ಉಡುಪಿ ಜಿಲ್ಲೆ: ಮಾವು ಇಳುವರಿ ಹೆಚ್ಚಾಗುವ ನಿರೀಕ್ಷೆ

ಈ ಬಾರಿ ಬಿಟ್ಟಿದೆ ಉತ್ತಮ ಹೂವು ; ಜಿಲ್ಲೆಯಲ್ಲಿ 440 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆ ; ನಿರಂತರ ಮಳೆಯಿಂದ ಸೀಸನ್‌ ವಿಳಂಬ

Team Udayavani, Feb 7, 2022, 5:55 AM IST

ಉಡುಪಿ ಜಿಲ್ಲೆ: ಮಾವು ಇಳುವರಿ ಹೆಚ್ಚಾಗುವ ನಿರೀಕ್ಷೆ

ಕುಂದಾಪುರ: ಈ ಬಾರಿ ಮಾವಿನ ಮರಗಳು ಹೂವು ಚೆನ್ನಾಗಿ ಬಿಟ್ಟಿದ್ದು, ಬೆಳೆಗಾರರಲ್ಲಿ ಮಾವು ಇಳುವರಿ ಹೆಚ್ಚಾಗುವ ಆಶಾದಾಯಕ ಭಾವನೆ ಮೂಡಿಸಿದೆ. ಪ್ರಸಕ್ತ ಸಾಲಿನಲ್ಲಿ ಕುಂದಾಪುರ, ಬೈಂದೂರು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 440 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಮಾವು ಬೆಳೆದಿದ್ದು, ಸಾಮಾನ್ಯವಾಗಿ ಎಲ್ಲ ಕಡೆ ಮಾವಿನ ಗಿಡಗಳು ಹೂವು ಬಿಟ್ಟು ಕಂಗೊಳಿಸುತ್ತಿವೆ.

ಮಾವಿನ ಹೂವುಗಳಿಗೆ ಪೂರಕವಾದ ವಾತಾವರಣವಿದ್ದು, ಕಳೆದ ಕೆಲವು ದಿನಗಳಿಂದ ಇಬ್ಬನಿ ಕವಿದ ವಾತಾವರಣವಿದೆ. ಉಡುಪಿ ಜಿಲ್ಲೆಯಲ್ಲಿ ರತ್ನಗಿರಿ, ನೀಲಂ, ಆಪೂಸ್‌ ತಳಿಯ ಮಾವು ಹೆಚ್ಚಾಗಿ ಬೆಳೆಯುತ್ತಿದ್ದು, ಕೆಲವರು ಮಲ್ಲಿಕಾ, ಮುಂಡಪ್ಪ ತಳಿಯನ್ನು ಬೆಳೆಯುತ್ತಾರೆ.

ಮಳೆಯಿಂದ ವಿಳಂಬ
ಈ ಸಾಲಿನಲ್ಲಿ ಕಳೆದ ಡಿಸೆಂಬರ್‌ವರೆಗೂ ಮಳೆ ಇದ್ದುದರಿಂದ, ಹೂವು ಬಿಡುವ ಪ್ರಕ್ರಿಯೆ ವಿಳಂಬವಾಗಿದೆ. ಮಳೆ ಕಡಿಮೆಯಾಗುವವರೆಗೂ ಚಿಗುರು ಬಿಡುವ ಪ್ರಕ್ರಿಯೆ ಇದ್ದುದರಿಂದ ಹೂವು ಬಿಡುವ ಪ್ರಕ್ರಿಯೆ ತಡವಾಗಿ ಆರಂಭವಾಗಿದೆ. ಇದರಿಂದಾಗಿ ಉಪ್ಪಿನಕಾಯಿ ಇನ್ನಿತರ ಬಳಕೆಗೆ ತೊಂದರೆಯಿಲ್ಲದಿದ್ದರೂ, ಹಣ್ಣು ಮಾರಾಟ ಮಾಡುವವರಿಗೆ ವಿಳಂಬದಿಂದಾಗಿ ನಷ್ಟವಾಗುವ ಸಂಭವವೂ ಇದೆ. ಕೆಲವೆಡೆಗಳಲ್ಲಿ ಮಾವಿನ ಸೀಸನ್‌ ವಿಳಂಬದಿಂದಾಗಿ ಮಾವಿನ ತೋಟಗಳು 2 ಲಕ್ಷ ರೂ. ವರೆಗೆ ಏಲಂ ಆಗುತ್ತಿದ್ದುದು, ಈ ಬಾರಿ 45 ಸಾವಿರ ರೂ.ಗೆ ಸೀಮಿತವಾಗಿದೆ.

ಕಳೆದ ವರ್ಷ ಮಾವಿನ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಇದರಿಂದಾಗಿ ಸ್ಥಳೀಯ ಮಾವಿನ ಮಿಡಿ ಹಾಗೂ ಹಣ್ಣುಗಳು ಅಷ್ಟೊಂದು ಪ್ರಮಾಣದಲ್ಲಿ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಜಿಲ್ಲೆಯ ಬಹುತೇಕ ಎಲ್ಲ ಕಡೆಗಳಲ್ಲಿ ಉತ್ತಮ ಪ್ರಮಾಣದಲ್ಲಿ ಹೂವು ಬಿಟ್ಟಿದ್ದು, ಈ ಬಾರಿಯ ಮಾವಿನ ಸೀಸನ್‌ ಉತ್ತಮವಾಗಿರಬಹುದು ಎನ್ನುವ ನಿರೀಕ್ಷೆ ಮಾವಿನ ಬೆಳೆಗಾರರದ್ದಾಗಿದೆ.

ಎಲ್ಲೆಲ್ಲಿ ಎಷ್ಟು ಹೆಕ್ಟೇರ್‌?
ಉಡುಪಿ ಜಿಲ್ಲೆಯಲ್ಲಿ ವಾರ್ಷಿಕ ಒಟ್ಟಾರೆ 440.49 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಕಾರ್ಕಳ ತಾಲೂಕಿನಲ್ಲಿ ಗರಿಷ್ಠ 164 ಹೆಕ್ಟೇರ್‌, ಬೈಂದೂರು ತಾಲೂಕಿನಲ್ಲಿ ಕನಿಷ್ಠ 8 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಇನ್ನು ಕುಂದಾಪುರದಲ್ಲಿ 109 ಹೆಕ್ಟೇರ್‌, ಬ್ರಹ್ಮಾವರದಲ್ಲಿ 74 ಹೆಕ್ಟೇರ್‌, ಕಾಪುವಿನಲ್ಲಿ 33, ಹೆಬ್ರಿಯಲ್ಲಿ 30 ಹಾಗೂ ಉಡುಪಿ ತಾಲೂಕಿನಲ್ಲಿ 20 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದೆ.

ಉತ್ತಮ ಹವಾಗುಣ
ಸಾಮಾನ್ಯವಾಗಿ ಡಿಸೆಂಬರ್‌ ವೇಳೆಗೆ ಮಾವಿನ ಹೂ ಬಿಡುತ್ತದೆ. ಆದರೆ ಈ ಬಾರಿ ಡಿಸೆಂಬರ್‌ವರೆಗೂ ಮಳೆ ಇದ್ದುದರಿಂದ ಹೂವು ಬಿಡುವ ಪ್ರಕ್ರಿಯೆ ತಡವಾಗಿ ಆರಂಭಗೊಂಡಿದೆ. ಆದರೆ ಈ ಬಾರಿ ಎಲ್ಲ ಕಡೆಗಳಲ್ಲಿ ಉತ್ತಮ ಹೂ ಬಿಟ್ಟಿದೆ. ಹವಾಮಾನ ಸಹ ಉತ್ತಮವಾಗಿರುವುದರಿಂದ ಈ ಬಾರಿ ಹೆಚ್ಚಿನ ಮಾವು ಇಳುವರಿ ಬರುವ ನಿರೀಕ್ಷೆಯಿದೆ.
– ಡಾ| ಧನಂಜಯ ಬಿ.,
ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು,
ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.