ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸ್‌ ಹುತಾತ್ಮರ ದಿನಾಚರಣೆ

Team Udayavani, Oct 21, 2021, 8:30 PM IST

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಉಡುಪಿ : ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ತಮ್ಮ ಕರ್ತವ್ಯದ ಸಮಯದಲ್ಲಿ ಪೊಲೀಸರು ಮಾಡುವ ತ್ಯಾಗ ಹಾಗೂ ಬಲಿದಾನ ಸದಾ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಹೇಳಿದರು.

ಪೊಲೀಸ್‌ ಹುತಾತ್ಮರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಚಂದು ಮೈದಾನದಲ್ಲಿ ಗುರುವಾರ ನಡೆದ ಪೋಲಿಸ್‌ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.

ಯಾವುದೇ ಅಸಾಧಾರಣ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಸ್ಟಕರ ಪರಿಸ್ಥಿತಿ, ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯ ನಿರ್ವಹಿಸುತ್ತಾರೆ. ಸಮಾಜದಲ್ಲಿ ಜನತೆ ಶಾಂತಿ, ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದೇ ಕಾರಣ. ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ, ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌ ಮಾತನಾಡಿ, ಪೊಲೀಸ್‌ ಹುತಾತ್ಮರ ದಿನಾಚರಣೆಯ ಮಹತ್ವ ಹಾಗೂ 1-9-2020 ರಿಂದ 31-8-2021 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು. ಎರಡು ನಿಮಿಷಗಳ ಮೌನಾಚರಣೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಪ್ರೊಬೆಷನರ್‌ ಆರ್‌.ಎಸ್‌.ಐ. ಪುನೀತ್‌ ಕುಮಾರ್‌ ಪರೇಡ್‌ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್‌ನ ಎಸ್‌.ಐ.ಬಿ.ಮನಮೋಹನ್‌ ರಾವ್‌ ನಿರೂಪಿಸಿದರು.

ಇದನ್ನೂ ಓದಿ :ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ಐಪಿಎಸ್‌ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿ
ತಾವು ಐಪಿಎಸ್‌ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು. ಎರಡನೇಯದಾಗಿ ತಮ್ಮ ಜತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು. ಪೊಲೀಸರು ಎಂದೆಂದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.