Udupi; ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ
Team Udayavani, Mar 9, 2024, 12:23 AM IST
ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಆರೂರಿನ ರಾಕೇಶ್ ಅವರು ಸ್ಕೂಟರ್ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು.
ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಸಿದು ಬಿದ್ದು ವ್ಯಕ್ತಿ ಸಾವು
ಉಡುಪಿ ಮೂಲತ ತಮಿಳುನಾಡಿನ, ಉಡುಪಿಯಲ್ಲಿ ವಾಸವಿದ್ದ ಕೆ. ಮುರುಗನ್(58) 2 ವರ್ಷಗಳ ಹಿಂದೆ ಹೃದಯಾಘಾತಕ್ಕೆ ಈಡಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಮಾ. 6ರಂದು ಕಡಿಯಾಳಿ ಪೆಟ್ರೋಲ್ ಪಂಪ್ ಬಳಿ ಅಸ್ವಸ್ಥರಾಗಿ ಕೆಳಗೆ ಬಿದ್ದಿದ್ದು, ನಿತ್ಯಾನಂದ ಒಳಕಾಡು ಅವರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯುವಷ್ಟರಲ್ಲಿ ಮುರುಗನ್ ಮೃತಪಟ್ಟಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ