ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ; ಶಿಕ್ಷಕ- ವಿದ್ಯಾರ್ಥಿ ಅನುಪಾತದಲ್ಲಿ ಅಜಗಜಾಂತರ


Team Udayavani, Jan 15, 2022, 7:50 AM IST

ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ;  ಶಿಕ್ಷಕ- ವಿದ್ಯಾರ್ಥಿ ಅನುಪಾತದಲ್ಲಿ ಅಜಗಜಾಂತರ

ಉಡುಪಿ: ಕೊರೊನಾದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗುವ ಜತೆಗೆ ಖಾಸಗಿ ಶಾಲೆಗಳಿಗೆ ಒಂದಷ್ಟು ಪೆಟ್ಟು ಬಿದ್ದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ತಲಾ 3 ಸರಕಾರಿ ಶಾಲೆ ಹಾಗೂ ಖಾಸಗಿ (ಅನುದಾನ ರಹಿತ) ಶಾಲೆಗಳು ಮತ್ತು 6 ಅನುದಾನಿತ ಶಾಲೆಗಳು ಬಂದ್‌ ಆಗಿವೆ.

ಬ್ರಹ್ಮಾವರದ 4, ಬೈಂದೂರು, ಕಾರ್ಕಳ, ಉಡುಪಿ ಹಾಗೂ ಕುಂದಾಪುರದ ತಲಾ 2 ಶಾಲೆಗಳು ಸೇರಿವೆ. ಇದರಲ್ಲಿ ಬಹುತೇಕ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು. ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ, ಖಾಸಗಿ ಶಾಲೆಗಳಲ್ಲಿ 75 ಸಾವಿರ ಹಾಗೂ ಅನುದಾನಿತ ಶಾಲೆಗಳಲ್ಲಿ 22 ಸಾವಿರ ಸೇರಿದಂತೆ ಒಟ್ಟು ಸುಮಾರು 1.50 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಸರಕಾರಿ ಶಾಲೆ: 473 ಹುದ್ದೆ ಖಾಲಿ
ಜಿಲ್ಲೆಯ 650ಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ 473 ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇದರಲ್ಲಿ ಪ್ರೌಢಶಾಲಾ ವಿಭಾಗ ಬೇರೆ ಇರುವುದಿಂದ ಪ್ರೌಢಶಾಲೆಯಲ್ಲಿ ವಿಷಯವಾರು ಇಂಗ್ಲಿಷ್‌, ವಿಜ್ಞಾನ, ಗಣಿತ ಮೊದಲಾದ ಶಿಕ್ಷಕರ ಹುದ್ದೆಯೂ ಖಾಲಿಯಿದೆ. ಹುದ್ದೆ ಭರ್ತಿಗೆ ರಾಜ್ಯ ಸರಕಾರದಿಂದಲೇ ಕ್ರಮವಾಗಬೇಕು. ಸದ್ಯಕ್ಕೆ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.

ವೇತನ ಕಡಿಮೆ ಇರುವುದರಿಂದ ವರ್ಷದಿಂದ ವರ್ಷಕ್ಕೆ ಅತಿಥಿ ಶಿಕ್ಷಕರು ಬದಲಾಗುತ್ತಿರುತ್ತಾರೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪ್ರಭಾವ ಬೀರುತ್ತದೆ.

30-40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ
ಶಿಕ್ಷಕರ ಕೊರತೆ ಜತೆಗೆ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತದಲ್ಲೂ ಅಜಗಜಾಂತರವಿದೆ. ಸರಕಾರದ ನಿಯಮದಂತೆ 18ರಿಂದ 22 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ ಇರಬೇಕು. ಆದರೆ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ 30ರಿಂದ 40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರಿದ್ದಾರೆ. 583 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ 127ರಲ್ಲಿ ಮಾತ್ರ ಸರಕಾರದ ನಿಯಮದಂತೆ ಶಿಕ್ಷಕರಿದ್ದಾರೆ. 106 ಪ್ರೌಢ ಶಾಲೆಗಳ ಪೈಕಿ ಬಹುತೇಕ ಎಲ್ಲಡೆ ನಿಯಮದಂತೆ ಶಿಕ್ಷಕರಿದ್ದಾರೆ.

ಮಾಹಿತಿ ಸಂಗ್ರಹ
ಜಿಲ್ಲೆಯ ಪ್ರೌಢ ಶಾಲಾ ವಿಭಾಗದಲ್ಲಿ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತ ಚೆನ್ನಾಗಿದೆ. ಪ್ರಾಥಮಿಕ ವಿಭಾಗದಲ್ಲಿ ಸ್ವಲ್ಪ ಕಡಿಮೆಯಿದೆ. ಹೊಸ ಶಿಕ್ಷಕರ ನೇಮಕಾತಿಯಿಂದ ಇದು ಸರಿಯಾಗಲಿದೆ. ಶಾಲೆ ಮುಚ್ಚಿರುವ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ..
-ಮಲ್ಲೇಸ್ವಾಮಿ,
ಡಿಡಿಪಿಐ, ಉಡುಪಿ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.