ಮೈತ್ರಿ ಸರ್ಕಾರವಿದೆ ಎಂದು ಸತ್ಯ ತಿರುಚಬೇಕಾ: ಸಿದ್ದರಾಮಯ್ಯ ಪ್ರಶ್ನೆ
Team Udayavani, Jun 28, 2019, 3:20 PM IST
ಬಾಗಲಕೋಟೆ: ಅಹಿಂದ ಸಂಘಟನೆ ಮಾಡಿದ್ದಕ್ಕಾಗಿ ಜೆಡಿಎಸ್ನಿಂದನನ್ನನ್ನು ಹೊರ ಹಾಕಿದರು ಎಂದು ಅಮರೇಗೌಡ ಬಯ್ಯಾಪುರ ಅವರು ಹೇಳಿರುವುದು ಸತ್ಯ. ಮೈತ್ರಿ ಸರ್ಕಾರವಿದೆ ಎಂದು ಸತ್ಯವನ್ನು ತಿರುಚಬೇಕಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶುಕ್ರವಾರ ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಈಗ ಕಾಂಗ್ರೆಸ್ನಲ್ಲಿದ್ದೇನೆ. ಪಕ್ಷದ ಮೂಲಕವೆ ಅಹಿಂದ ಸಂಘಟಿಸುತ್ತೇನೆ. ಸಮನ್ವಯ ಸಮಿತಿ ಅಧ್ಯಕ್ಷನಾಗಿದ್ದು, ಪ್ರತ್ಯೇಕ ಸಂಘಟನೆ ಮಾಡುವುದಿಲ್ಲ ಎಂದರು.
ಮಾಧ್ಯಮಗಳ ವಿರುದ್ಧ ಕಿಡಿ
ನಾನು ಕೆಲಸ ಮಾಡುವವವರಿಗೆ ಮತ ಹಾಕಿ , ಕೆಲಸ ಮಾಡದವರಿಗೆ ಮತ ಹಾಕಬೇಡಿ ಎಂದಿದ್ದೆ ಆದರೆ ಮಾಧ್ಯಮದವರು ಆ ಹೇಳಿಕೆಯನ್ನು ಕುಮಾರಸ್ವಾಮಿ ಅವರ ಹೇಳಿಕೆಗೆ ಲಿಂಕ್ ಮಾಡಿದ್ದೀರಿ .ನಾನು ಹೇಳಿದ ರೀತಿಯಲ್ಲಿ ಪ್ರಸಾರ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ರಾಜ್ಯದಲ್ಲಿ ಆಪರೇಷನ್ ಕಮಲ ಸಾಧ್ಯವಿಲ್ಲ. ಬಿಜೆಪಿಯವರಿಗೇ ಆಪರೇಷನ್ ಮಾಡಬೇಕು ಎಂದರು.
ಬಾದಾಮಿ ಪಟ್ಟಣ ಪ್ರದಕ್ಷಿಣೆ ನಡೆಸಿ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ