ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ವಿನೂತನ ಉಪಕ್ರಮ

Team Udayavani, Mar 29, 2020, 6:15 AM IST

ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ವೈದ್ಯರಿಗೆ, ನರ್ಸ್‌ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ಕೋವಿಡ್‌ 19 ಸೋಂಕಿತರಿಗೆ ಏಕರೂಪದ ಚಿಕಿತ್ಸೆ ಇರಬೇಕು ಮತ್ತು ಅದನ್ನು ಎಲ್ಲರೂ ಪಾಲಿಸಲೇಬೇಕಾಗಿರುತ್ತದೆ. ಅತ್ಯಂತ ಸೂಕ್ಷ್ಮ ರೀತಿಯಲ್ಲಿ ಚಿಕಿತ್ಸಾ ವಿಧಾನ ಮತ್ತು ಆರೈಕೆಗಳು ಅಗತ್ಯ ಇರುವುದರಿಂದ ಎಲ್ಲ ಜಿಲ್ಲೆಗಳ ವೈದ್ಯರಿಗೆ, ನರ್ಸ್‌ಗಳಿಗೆ ಮಾತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಆಯಾ ಜಿಲ್ಲೆಗಳಲ್ಲಿಯೇ ವೈದ್ಯರು, ನರ್ಸ್‌ಗಳು ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ಲಭ್ಯತೆಯ ಆಧಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ತಜ್ಞರ ಮೂಲಕ ತರಬೇತಿ
ಈ ವಿಚಾರದಲ್ಲಿ ವೈದ್ಯರಿಗೆ ಅಥವಾ ನರ್ಸ್‌ಗಳಿಗೆ ತರಬೇತಿ ನೀಡುವವರೂ ಕೂಡ ತುಂಬ ವಿಚಾರವನ್ನು ತಿಳಿದವರಾಗಿರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಯು ವೈದ್ಯಕೀಯ ತಜ್ಞರ ಮೂಲಕ ತರಬೇತಿ ನೀಡಲಿದೆ. ಸರಕಾರದ ಒಪ್ಪಿಗೆಯಲ್ಲೇ ಈ ತರಬೇತಿ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಏನೇನು ತರಬೇತಿ?
ಕೋವಿಡ್‌ 19 ವೈರಸ್‌ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಸರಕಾರ ಈಗಾಗಲೇ ಜಾರಿಗೊಳಿಸಿದೆ. ಆದರೆ ಸೋಂಕಿತರನ್ನು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದವರು ಮಾತ್ರ ನೋಡಿಕೊಳ್ಳಬೇಕು. ಹೀಗಾಗಿ ವೈದ್ಯರಿಗೆ, ನರ್ಸ್‌ ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಅತ್ಯಾಧುನಿಕ ಸೌಲಭ್ಯವನ್ನು ವೈದ್ಯಕೀಯ ಸೌಲಭ್ಯ ಬಳಸಿ, ಯಾವುದೇ ರೀತಿಯಲ್ಲೂ ಅಪಾಯವಿಲ್ಲದ ರೀತಿಯಲ್ಲಿ ಆರೈಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ಆನ್‌ಲೈನ್‌ ಮೂಲಕ ಇರುವುದರಿಂದ ವೈದ್ಯರು ಅಥವಾ ವೈದ್ಯಕೀಯ ಸಿಬಂದಿ ತಾವು ಇರುವ ಜಾಗಳಿಂದಲೇ ತರಬೇತಿ ಪಡೆಯಬಹುದಾಗಿದೆ ಎಂದು ವಿವಿಯ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಕೋವಿಡ್‌ 19 ಚಿಕಿತ್ಸೆ ಮತ್ತು ಆರೈಕೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಏಕರೂಪ ಕ್ರಮ ಅಳವಡಿಸಿಕೊಳ್ಳಬೇಕು. ಹೀಗಾಗಿ ರಾಜ್ಯದ ಎಲ್ಲಡೇ ಏಕರೂಪ ಚಿಕಿತ್ಸೆ ಮತ್ತು ಆರೈಕೆ ಕ್ರಮಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರದ ಸಿಬಂದಿಗೆ ತರಬೇತಿ ನೀಡಲಿದ್ದೇವೆ. ಇದು ಚಿಕಿತ್ಸೆಗೆ ಅನುಕೂಲ ಆಗುವ ಜತೆಗೆ ಆಧುನಿಕ ಉಪ ಕರಣಗಳ ಸರಳ ಬಳಕೆಗೆ ಉಪಯೋಗ ಆಗಲಿದೆ.
-ಡಾ|ಎಸ್‌.ಸಚ್ಚಿದಾನಂದ, ಕುಲಪತಿ,
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.

ಸಿಬಂದಿಗೆ ತರಬೇತಿ
ರಾಜ್ಯದಲ್ಲಿರುವ ಬಹುತೇಕ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್‌ ಕಾಲೇಜುಗಳು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಅಧೀನದಲ್ಲಿ ಬರುತ್ತದೆ. ಕೋವಿಡ್‌ 19 ತಡೆಯುವ ನಿಟ್ಟಿನಲ್ಲಿ ವಿವಿಯೂ ಈಗಾಗಲೇ ಕಾರ್ಯೋನ್ಮುಖವಾಗಿದ್ದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದ್ದು, ಈಗ ವೈದ್ಯರು ಮತ್ತು ವೈದ್ಯಕೀಯ ಸೇವೆಯ ಸಿಬಂದಿಗೆ ತರಬೇತಿ ನೀಡಲು ಮುಂದಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.