ಐಪಿಎಲ್‌ ಆತಿಥ್ಯಕ್ಕೆ ಮುಂದಾದ ಯುಎಇ

ಇದು ಅಸಾಧ್ಯ ಎಂಬ ತೀರ್ಮಾನಕ್ಕೆ ಬಂದಿರುವ ಬಿಸಿಸಿಐ

Team Udayavani, May 11, 2020, 5:45 AM IST

ಐಪಿಎಲ್‌ ಆತಿಥ್ಯಕ್ಕೆ ಮುಂದಾದ ಯುಎಇ

ಹೊಸದಿಲ್ಲಿ: ಕೋವಿಡ್‌-19 ಕಾರಣದಿಂದ ಈಗಾಗಲೇ ಬಹುತೇಕ ರದ್ದುಗೊಂಡಿರುವ 2020ನೇ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯ ವಹಿಸಲು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಕ್ರಿಕೆಟ್‌ ಮಂಡಳಿ (ಯುಎಇ) ಮುಂದೆ ಬಂದಿದೆ. ಆದರೆ ಈಗಿನ ಸ್ಥಿತಿಯಲ್ಲಿ ಬಿಸಿಸಿಐ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇಲ್ಲ.

ಯುಎಇಗಿಂತ ಮೊದಲು ಶ್ರೀಲಂಕಾ 13ನೇ ಐಪಿಎಲ್‌ ಕೂಟವನ್ನು ನಡೆಸಲು ಉಮೇದು ತೋರಿತ್ತು. ಆದರೆ ಸರಕಾರದ ನಿರ್ಬಂಧಗಳಿಂದಾಗಿ ಬಿಸಿಸಿಐ ಲಂಕಾ ಮಂಡಳಿಯ ನಿರ್ಧಾರವನ್ನು ಸಮ್ಮತಿಸಿರಲಿಲ್ಲ. ಈಗಲೂ ಪರಿಸ್ಥಿತಿ ಬದಲಾಗದ ಕಾರಣ ಯುಎಇ ಆಹ್ವಾನವನ್ನೂ ಸ್ವೀಕರಿಸುವ ಸ್ಥಿತಿಯಲ್ಲಿ ಬಿಸಿಸಿಐ ಇಲ್ಲ.

ಜೈವಿಕ ಸುರಕ್ಷಾ ಸ್ಟೇಡಿಯಂ
“ಈ ವರ್ಷದ ಐಪಿಎಲ್‌ ಪಂದ್ಯಾವಳಿಯ ಆಯೋಜನೆಗೆ ಯುಎಇ ಮುಂದೆ ಬಂದಿದೆ. ಆದರೆ ಸದ್ಯ ವಿದೇಶ ಪ್ರಯಾಣ ನಿರ್ಬಂಧ ಇರುವುದರಿಂದ ಇದು ಸಾಧ್ಯವಾಗದ ಮಾತು. ಹೀಗಾಗಿ ನಮ್ಮ ಮಂಡಳಿ ಇದನ್ನು ಒಪ್ಪುವ ಸ್ಥಿತಿಯಲ್ಲಿಲ್ಲ’ ಎಂದು ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಹೇಳಿದ್ದಾರೆ. ಅಲ್ಲದೇ ಐಪಿಎಲ್‌ ನಡೆಯುವುದಿದ್ದರೂ ಅದು ಭಾರತದಲ್ಲೇ ನಡೆಯಬೇಕು; ಹಾಗೆಯೇ ಪ್ರಸ್ತುತ ಭಾರತದಲ್ಲಿ ಬಹಳಷ್ಟು “ಕೆಂಪು ವಲಯ’ಗಳಿರುವುದರಿಂದ ಇದಕ್ಕಾಗಿ “ಜೈವಿಕ ಸುರಕ್ಷಾ ಸ್ಟೇಡಿಯಂ’ಗಳನ್ನು ಹುಡುಕಬೇಕಿದೆ ಎಂಬುದು ಬಿಸಿಸಿಐ ನಿರ್ಧಾರವಾಗಿದೆ.

ವಿದೇಶಗಳಲ್ಲಿ
ಐಪಿಎಲ್‌ ಹೊಸತಲ್ಲ
ವಿದೇಶಗಳಲ್ಲಿ ಐಪಿಎಲ್‌ ಪಂದ್ಯಾವಳಿಯ ಯೋಜನೆ ಹೊಸತೇನಲ್ಲ. ಈಗಾಗಲೇ ಎರಡು ಸಲ ಈ ಕೂಟ ಭಾರತದ ಹೊರಗೆ ನಡೆದಿದೆ. ಮಹಾ ಚುನಾವಣೆಯ ಕಾರಣ 2014ರ 20 ಪಂದ್ಯಗಳನ್ನು ಯುಎಇಯೇ ಆಯೋಜಿಸಿತ್ತು. ಇದಕ್ಕೂ ಮೊದಲು 2009ರ ಆತಿಥ್ಯ ದಕ್ಷಿಣ ಆಫ್ರಿಕಾ ಪಾಲಾಗಿತ್ತು.ಆದರೆ ಇಂದಿನ ಪರಿಸ್ಥಿತಿ ಸಂಪೂರ್ಣ ಭಿನ್ನ. ಅಂದು ಭದ್ರತಾ ಕಾರಣದಿಂದ ಐಪಿಎಲ್‌ ಭಾರತದಾಚೆ ನಡೆದಿತ್ತು. ಇಂದು ಕೋವಿಡ್ -19 ಮಹಾ ಮಾರಿ ಇಡೀ ವಿಶ್ವವನ್ನೇ ಆವರಿಸಿದೆ. ಹೀಗಾಗಿ ಮೊದಲು ಆಟಗಾರರ ಸುರಕ್ಷತೆಗೆ ಮಹತ್ವ ನೀಡಬೇಕು ಎಂಬುದಾಗಿ ಬಿಸಿಸಿಐ ಹೇಳಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.