ಮಾನಭಂಗ ಪ್ರಕರಣ: ಅಪರಾಧಿಗೆ ಎರಡು ವರ್ಷ ಜೈಲು, ದಂಡ
Team Udayavani, Apr 11, 2022, 5:30 AM IST
ಸುಳ್ಯ: ಮಾನಸಿಕ ಅಸ್ವಸ್ಥೆಯ ಮಾನಭಂಗ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನ್ಯಾಯಾಲಯ ಅಪರಾಧಿಗೆ ಎರಡು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ತೆರುವಂತೆ ಆದೇಶಿಸಿದೆ.
ಬಾಳಿಲ ಗ್ರಾಮದ ಕಾಂಚೋಡು ಎಂಬಲ್ಲಿ 2015ರ ಜ. 11ರಂದು ಮಾನಸಿಕ ಅಸ್ವಸ್ಥರಾಗಿದ್ದ 28 ವರ್ಷದ ಮಹಿಳೆ ಒಬ್ಬರೇ ಮನೆಯಲ್ಲಿದ್ದ ವೇಳೆ ಕಳಂಜ ಗ್ರಾಮದ ಕೋಟೆ ಮುಂಡುಗಾರು ನಿವಾಸಿ ಸುಬ್ರಹ್ಮಣ್ಯ ಎಂಬಾತ ಮಾನಭಂಗ ಮಾಡಿ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್ಐ ಚಂದ್ರಶೇಖರ್ ಕೋರ್ಟ್ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ಅವರು ಅಪರಾಧಿಗೆ ಎರಡು ವರ್ಷ ಸಾದಾ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ಎಪಿಪಿ ಜನಾರ್ದನ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ