ಮಾನ್ಯ : ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು
Team Udayavani, Jul 31, 2019, 5:11 PM IST
ಕಾಸರಗೋಡು: ಇಲ್ಲಿನ ಬದಿಯಡ್ಕ ಗ್ರಾಮ ಪಂಚಾಯಿತಿಗೊಳಪಟ್ಟ ಮಾನ್ಯ ಎಂಬಲ್ಲಿ ಈಜಲೆಂದು ಕೆರೆಗೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಆಲಂಪಾಡಿ ಬಾಪಚ್ಚಿ ನಗರದ ಶಾಫಿ ಅವರ ಪುತ್ರ ಖಾದರ್ (18) ಮತ್ತು ಬೆಳ್ಳೂರಡ್ಕ ಮಹಮ್ಮದ್ ಅವರ ಪುತ್ರ ಸಾಲಿ (17) ಎಂದು ಗುರುತಿಸಲಾಗಿದೆ. ಕರ್ಕಡ ಅಮವ್ಯಾಸೆ ಪ್ರಯುಕ್ತ ಇಂದು ಕೇರಳದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಇದ್ದ ಕಾರಣ ಒಟ್ಟು 30 ಜನ ಯುವಕರ ತಂಡವು ಮಾನ್ಯ ಸಮೀಪ ಕೆರೆಯಲ್ಲಿ ಈಜಲು ಹೋಗಿದ್ದರು.
ಈ ಸಂದರ್ಭದಲ್ಲಿ ಖಾದರ್ ಹಾಗೂ ಸಾಲಿ ಆಯತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ