ್ದಾರೆ. ಇದರಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಅವರ ಶಿಫಾರಸುಗಳೇ ಅಧಿಕ ಎಂದು ದಾಖಲೆಗಳಲ್ಲಿ ಉಲ್ಲೇಖೀಸಲಾಗಿದೆ.

ಬಿಎಂಟಿಸಿಯಿಂದ ಬೇಡಿಕೆ ಹೆಚ್ಚು
ಬಿಎಂಟಿಸಿ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದಾಗಿ ಇಲ್ಲಿನ ಸಿಬಂದಿ ಲಾಭದಲ್ಲಿ ಮುಂದು ವರಿಯುತ್ತಿರುವ ಕೆಎಸ್‌ಆರ್‌ಟಿಸಿ ಮತ್ತು ಈಶಾನ್ಯ ಸಂಸ್ಥೆಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸುತ್ತಿದ್ದಾರೆ. ಬಿಎಂಟಿಸಿ ತಮ್ಮ ಸಿಬಂದಿಯ ಪಿಎಫ್, ಎಲ್‌ಐಸಿ ಮತ್ತು ಮೆಡಿಕಲ್‌ ಬಿಲ್‌ಗ‌ಳನ್ನು ಪಾವತಿ ಮಾಡಲಾಗದಂಥ ಪರಿಸ್ಥಿತಿಗೆ ಬಂದಿದೆ. ಹಾಗಾಗಿ ಇಲ್ಲಿಂದ ಅತೀ ಹೆಚ್ಚು ವರ್ಗಾವಣೆ ಅರ್ಜಿಗಳು ಬಂದಿವೆ.

ಸಾರಿಗೆ ಇಲಾಖೆಯಲ್ಲಿ ಒಂದು ವಾರದಿಂದ 250ರಿಂದ 300 ಚಾಲಕ, ನಿರ್ವಾಹಕ ಮತ್ತು ಮೆಕ್ಯಾನಿಕ್‌ಗಳ ವರ್ಗಾವಣೆ ನಡೆದಿದೆ. ಯಾವುದೇ ಪತ್ರಿಕಾ ಪ್ರಕಟನೆ ಹೊರಡಿಸದೆ ಸಚಿವರು ಅಕ್ರಮವಾಗಿ ವರ್ಗಾವಣೆ ದಂಧೆ ನಡೆಸುತಿದ್ದಾರೆ.
-ಯೋಗೇಶ್‌ , ಆರ್‌ಟಿಐ ಕಾರ್ಯಕರ್ತ

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.