ಕೇಂದ್ರ ಸಂಪುಟ ಪುನಾರಚನೆಯಲ್ಲೂ ಧ್ವನಿಸಿದ ಸಬ್‌ ಕಾ ಸಾಥ್‌


Team Udayavani, Jul 8, 2021, 6:50 AM IST

ಕೇಂದ್ರ ಸಂಪುಟ ಪುನಾರಚನೆಯಲ್ಲೂ ಧ್ವನಿಸಿದ ಸಬ್‌ ಕಾ ಸಾಥ್‌

ತಿಂಗಳ ಹಿಂದೆಯಷ್ಟೇ 2ನೇ ಅವಧಿಯ 2 ವರ್ಷಗಳನ್ನು ಪೂರೈಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರಕಾರದ ಸಂಪುಟ ಪುನಾರಚನೆ ಬುಧವಾರ ನಡೆದಿದೆ. ಎರಡನೇ ಅವಧಿಯ ಸರಕಾರದ ಮೊದಲ ಸಂಪುಟ ಪುನರಾಚನೆ ಇದಾಗಿದ್ದು, ಇದಕ್ಕೆ ಕಸರತ್ತು ತಿಂಗಳ ಹಿಂದೆಯೇ ಆರಂಭಗೊಂಡಿ­ತ್ತಾದರೂ ಇಷ್ಟೊಂದು ಭಾರೀ ಪ್ರಮಾಣ­ದಲ್ಲಿ ಪುನಾರಚನೆ ನಡೆದೀತು ಎಂದು ಯಾರೂ ಊಹಿಸಿ­ರಲಿಲ್ಲ. ಪುನಾರಚಿತ ಸಂಪುಟದಲ್ಲಿ ಅನುಭವಿ­ಗಳು, ಯುವ ಮತ್ತು ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದ್ದು ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಸಂಪುಟದಲ್ಲಿ 11 ಮಂದಿಗೆ ಅವಕಾಶ ಕಲ್ಪಿಸಿಕೊಡ­ಲಾಗಿದೆ. ಜಾತಿವಾರು ನೆಲೆಯಲ್ಲಿಯೂ ಸಂಪುಟದಲ್ಲಿ ಸಮತೋಲನ ಕಾಯ್ದುಕೊಳ್ಳಲು ಪ್ರಧಾನಿ ಕಸರತ್ತು ನಡೆಸಿದ್ದು ಹಿಂದುಳಿದ ವರ್ಗಗಳಿಗೆ ಸೇರಿದ 27 ನಾಯಕರಿಗೆ ಸಚಿವ ಸ್ಥಾನ ನೀಡಿದ್ದಾರೆ.

ಅಚ್ಚರಿಯ ವಿಷಯ ಅಂದರೆ ಸಂಪುಟದಲ್ಲಿ ಮಾತ್ರವಲ್ಲದೆ ಪಕ್ಷದಲ್ಲಿ ಅತ್ಯಂತ ಕ್ರಿಯಾಶೀಲ ಮತ್ತು ಪ್ರಭಾವಿ ಸಚಿವರೆಂದೇ ಪ್ರತಿಬಿಂಬಿತರಾಗಿದ್ದ ರವಿಶಂಕರ ಪ್ರಸಾದ್‌, ಪ್ರಕಾಶ್‌ ಜಾಬ್ಡೇಕರ್‌, ಡಾ| ಹರ್ಷವರ್ಧನ್‌, ರಮೇಶ್‌ ಪೋಖ್ರಿಯಾಲ್‌, ಡಿ.ವಿ. ಸದಾನಂದ ಗೌಡ ಸಹಿತ 12 ಸಚಿವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ನಾಯಕರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸ್ಥಾನಮಾನ ನೀಡುವ ಇಲ್ಲವೇ ಮುಂದಿನ ವರ್ಷ ದೇಶದ ಏಳು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸುವ ಸಾಧ್ಯತೆಗಳಿವೆ.

ಸಂಪುಟ ಪುನಾರಚನೆ ಕಸರತ್ತಿನ ಭಾಗವಾಗಿ 15 ಕ್ಯಾಬಿನೆಟ್‌ ಮತ್ತು 28 ಮಂದಿ ಸಹಾಯಕ ಸಚಿವರ ಸಹಿತ ಒಟ್ಟು 43 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಪೈಕಿ 7 ಮಂದಿಗೆ ಸಂಪುಟ ದರ್ಜೆಗೆ ಭಡ್ತಿ ನೀಡಲಾಗಿದ್ದರೆ 36 ಮಂದಿ ಹೊಸಬರಾಗಿದ್ದಾರೆ. ಇನ್ನು ಪಕ್ಷಕ್ಕೆ ಸೇರ್ಪಡೆಯಾಗಿ ಆ ರಾಜ್ಯಗಳಲ್ಲಿ ಪಕ್ಷ ಅಧಿಕಾರಕ್ಕೇರಲು ಅಥವಾ ಪಕ್ಷದ ಬೆಂಬಲಕ್ಕೆ ನಿಂತ ನಾಯಕರಿಗೂ ಬಿಜೆಪಿ ಸಚಿವ ಸ್ಥಾನದ ಉಡುಗೊರೆ ನೀಡಿದೆ. ರಾಜ್ಯದ ನಾಲ್ವರಿಗೆ ಸಚಿವ ಭಾಗ್ಯ ಲಭಿಸಿದೆ. ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರಶೇಖರ್‌, ಉಡುಪಿ-­ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಮತ್ತು ಬೀದರ್‌ ಸಂಸದ ಭಗವಂತ ಖೂಬಾ ಅವರು ಸಂಪುಟಕ್ಕೆ ಸಹಾಯಕ ಸಚಿವರಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜ್ಯಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಅವಕಾಶ ಲಭಿಸಿದಂತಾಗಿದ್ದು ಇಲ್ಲಿಯೂ ಜಾತಿ, ಪ್ರಾದೇಶಿಕವಾರು ಲೆಕ್ಕಾಚಾರ ನಡೆದಿರುವುದು ಸ್ಪಷ್ಟ.

ಪರಿಶಿಷ್ಟ ಜಾತಿಗೆ ಸೇರಿದ 12, ಬುಡಕಟ್ಟು ಜನಾಂಗಕ್ಕೆ ಸೇರಿದ 8 ಮಂದಿ ಸ್ಥಾನ ಪಡೆದಿದ್ದಾರೆ. ಈಶಾನ್ಯ ರಾಜ್ಯಗಳಿಗೆ ಸೇರಿದ ಐವರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೊಸ ಸಚಿವರ ಪೈಕಿ ವಕೀಲರು, ವೈದ್ಯರು, ಎಂಜಿನಿಯರ್‌ ಗಳು, ಮಾಜಿ ಮುಖ್ಯ ಮಂತ್ರಿಗಳು ಸೇರಿದ್ದು ಎಲ್ಲ ದೃಷ್ಟಿಯಿಂದಲೂ ಅತ್ಯಂತ ಸಮತೋಲಿತ ಮತ್ತು ಸಂತುಲಿತ ಸಂಪುಟ ಹೊಂದುವ ಪ್ರಯತ್ನ­ವನ್ನು ನಡೆಸಿದ್ದಾರೆ. ಇನ್ನೊಂದು ವೈಶಿಷ್ಟ ಎಂದರೆ ಸಂಪುಟ­ದ ಸರಾಸರಿ ವಯಸ್ಸು 58. ಈ ಮೂಲಕ ಆಡಳಿತ ಯಂತ್ರ­ವನ್ನು ಮತ್ತಷ್ಟು ಚುರುಕಾ­ಗಿಸಲು ಮೋದಿ ಪಣತೊಟ್ಟಂತೆ ಕಾಣುತ್ತಿದೆ. ಈ ಬಾರಿಯ ಪುನಾರಚನೆ ಕಸರತ್ತಿನಲ್ಲಿಯೂ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ಜೋಡಿಯ ರಾಜಕೀಯ ಚಾಣಾಕ್ಷತನ ಮತ್ತು ತಂತ್ರಗಾರಿಕೆ ಕೆಲಸ ನಿಚ್ಚಳ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.