ಬಿಪಿಎಲ್‌ ಕನ್ನಭಾಗ್ಯ!; ಇಪ್ಪತ್ತು ಲಕ್ಷ “ಬೋಗಸ್‌’ ಹೆಸರುಗಳು ಪತ್ತೆ

ಇ-ಕೆವೈಸಿಯಿಂದ ಬಹಿರಂಗಗೊಂಡ ನೈಜತೆ

Team Udayavani, Jan 23, 2020, 6:30 AM IST

led-21

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯದಡಿ ಅನ್ನಭಾಗ್ಯ ಪಡೆಯುತ್ತಿರುವ ಕಾರ್ಡ್‌ಗಳಲ್ಲಿರುವ ಹೆಸರುಗಳ ಪೈಕಿ “ಬೋಗಸ್‌’ ಹೆಸರುಗಳು ಸುಮಾರು ಇಪ್ಪತ್ತು ಲಕ್ಷ!

ಬಿಪಿಎಲ್‌, ಎಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಕಾರ್ಡ್‌ದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ (ಆಧಾರ್‌ ಜೋಡಣೆ) ಮಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಈ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಮೃತಪಟ್ಟವರು, ಮದುವೆ ಅನಂತರ ತವರು ಮನೆ ಬಿಟ್ಟವರು, ಮನೆ ಬದಲಾಯಿಸಿದವರ ಹೆಸರುಗಳು ಇನ್ನೂ ಕಾರ್ಡ್‌ಗಳಲ್ಲಿರುವುದು ಬಯಲಾಗಿದೆ.

ಇ-ಕೆವೈಸಿ ಪ್ರಕ್ರಿಯೆ ಪ್ರಾರಂಭಗೊಂಡು ಐದು ತಿಂಗಳು ಕಳೆದರೂ ಇದುವರೆಗೂ ಶೇ.50ರಷ್ಟು ಪೂರ್ಣಗೊಂಡಿಲ್ಲ. ಇದುವರೆಗಿನ ಪ್ರಕ್ರಿಯೆಯಲ್ಲೇ ಹತ್ತು ಲಕ್ಷದಷ್ಟು ಮೃತಪಟ್ಟಿರುವವರು, ಮದುವೆ ಅನಂತರ ತವರು ಮನೆ ಬಿಟ್ಟವರ ಹೆಸರುಗಳು ರದ್ದುಗೊಂಡಿವೆ.

ಈ ಹಿಂದೆ ಜ. 31ರೊಳಗೆ ಇ-ಕೆವೈಸಿ ಮಾಡಿಸಲು ಗಡುವು ನೀಡಲಾಗಿತ್ತಾದರೂ ಅದನ್ನು ಮಾ. 31ರವರೆಗೆ ವಿಸ್ತರಿಸಲಾಗಿದೆ. ಅನಂತರವೂ ಇ-ಕೆವೈಸಿ ಮಾಡಿಸದ ಕುಟುಂಬಗಳಿಗೆ ಪಡಿತರ ನಿಲ್ಲಿಸಲು ಇಲಾಖೆ ತೀರ್ಮಾನಿಸಿದೆ. ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ 20 ಲಕ್ಷ ಹೆಸರುಗಳು ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲದವರ ಹೆಸರಿನಲ್ಲಿ ಪಡೆಯುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಿದರೆ ಇಲಾಖೆಗೆ ಇದರಿಂದ ವಾರ್ಷಿಕ ಸುಮಾರು 400 ಕೋಟಿ ರೂ.ನಷ್ಟು ಉಳಿಕೆಯಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಎಪಿಎಲ್‌ ಆಗಿದ್ದರೂ ಬಿಪಿಎಲ್‌
ಎಪಿಎಲ್‌ ಕುಟುಂಬ ಆಗಿದ್ದರೂ ಪ್ರಭಾವಿಗಳ ಒತ್ತಡದಿಂದ ಬಿಪಿಎಲ್‌ ಕಾರ್ಡ್‌ ಪಡೆದಿರುವ ಪ್ರಕರಣಗಳು ಸಾಕಷ್ಟು ಪತ್ತೆಯಾಗಿದ್ದು ಅವುಗಳ ಪತ್ತೆಗೂ ಇಲಾಖೆ ಮುಂದಾಗಿದೆ. ಇದೇ ಕಾರಣಕ್ಕೆ ಕಂದಾಯ ಹಾಗೂ ಸಾರಿಗೆ ಇಲಾಖೆ ನೆರವು ಪಡೆಯಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಕಾರ್ಡ್‌ಗಳಲ್ಲಿ ಹೆಸರುಗಳಿದ್ದರೂ ಜೀವಂತ ಇಲ್ಲದೆ ಇರುವುದು ಹಾಗೂ ಮದುವೆ ಅನಂತರ ತವರು ಮನೆ ಬಿಟ್ಟಿರುವುದು. ಬೇರೆ ಊರಿನಲ್ಲಿ ನೆಲೆಸಿದ್ದರೂ ಅಲ್ಲಿ ಮತ್ತೂಂದು ಕಾರ್ಡ್‌ ಮಾಡಿಸಿಕೊಂಡಿದ್ದರೂ ಇಲ್ಲೂ ಹೆಸರು ಇರುವ ಪ್ರಕರಣಗಳು ಪತ್ತೆಯಾಗುತ್ತಿವೆ.ಮತ್ತೂಂದೆಡೆ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಇ-ಕೆವೈಸಿ ಜೋಡಣೆ ಪ್ರಕ್ರಿಯೆಗೆ ಗ್ರಾಮಿಣ ಭಾಗದಲ್ಲಿ ತೊಂದರೆಯಾಗುತ್ತಿರುವುದರಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಕುಟುಂಬದಲ್ಲಿ ಇಲ್ಲದವರ ಹೆಸರುಗಳು ಪಡಿತರ ಕಾರ್ಡ್‌ಗಳಲ್ಲಿ ಇರುವುದು ನಿಜ. ಇ-ಕೆವೈಸಿ ಪ್ರಕ್ರಿಯೆ ಅನಂತರ ಮೃತಪಟ್ಟವರು, ಮದುವೆ ಅನಂತರ ತವರು ಮನೆ ಬಿಟ್ಟವರು ಸೇರಿ ಲಕ್ಷಾಂತರ ಹೆಸರುಗಳನ್ನು ಕಾರ್ಡ್‌ ನಿಂದ ಡಿಲೀಟ್‌ ಮಾಡಲಾಗಿದೆ.
– ಶಶಿಕಲಾ ಜೊಲ್ಲೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ

 ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.