ಮುಂದುವರಿದ ರಾಜೀನಾಮೆ ಪರ್ವ;ಸಚಿವ ಎಂಟಿಬಿ,ಸುಧಾಕರ್ ರಿಸೈನ್
ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ, ಸ್ಪೀಕರ್ ಕಚೇರಿಯಲ್ಲಿ ತಳ್ಳಾಟ, ನೂಕಾಟ, ತೀವ್ರ ವಾಗ್ವಾದ
Team Udayavani, Jul 10, 2019, 4:58 PM IST
ಬೆಂಗಳೂರು : 13 ಶಾಸಕರ ರಾಜೀನಾಮೆ ಬಳಿಕ ಮೈತ್ರಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಮತ್ತೆ ಇಬ್ಬರು ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಸ್ಪೀಕರ್ ಕಚೇರಿಗೆ ಆಗಮಿಸಿದ ಹೊಸಕೋಟೆ ಶಾಸಕ , ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಅವರು ರಾಜೀನಾಮೆ ನೀಡಿದ್ದಾರೆ.
ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಹೈಡ್ರಾಮಾ
ರಾಜೀನಾಮೆ ನೀಡಿದ ಸುಧಾಕರ್ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ದಿನೇಶ್ ಗುಂಡೂರಾವ್ ಮತ್ತಿತರ ಮುಖಂಡರು ಸುತ್ತುವರಿದು ಆಕ್ರೋಶ ಹೊರ ಹಾಕಿದರು. ಸುಧಾಕರ್ ಅವರನ್ನು ಎಳೆದಾಡಿದರು.ಸುಧಾಕರ್ ಅವರನ್ನು ಸಚಿವ ಜಾರ್ಜ್ ಅವರ ಕೊಠಡಿಗೆ ಕರೆದೊಯ್ದು ಸಂಧಾನಕ್ಕೆ ಯತ್ನಿಸಲಾಯಿತು. ಸಿದ್ದರಾಮಯ್ಯ ಅವರು ಎದುರು ಸುಧಾಕರ್ ಅವರನ್ನು ಕರೆದೊಯ್ಯುತ್ತಿದ್ದಾರೆ.
ಯಾವುದೇ ರಾಜೀನಾಮೆ ಅಂಗೀಕರಿಸಿಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್, ನಾನು ಯಾವುದೇ ರಾಜೀನಾಮೆಯನ್ನು ಅಂಗೀಕರಿಸಿಲ್ಲ. ರಾತ್ರಿ ಬೆಳಗಾಗುವುದರ ಒಳಗೆ ನಾನಿದನ್ನು ಮಾಡಲಾಗುವುದಿಲ್ಲ. ಜೂನ್ 17 ರ ವರೆಗೆ ಸಮಯಾವಕಾಶ ನೀಡಿದ್ದೇನೆ. ನಿಯಮಾವಳಿಗಳ ಪ್ರಕಾರ ನಾನು ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಕ್ರಮಬದ್ಧವಾಗಿಲ್ಲದ ನಾಮಪತ್ರಗಳನ್ನು ಮಾತ್ರ ನಾನು ತಿರಸ್ಕರಿಸಿದ್ದೇನೆ ಎಂದರು.
ಇಬ್ಬರ ರಾಜೀನಾಮೆಯಿಂದ ಒಟ್ಟು 12 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಂತಾಗಿದೆ. ಮೂವರು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ