ಬಜೆಟ್‌ಗೆ ರಾಜ್ಯ ಬಿಜೆಪಿ ಮೆಚ್ಚುಗೆ

ದುರ್ಬಲ ವರ್ಗದವರ ಏಳಿಗೆಗೆ ಮಂಡನೆಯಾದ ಆಯವ್ಯಯ ಎಂದು ಬಣ್ಣನೆ

Team Udayavani, Jul 6, 2019, 6:00 AM IST

BJP-545

ಬೆಂಗಳೂರು: ಕೇಂದ್ರ ಸರ್ಕಾರ ಶುಕ್ರವಾರ ಮಂಡಿಸಿದ ಆಯವ್ಯಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ನಾಯಕರು ಸಮಾಜದ ಎಲ್ಲ ವರ್ಗದ ಜನರನ್ನು ತಲು ಪುವ ಹಾಗೂ ಸದೃಢ ಅರ್ಥ ವ್ಯವಸ್ಥೆಯನ್ನು ರೂಪಿಸುವ ಗುರಿ ಹೊಂದಿರುವ ಬಜೆಟ್ ಮಂಡನೆಯಾಗಿದೆ ಎಂದು ಶ್ಲಾಘಿಸಿದ್ದಾರೆ. ರೈತ, ಮಹಿಳಾ, ದುರ್ಬಲ ವರ್ಗದವರ ಏಳಿಗೆಗೆ ಮಂಡನೆಯಾದ ಆಯವ್ಯಯ ಎಂದು ಬಣ್ಣಿಸಿದ್ದಾರೆ.

ಬಜೆಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕರಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್ ಸಮಾಜದ ಎಲ್ಲರನ್ನು ಒಳಗೊಂಡ, ಎಲ್ಲ ವರ್ಗದ ಜನರನ್ನು ತಲುಪುವ ಆಯವ್ಯಯವಾಗಿದೆ. ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಹಾಗೂ ಸಬ್‌ ಕಾ ವಿಶ್ವಾಸ್‌’ ಎಂಬ ಘೋಷವಾಕ್ಯಕ್ಕೆ ಪೂರಕವಾಗಿ ಆಯವ್ಯಯವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ ಎಂದು ಹೇಳಿದ್ದಾರೆ.

ರೈತರು, ಉದ್ದಿಮೆದಾರರು, ಕುಶಲಕರ್ಮಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಮೀನುಗಾರರನ್ನು ಒಳಗೊಂಡಂತೆ ಎಲ್ಲ ವರ್ಗದ ಜನರ ಆಶಯ, ವಿಶ್ವಾಸ, ಆಕಾಂಕ್ಷೆಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯ, ಯೋಜನೆಗಳನ್ನು ಒಳಗೊಂಡ ಆಯವ್ಯಯ ಮಂಡನೆಯಾಗಿದೆ. ಮುಖ್ಯವಾಗಿ ಶೂನ್ಯ ಬಂಡವಾಳ ಕೃಷಿಗೆ ಆದ್ಯತೆ ನೀಡಲಾಗಿದೆ. ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು, ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು 10,000 ಹೊಸ ಕೃಷಿಕರ ಸಂಘ ಸ್ಥಾಪನೆ. ಜಲಶಕ್ತಿ ಸಚಿವಾಲಯ ಸ್ಥಾಪನೆ, ಜಲಸಂವರ್ಧನೆ, ಕುಡಿಯುವ ನೀರು ಯೋಜನೆಗೆ ಮೊದಲ ಆದ್ಯತೆ. ಗ್ರಾಮೀಣ ಪ್ರದೇಶದ ಬಡವರಿಗೆ 1.95 ಕೋಟಿ ಮನೆಗಳ ನಿರ್ಮಾಣ, ನಗರ ಪ್ರದೇಶದ ಜನರಿಗೆ 91 ಲಕ್ಷ ಮನೆಗಳ ನಿರ್ಮಾಣ, ಕೃಷಿ ಕೈಗಾರಿಕೋದ್ಯಮದಲ್ಲಿ 75000 ಹೊಸ ಉದ್ದಿಮೆದಾರರಿಗೆ ಅವಕಾಶ, ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 80,250 ಕೋಟಿ ರೂ. ವೆಚ್ಚದಲ್ಲಿ 1.25 ಲಕ್ಷ ಕಿ.ಮೀ. ಗ್ರಾಮೀಣ ರಸ್ತೆಗಳ ನಿರ್ಮಾಣ. ಒಟ್ಟಾರೆ ದೇಶದ ಅಭಿವೃದ್ಧಿಗೆ ಪೂರಕವಾದ ಸರ್ವರನ್ನು ಒಳಗೊಂಡ ಹಾಗೂ ಸದೃಢ ಅರ್ಥವ್ಯವಸ್ಥೆಯನ್ನು ರೂಪಿಸುವ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.

ನವ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್: ಆರ್ಥಿಕ ಕ್ರಾಂತಿ ಸೃಷ್ಟಿಸುವ ದೂರದೃಷ್ಟಿ ಬಜೆಟ್ ಇದಾಗಿದೆ. 10 ವರ್ಷದಲ್ಲಿ ಐದು ಟ್ರಿಲಿಯನ್‌ ಡಾಲರ್‌ ಪ್ರಗತಿ ಸಾಧಿಸುವಂತಹ ಆಕಾಂಕ್ಷೆಯುಳ್ಳ ಬಜೆಟ್ ಇದಾಗಿದೆ. ಕೃಷಿ, ಕೈಗಾರಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆಗಳ ನಿರ್ಮಾಣ, ಎಲ್ಲರಿಗೂ ಪೈಪ್‌ ಮೂಲಕ ಕುಡಿಯುವ ನೀರು, ಎಲ್ಲ ಮನೆಗಳಿಗೂ ವಿದ್ಯುದ್ಧೀಕರಣ, ಶೌಚಾಲಯಗಳ ನಿರ್ಮಾಣ ಸೇರಿದಂತೆ ಇತರೆ ಯೋಜನೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ‘ನವ ಭಾರತ’ ನಿರ್ಮಿಸುವ ಸಲುವಾಗಿ ಸರಿಯಾದ ದಿಕ್ಕಿನಲ್ಲಿರುವ ಬಜೆಟ್ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಶ್ಲಾಘಿಸಿದ್ದಾರೆ.

ಕಾಯಕವೇ ಕೈಲಾಸ ಕಾರ್ಯಶೈಲಿ
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್ 12ನೇ ಶತಮಾನದಲ್ಲಿ ಅಂದಿನ ಸಂಸತ್‌ ಸ್ಥಾಪಕರೆಂದೇ ಬಿಂಬಿತರಾದ ಕಾಯಕಯೋಗಿ ಅಣ್ಣ ಬಸವಣ್ಣನವರ ತತ್ವ ‘ಕಾಯಕವೇ ಕೈಲಾಸ’ ಎಂಬ ಕಾರ್ಯ ಶೈಲಿಯ ಬಜೆಟ್ ಆಗಿದೆ. ‘ಕಾಯಕವೇ ಕೈಲಾಸ’ ಎಂಬ ತತ್ವದಂತೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಮಹತ್ವವನ್ನು ಬಜೆಟ್‌ನಲ್ಲಿ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಸಂಸ್ಕೃತಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ 2019-2020ನೇ ಸಾಲಿನ ಬಜೆಟ್‌ನಲ್ಲಿ ಮೊಳಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬಣ್ಣಿಸಿದ್ದಾರೆ.

ಕೇಂದ್ರ ಬಜೆಟ್‌ ಜನೋಪಯೋಗಿಯಾಗಿದೆ. ದೇಶದಲ್ಲಿ ಎಲ್ಲಕಡೆ ಮೂಲಸೌಕರ್ಯ ಕಲ್ಪಿಸಲು 1 ಲಕ್ಷ ಕೋಟಿ ರೂ. ನಿಗದಿಪಡಿಸಲಾಗಿದೆ. ಇದರಿಂದ ಕೈಗಾರಿಕೆಗಳ ಬೆಳವಣಿಗೆ ಹಾಗೂ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ.
– ಸುರೇಶ ಅಂಗಡಿ, ರೈಲ್ವೆ ಖಾತೆ ರಾಜ್ಯ ಸಚಿವ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.