ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ : ಅಫ್ಘಾನ್‌ ಸವಾಲು ಗೆದ್ದ ಭಾರತ ಸೆಮಿಗೆ


Team Udayavani, Dec 28, 2021, 7:00 AM IST

ಅಂಡರ್‌-19 ಏಶ್ಯ ಕಪ್‌ ಕ್ರಿಕೆಟ್‌ : ಅಫ್ಘಾನ್‌ ಸವಾಲು ಗೆದ್ದ ಭಾರತ ಸೆಮಿಗೆ

ದುಬಾೖ : ಅಂಡರ್‌- 19 ಏಶ್ಯ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸೋಮವಾರದ ಮುಖಾ ಮುಖೀಯಲ್ಲಿ ಭಾರತ 4 ವಿಕೆಟ್‌ಗಳಿಂದ ಅಫ್ಘಾನಿಸ್ಥಾನವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಅಫ್ಘಾನಿ ಸ್ಥಾನ 4 ವಿಕೆಟಿಗೆ 259 ರನ್‌ ಪೇರಿಸಿದರೆ, ಭಾರತ 48.2 ಓವರ್‌ಗಳಲ್ಲಿ 6 ವಿಕೆಟಿಗೆ 262 ರನ್‌ ಬಾರಿಸಿತು. ಇದು ಕೂಟದಲ್ಲಿ ಭಾರತಕ್ಕೆ ಒಲಿದ ಎರಡನೇ ಗೆಲುವು. “ಎ’ ವಿಭಾಗದಲ್ಲಿ ಭಾರತ ದ್ವಿತೀಯ ಸ್ಥಾನಿಯಾಯಿತು (4 ಅಂಕ). ಮೂರನ್ನೂ ಗೆದ್ದ ಪಾಕಿಸ್ಥಾನ ಅಗ್ರಸ್ಥಾನ ಅಲಂಕರಿಸಿತು. ಮಂಗಳವಾರ “ಬಿ’ ವಿಭಾಗದ 2 ಲೀಗ್‌ ಪಂದ್ಯಗಳ ಬಳಿಕ ಸೆಮಿಫೈನಲ್‌ ಎದುರಾಳಿ ಯಾರೆಂಬುದು ತಿಳಿಯಲಿದೆ.

ಹರ್ನೂರ್‌ ಅಮೋಘ ಆಟ
ಚೇಸಿಂಗ್‌ ವೇಳೆ ಆರಂಭಕಾರ ಹರ್ನೂರ್‌ ಸಿಂಗ್‌ 65 ರನ್‌ ಬಾರಿಸಿ (74 ಎಸೆತ, 9 ಬೌಂಡರಿ) ಮತ್ತೆ ಆಪತ್ಭಾಂಧವರೆನಿಸಿದರು. ಜತೆಗಾರ ಅಂಗ್‌ಕೃಷ್‌ ರಘುವಂಶಿ 35, ನಾಯಕ ಯಶ್‌ ಧುಲ್‌ 26, ರಾಜ್‌ ಬಾವಾ ಅಜೇಯ 35 ಮತ್ತು ಕೌಶಲ್‌ ತಾಂಬೆ ಅಜೇಯ 35 ರನ್‌ ಹೊಡೆದರು. ಬಾವಾ-ತಾಂಬೆ ಮುರಿಯದ 7ನೇ ವಿಕೆಟಿಗೆ 65 ರನ್‌ ಬಾರಿಸಿ ಭಾರತವನ್ನು ದಡ ಸೇರಿಸಿದರು.

ಅಫ್ಘಾನ್‌ ದೊಡ್ಡ ಮೊತ್ತ
ಅಫ್ಘಾನಿಸ್ಥಾನ ಮೊದಲ 10 ಓವರ್‌ಗಳಲ್ಲಿ ಕುಂಟುತ್ತ ಸಾಗಿತ್ತು. 10.3 ಓವರ್‌ಗಳಲ್ಲಿ ಬಂದದ್ದು 38 ರನ್‌ ಮಾತ್ರ. 19 ಓವರ್‌ ಮುಕ್ತಾಯಕ್ಕೆ ಸ್ಕೋರ್‌ 63ಕ್ಕೆ ತಲುಪಿತ್ತಷ್ಟೇ. 29ನೇ ಓವರ್‌ನಲ್ಲಿ ನೂರರ ಗಡಿ ಮುಟ್ಟಿತು. ಆಗ ಭಾರತದ ನಿರ್ಧಾರ ಯಶಸ್ವಿಯಾಯಿತು ಎಂದೇ ಭಾವಿಸ ಲಾಯಿತು. ಆದರೆ ಕೊನೆಯ 20 ಓವರ್‌ಗಳಲ್ಲಿ ಅಫ್ಘಾನ್‌ ಬಿರುಸಿನ ಆಟಕ್ಕೆ ಇಳಿಯಿತು. ಭಾರತದ ಬೌಲರ್‌ಗಳು ಕಡಿವಾಣ ಹಾಕಲು ವಿಫ‌ಲರಾದರು. ಸ್ಕೋರ್‌ 250ರ ಗಡಿ ದಾಟಿತು.

ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ನಾಯಕ ಸುಲಿಮಾನ್‌ ಸಫಿ ಮತ್ತು ಇಜಾಜ್‌ ಅಹ್ಮದ್‌ ಅಹ್ಮದ್‌ಜಾಯ್‌ ದೊಟ್ಟ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಅಹ್ಮದ್‌ಜಾಯ್‌ ಅವರಂತೂ ಅತ್ಯಂತ ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ನಡೆಸಿ ಭಾರತದ ಬೌಲರ್‌ಗಳ ಮೇಲೆರಗಿದರು. ಬರೀ ಸಿಕ್ಸರ್‌ಗಳನ್ನೇ ಬಡಿದಟ್ಟುತ್ತ ಹೋದರು. ಅವರ ಅಜೇಯ 86 ರನ್ನುಗಳ ಆಟದಲ್ಲಿ 7 ಸಿಕ್ಸರ್‌ ಸಿಡಿಯಲ್ಪಟ್ಟಿತು. ಬೌಂಡರಿ ಕೇವಲ ಒಂದೇ. 68 ಎಸೆತಗಳಿಂದ ಈ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದರು.

ನಾಯಕ ಸಫಿ 86 ಎಸೆತ ಎದುರಿಸಿ 73 ರನ್‌ ಹೊಡೆದರು. ಒಂದು ಸಿಕ್ಸರ್‌ ಹಾಗೂ 7 ಬೌಂಡರಿಗಳನ್ನು ಇದು ಒಳಗೊಂಡಿತ್ತು.

ಸಂಕ್ಷಿಪ್ತ ಸ್ಕೋರ್‌
ಅಫ್ಘಾನಿಸ್ಥಾನ-4 ವಿಕೆಟಿಗೆ 259 (ಅಹ್ಮದ್‌ಜಾಯ್‌ ಔಟಾಗದೆ 86, ಸಫಿ 73, ಅಲ್ಲಾಹ್‌ ನೂರ್‌ 26, ತಾಂಬೆ 25ಕ್ಕೆ 1, ಓಸ್ವಾಲ್‌
35ಕ್ಕೆ 1).

ಭಾರತ-48.2 ಓವರ್‌ಗಳಲ್ಲಿ 6 ವಿಕೆಟಿಗೆ 262 (ಹರ್ನೂರ್‌ 65, ಬಾವಾ ಅಜೇಯ 43, ತಾಂಬೆ ಅಜೇಯ 35, ರಘುವಂಶಿ 35, ನೂರ್‌ ಅಹ್ಮದ್‌ 43ಕ್ಕೆ 4).

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.