ಪರ್ಯಾಯ ಕಳೆದರೂ ಜಾತ್ರೆಯ ಕಳೆ: ಶ್ರೀಕೃಷ್ಣನ ದರ್ಶನಕ್ಕೆ ಭಕ್ತ ಸಮೂಹ
Team Udayavani, Jan 20, 2022, 5:10 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯೋತ್ಸವದ ಸಂಭ್ರಮ ಕಳೆದರೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಮಂಗಳವಾರ ಅಪರಾಹ್ನದ ಬಳಿಕ ರಾತ್ರಿಯವರೆಗೆ ಹಾಗೂ ಬುಧವಾರ ಬೆಳಗ್ಗೆ ಮತ್ತು ಸಂಜೆಯ ವೇಳೆಗೆ ಹೆಚ್ಚಿನ ಭಕ್ತರು ಭೇಟಿ ನೀಡಿದ್ದರೆ, ಮಧ್ಯಾಹ್ನದ ವೇಳೆಗೆ ವಿರಳವಾಗಿತ್ತು. ಪರ್ಯಾಯ ದಿನ ದೇವರ ದರ್ಶನಕ್ಕೆ ಬರಲಾಗದಿದ್ದವರು ಮರುದಿನ ಆಗಮಿಸಿದ್ದು ಕಂಡು ಬಂತು. ಈ ವೇಳೆ ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದಾರೆ.
ಪರ್ಯಾಯಕ್ಕೆಂದು ಆಗಮಿಸಿದ ಸಂತೆಮಾರುಕಟ್ಟೆಗಳು ರಥಬೀದಿ ಪರಿಸರದಲ್ಲಿ ಬುಧವಾರವೂ ಕಂಡುಬಂತು. ಹೊರಜಿಲ್ಲೆಯ ಭಕ್ತರೂ ಅಧಿಕ ಸಂಖ್ಯೆಯಲ್ಲಿ ಕಂಡುಬಂದರು. ಜಿಲ್ಲಾಡಳಿತದ ವತಿಯಿಂದ ಕರಕುಶಲ ವಸ್ತುಪ್ರದರ್ಶನ ಮಳಿಗೆ ಬುಧವಾರವೂ ತೆರೆದಿತ್ತು.
ಆಸನಗಳ ತೆರವು
ದರ್ಬಾರ್ ನಡೆದ ಸ್ಥಳದಲ್ಲಿರಿಸಲಾಗಿದ್ದ ಆಸನಗಳು ಹಾಗೂ ಪರ್ಯಾಯ ಮಹೋತ್ಸವಕ್ಕೆಂದು ಹಾಕಲಾದ ಹೆಚ್ಚುವರಿ ಕುರ್ಚಿಗಳನ್ನು ಬುಧವಾರ ತೆಗೆಯಲಾಯಿತು. ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳು ಸೀಮಿತಸಂಖ್ಯೆಯಲ್ಲಿ ಕಂಡುಬಂದವು.
ಎಚ್ಚರಿಕೆ ಫಲಕಗಳ ತೆರವು
ಶ್ರೀಕೃಷ್ಣ ಮಠದ ಸಹಿತ ನಗರದ ವಿವಿಧ ಭಾಗಗಳಲ್ಲಿ ಜಿಲ್ಲಾ ಪೊಲೀಸರು ಅಳವಡಿಸಿದ್ದ ಜಾಗೃತಿ ಫಲಕಗಳನ್ನು ಬುಧವಾರ ತೆರವುಗೊಳಿಸಲಾಯಿತು. ರಥಬೀದಿಯಲ್ಲಿದ್ದ ಪೊಲೀಸ್ ಚೆಕ್ಪೋಸ್ಟ್ ಕಾರ್ಯಾಚರಣೆಯಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?