ನೂಪುರ್ ಹೇಳಿಕೆಗೆ ಬೆಂಬಲ:ಮಹಾರಾಷ್ಟ್ರದಲ್ಲೂ ವ್ಯಕ್ತಿಯ ಹತ್ಯೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ
ಕನ್ನಯ್ಯ ಲಾಲ್ ನನ್ನು ಬರ್ಬರವಾಗಿ ಹತ್ಯೆಗೈಯುವ ಒಂದು ವಾರದ ಮೊದಲು ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು.
Team Udayavani, Jul 2, 2022, 2:33 PM IST
ನವದೆಹಲಿ: ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಮೆಡಿಕಲ್ ಶಾಪ್ ನ ಮಾಲೀಕರನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಶಾಲೆಗಳ ಅವ್ಯವಸ್ಥೆ: ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಎಚ್ ಡಿಕೆ
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ನನ್ನು ಬರ್ಬರವಾಗಿ ಹತ್ಯೆಗೈಯುವ ಒಂದು ತಿಂಗಳ ಮೊದಲು ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು. ಜೂನ್ 21ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಲೆಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು ಎಂದು ವರದಿ ತಿಳಿಸಿದೆ.
ಪ್ರತೀಕಾರಕ್ಕಾಗಿ ಮಾಡಿರುವ ಪ್ರಹ್ಲಾದ್ ರಾವ್ ಹತ್ಯೆ ಖಂಡಿಸಿ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸರಿಗೆ ದೂರು ನೀಡಿದ್ದರು. ಬಿಜೆಪಿಯಿಂದ ದೂರು ಸ್ವೀಕರಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೂಪುರ್ ಶರ್ಮಾ ಹೇಳಿಕೆಯನ್ನು ಬೆಂಬಲಿಸಿ ಕೆಲವು ಪೋಸ್ಟ್ ಗಳನ್ನು ಪ್ರಹ್ಲಾದ್ ರಾವ್ ವಾಟ್ಸಪ್ ಗ್ರೂಪ್ ಗಳಿಗೆ ಶೇರ್ ಮಾಡಿದ್ದರು. ಈ ವಾಟ್ಸಪ್ ಗ್ರೂಪ್ ನಲ್ಲಿ ಕೆಲವು ಮುಸ್ಲಿಮ್ ಸದಸ್ಯರಿದ್ದು, ಪ್ರಹ್ಲಾದ್ ರಾವ್ ಆಕಸ್ಮಿಕವಾಗಿ ಈ ಪೋಸ್ಟ್ ಫಾರ್ವರ್ಡ್ ಮಾಡಿರುವುದಾಗಿ ಕೋಟ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಭಾರತದಲ್ಲಿ 24ಗಂಟೆಯಲ್ಲಿ 12,608 ಕೋವಿಡ್ ಸೋಂಕು ಪ್ರಕರಣ ಪತ್ತೆ, 72 ಮಂದಿ ಸಾವು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಪೆನ್ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನ
Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”
ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ
ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ಅಕ್ರಮ ಹುಲಿ ಉಗುರು ಮಾರಾಟಕ್ಕೆ: ಇಬ್ಬರ ಬಂಧನ