ಬೆಂಗಳೂರಿನಲ್ಲಿ ಸಿಲುಕಿದ್ದ ಮಂಗಳೂರು ಯುವತಿಯನ್ನು ಮನೆ ತಲುಪಿಸಿದ ಯು ಟಿ ಖಾದರ್
Team Udayavani, Apr 12, 2020, 4:20 PM IST
ಮಂಗಳೂರು: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಕರೆತಂದು ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮಂಗಳೂರಿನ ಮೂಲದ ಮಧುಶ್ರೀ ಎಂಬ ಯುವತಿ ಇಟಲಿಯಲ್ಲಿ ವಾಸವಾಗಿದ್ದರು. ಕೋವಿಡ್-19 ಹರಡುತ್ತಿರುವ ಕಾರಣ ಇಟಲಿಯಿಂದ ಮಾ.22ರಂದು ಕೊನೆಯ ವಿಮಾನದಲ್ಲಿ ಮಧುಶ್ರೀ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ನಂತರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮೊನ್ನೆ ರಾತ್ರಿ ದಿಲ್ಲಿಯಿಂದ ವಿಶೇಷ ಬಸ್ ಮೂಲಕ ಮಧುಶ್ರೀ ಬೆಂಗಳೂರು ತಲುಪಿದ್ದಳು.
ಆದರೆ ಬೆಂಗಳೂರು ತಲುಪಿದ ಮಧುಶ್ರೀಗೆ ಮಂಗಳೂರಿಗೆ ಬರುದಕ್ಕೆ ಬಸ್ ಅಥವಾ ಯಾವುದೇ ವ್ಯವಸ್ಥೆ ಇರಲಿಲ್ಲ. ನಂತರ ವಿಷಯ ತಿಳಿದ ಮಾಜಿ ಸಚಿವ ಯು.ಟಿ ಖಾದರ್, ಯುವತಿಯ ನೆರವಿಗೆ ಧಾವಿಸಿ ತನ್ನ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಕರೆ ತಂದು, ಮಧುಶ್ರೀ ಅವರ ಕುಳಾಯಿಯಲ್ಲಿ ಇರುವ ಮನೆಗೆ ತಲುಪಿಸಿದ್ದಾರೆ. ಖಾದರ್ ಅವರ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಹಳೆಯ ಸ್ಕೂಟರಲ್ಲಿ ದೇಶ ಸುತ್ತಿದ ತಾಯಿ-ಮಗ ಈಗ ದಕ್ಷಿಣಕನ್ನಡ ಯಾತ್ರೆಯಲ್ಲಿ !
ಕಡಬ : ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ ; ಆರೋಪಿಯ ಬಂಧನ