ಉಡುಪಿಯ ತಾಯಿ – ಮಕ್ಕಳ ಆಸ್ಪತ್ರೆ ಮತ್ತೆ ಸರಕಾರದ ವಶಕ್ಕೆ
ಹೆಚ್ಚುವರಿ ಸಿಬಂದಿ ಹಾಗೂ ವಾರ್ಷಿಕ ಅನುದಾನ 9.83 ಕೋ.ರೂ.ಗೆ ಅನುಮೋದನೆ ನೀಡಲಾಗಿದೆ.
Team Udayavani, Mar 31, 2022, 10:45 AM IST
ಉಡುಪಿ, ಮಾ. 30: ಖಾಸಗಿಯವರ ನಿರ್ವಹಣೆಗೆ ಒಳಪಟ್ಟಿದ್ದ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ.
ಇದನ್ನೂ ಓದಿ:ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
ಈ ಸಂಬಂಧ ಮಹತ್ತರ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬಂದಿ ಸಹಿತ 103 ಮಂದಿ ಹೆಚ್ಚುವರಿ ಸಿಬಂದಿ ಹಾಗೂ ವಾರ್ಷಿಕ ಅನುದಾನ 9.83 ಕೋ.ರೂ.ಗೆ ಅನುಮೋದನೆ ನೀಡಲಾಗಿದೆ.
ರಾಜ್ಯ ಸರಕಾರದ ಈ ಮಹತ್ವದ ನಿರ್ಧಾರವನ್ನು ಶಾಸಕ ಕೆ. ರಘುಪತಿ ಭಟ್ ಸ್ವಾಗತಿಸಿದ್ದಾರೆ. 250 ಬೆಡ್ಗಳ ಆಸ್ಪತ್ರೆಯಾಗಿ ಮೇಲ್ದರ್ಜೆ ಗೇರಿದ ಜಿಲ್ಲಾ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಶಿಲಾನ್ಯಾಸದ ಸಂದರ್ಭ ಮುಖ್ಯಮಂತ್ರಿಯವರು ಈ ಸಂಬಂಧ ಭರವಸೆ ನೀಡಿದ್ದರು.
ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದ ವಶಕ್ಕೆ ಪಡೆದು ಅತ್ಯುತ್ತಮವಾಗಿ ನಿರ್ವಹಿಸುವ ಕುರಿತು ವಿವರಿಸಿದ್ದರು. ಅದರಂತೆ ಇಂದು ನಿರ್ಣಯ ಕೈಗೊಳ್ಳಲಾಗಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಸರಕಾರದ ವಶದಲ್ಲಿದ್ದ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆಗೆ ವಹಿಸಿಕೊಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ