ಮೊದಲ ಬಾರಿಗೆ ತುಳುಚಿತ್ರರಂಗಕ್ಕೆ ಮನೋಮೂರ್ತಿ; ಏ.29ರಂದು ಮಗನೇ ಮಹಿಷ ತುಳು ಚಿತ್ರ ಬಿಡುಗಡೆ
ಬಿ.ಜಯಶ್ರೀಯವರು ಕೂಡಾ ಮೊದಲ ಬಾರಿಗೆ ಕೋಸ್ಟಲ್ ವುಡ್ ಸಿನಿಮಾದಲ್ಲಿ ಹಾಡನ್ನು ಹಾಡಿರುವುದು ವಿಶೇಷತೆಯಾಗಿದೆ
Team Udayavani, Mar 5, 2022, 3:55 PM IST
ಮಂಗಳೂರು: ಚಾಲಿ ಪೋಲಿಲು ತುಳು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಿದ್ದ ವೀರೇಂದ್ರ ಶೆಟ್ಟಿಯವರು ಸ್ಯಾಂಡಲ್ ವುಡ್ ನಲ್ಲಿ ತಮ್ಮ ಛಾಪನ್ನು ಮೂಡಿಸಿದ್ದು ಇದೀಗ ಏಳು ವರ್ಷಗಳ ಬಳಿಕ “ಮಗನೇ ಮಹಿಷ” ಎಂಬ ತುಳು ಚಿತ್ರದ ಮೂಲಕ ಸಿನಿ ಪ್ರಿಯರನ್ನು ರಂಜಿಸಲು ಸಜ್ಜಾಗಿದ್ದಾರೆ.
ವೀರೇಂದ್ರ ಶೆಟ್ಟಿಯವರ ಎರಡನೇ ತುಳು ಚಿತ್ರ ಮಗನೇ ಮಹಿಷ ಏಪ್ರಿಲ್ 29ರಂದು ತೆರೆ ಕಾಣಲು ಸಿದ್ಧವಾಗಿದೆ. ಈ ಬಾರಿಯೂ ಹಲವು ವೈಶಿಷ್ಟ್ಯತೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಮಗನೇ ಮಹಿಷ ಚಿತ್ರದಲ್ಲಿ ಕನ್ನಡದ ಹೆಸರಾಂತ ಸಂಗೀತ ನಿರ್ದೇಶಕ ಮನೋ ಮೂರ್ತಿ ಅವರು ಪ್ರಥಮ ಬಾರಿಗೆ ತುಳು ಚಿತ್ರದಲ್ಲಿ ಸಂಗೀತ ನಿರ್ದೇಶಿಸಿದ್ದಾರೆ. ಅಷ್ಟೇ ಅಲ್ಲ ಬಿ.ಜಯಶ್ರೀಯವರು ಕೂಡಾ ಮೊದಲ ಬಾರಿಗೆ ಕೋಸ್ಟಲ್ ವುಡ್ ಸಿನಿಮಾದಲ್ಲಿ ಹಾಡನ್ನು ಹಾಡಿರುವುದು ವಿಶೇಷತೆಯಾಗಿದೆ.
ವೀರೇಂದ್ರ ಶೆಟ್ಟಿಯವರ ಕಥೆ, ಚಿತ್ರಕಥೆ, ನಿರ್ದೇಶನದ ಮಗನೇ ಮಹಿಷ ಚಿತ್ರದಲ್ಲಿ ಕೋಸ್ಟಲ್ ವುಡ್ ನ ನಟ, ನಟಿಯರು, ನಿರ್ದೇಶಕರು ಸೇರಿದಂತೆ ನೂರು ಮಂದಿ ಕಲಾವಿದರು ಒಂದು ಹಾಡಿನಲ್ಲಿ ಜತೆಗೂಡುತ್ತಿರುವುದು ಇದೇ ಪ್ರಥಮ ಬಾರಿಗೆ ಎಂಬುದು ವಿಶೇಷತೆಯಾಗಿದೆ.
ಈಗಾಗಲೇ ಮಗನೇ ಮಹಿಷ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜು ವಾಮಂಜೂರು, ಅರವಿಂದ್ ಬೋಳಾರ್ ಹಾಗೂ ಶಿವಧ್ವಜ ಶೆಟ್ಟಿ, ಜ್ಯೋತಿ ರೈ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.
ತುಳುವಿನ ಚಾಲಿ ಪೋಲಿಲು ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ವೀರೇಂದ್ರ ಶೆಟ್ಟಿ ಕಾವೂರ್ ಅವರು ಕನ್ನಡದ ಸವರ್ಣ ದೀರ್ಘ ಸಂಧಿ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲಿಯೂ ಹೆಸರು ಗಳಿಸಿದ್ದರು.
2014ರಲ್ಲಿ ತೆರೆಕಂಡಿದ್ದ ಚಾಲಿ ಪೋಲಿಲು ತುಳು ಸಿನಿಮಾ ತುಳು ಚಲನಚಿತ್ರೋದ್ಯಮದಲ್ಲಿ ಸುಮಾರು 500 ದಿನಗಳ ಕಾಲ ದೀರ್ಘ ಪ್ರದರ್ಶನ ಕಂಡ ಚಿತ್ರವಾಗಿದೆ. ಅಂದಹಾಗೆ ಚಾಲಿ ಪೋಲಿಲು ಸಿನಿಮಾ ತೆರೆಕಂಡ ಏಳು ವರ್ಷದ ನಂತರ ಇದೀಗ ಬಿಡುಗಡೆಗೆ ಸಜ್ಜಾಗಿರುವ ಮಗನೇ ಮಹಿಷ ತುಳು ಚಿತ್ರದಲ್ಲಿ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಪಡೀಲ್ ಮತ್ತೆ ಒಂದೇ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!