
Hit and Run ಪ್ರಕರಣ; ಬೈಕ್ ಸವಾರ ಗಂಭೀರ
Team Udayavani, Jun 5, 2023, 1:19 PM IST

ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಹಿಟ್ ಆಂಡ್ ರನ್ ಪ್ರಕರಣ ರಾ.ಹೆ 66 ರ ಸಂಕೊಳಿಗೆ ಸಮೀಪ ಜೂ. 4ರ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.
ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆ ಹಚ್ಚಲಾಗಿದೆ.
ಕೋಟೆಕಾರು ವೈದ್ಯನಾಥ ದೇವಸ್ಥಾನ ಪ್ರದೇಶದ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು.
ಕೋಟೆಕಾರಿನ ತನ್ನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯ ಪರಿಣಾಮ ಗಂಭೀರ ಗಾಯಗೊಂಡ ತೇಜಸ್ ಅವರನ್ನು ತಕ್ಷಣ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ, ತಲಪಾಡಿ ಟೋಲ್ ಗೇಟ್ ನ ಸಿಸಿಟಿವಿ ಪರಿಶೀಲಿಸಿದಾಗ ಕೇರಳ ನೋಂದಾಯಿತ ಇನೋವಾ ಕಾರು ಘಟನೆಗೆ ಕಾರಣವಾಗಿರುವುದೆಂದು ಪತ್ತೆಹಚ್ಚಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. TMA Pai Convention Centre; 3 ದಿನಗಳ “ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋಗೆ’ ಚಾಲನೆ

Mulki: ವಿಜಾಪುರದ ರಸ್ತೆ ಸಮಸ್ಯೆಗೆ ಮೂಲ್ಕಿಯಲ್ಲಿ ಟವರ್ ಏರಿ ಪ್ರತಿಭಟನೆ!

Surathkal: ಭೀಕರ ರಸ್ತೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

Mangaluru ಪಿಡಿಒಗಳ ಅಕಾಲಿಕ ವರ್ಗಾವಣೆ, ನಾಗರಿಕ ಸೇವೆಗಳಲ್ಲಿ ವ್ಯತ್ಯಯ

Cauvery water dispute ತಟ್ಟದ ಬಂದ್ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ
MUST WATCH
ಹೊಸ ಸೇರ್ಪಡೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ