ಕಡಿಮೆ ಪಾಸಿಟಿವಿಟಿ ಇದ್ದರಷ್ಟೆ ಅನ್ಲಾಕ್ : ಕೇಂದ್ರದಿಂದ ಹೊಸ ಮೂರು ಸೂತ್ರ
Team Udayavani, Jun 2, 2021, 8:00 AM IST
ಹೊಸದಿಲ್ಲಿ: ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಇರಬೇಕು. 60 ಮತ್ತು 45 ವರ್ಷ ವಯಸ್ಸಿ ಗಿಂತ ಮೇಲ್ಪಟ್ಟವರು, ಇತರ ಆರೋಗ್ಯ ಸಮಸ್ಯೆ ಇರುವ ಎಲ್ಲ ರಿಗೂ ಲಸಿಕೆ ಹಾಕಿಸಿರಬೇಕು, ಕೊರೊನಾ ನಿಯಂತ್ರಣ ಕ್ರಮಗಳ ಜಾರಿಗೆ ಸಮುದಾಯಗಳು ಮುಂದೆ ಬರಬೇಕು…
-ಇದು ಅನ್ಲಾಕ್ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೊರಡಿಸಿರುವ ಹೊಸ ಮಾರ್ಗಸೂಚಿ. ದೇಶದಲ್ಲಿ 2ನೇ ಅಲೆಯ ಸೋಂಕು ಸಂಖ್ಯೆ ಇಳಿಮುಖವಾಗುತ್ತಿದೆ. ಅದಕ್ಕೆ ಪೂರಕವಾಗಿ ಉತ್ತರ ಪ್ರದೇಶ, ದಿಲ್ಲಿ, ಬಿಹಾರ ಸರಕಾರಗಳು ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸಲು ಆರಂಭಿ ಸಿವೆ. ಅದಕ್ಕೆ ಪೂರಕವಾಗಿ ಈ ಹೊಸ ಮಾರ್ಗಸೂಚಿ ಹೊರಬಿದ್ದಿದೆ.
ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ದೃಢೀಕರಿಸಲು ಆಯಾ ಪ್ರದೇಶದಲ್ಲಿ 2 ವಾರಗಳ ಮುನ್ನ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಆಗಿರಬೇಕು ಎಂದು ಡಬ್ಲ್ಯುಎಚ್ಒ ನಿಯಮ ಇದೆ. ಹೀಗಾಗಿ ಜಿಲ್ಲೆಗಳಲ್ಲಿ ಸದ್ಯ ಘೋಷಣೆ ಮಾಡಿರುವ ಕೊರೊನಾ ಪ್ರತಿಬಂಧಕ ಕ್ರಮಗಳನ್ನು ತೆರವುಗೊಳಿಸುವ ಮುನ್ನ ಈ ಅಂಶದ ಬಗ್ಗೆ ಗಮನ ನೀಡಬೇಕು ಎಂದು ಸೂಚಿಸಲಾಗಿದೆ. ಲಸಿಕೆ ವಿತರಣೆ ಪೂರ್ತಿಯಾಗಿರುವುದರ ಜತೆಗೆ ಸೋಂಕು ನಿಯಂತ್ರಣಕ್ಕೆ ಬರುವಂತಾಗಲು ಸಮು ದಾಯಗಳೇ ತಮ್ಮ ವ್ಯಾಪ್ತಿಯಲ್ಲಿ ಪ್ರತಿಬಂಧಕ ಕ್ರಮಗಳನ್ನು ಆದ್ಯತೆ ಮತ್ತು ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಲು ಮುಂದಾಗಬೇಕು ಎಂದು ಸರಕಾರ ಪ್ರತಿಪಾದಿಸಿದೆ.
54 ದಿನಗಳಲ್ಲಿ ಕನಿಷ್ಠ ಸೋಂಕು ದಾಖಲು
ದೇಶದಲ್ಲಿ ಕಳೆದ 54 ದಿನಗಳಿಗೆ ಹೋಲಿಸಿದರೆ ಕನಿಷ್ಠ ಪ್ರಮಾಣದ ಸೋಂಕು ದಾಖಲಾಗಿದೆ. ಸೋಮವಾರದಿಂದ ಬುಧವಾರದ ಅವಧಿಯಲ್ಲಿ 1,27,510 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದರೆ 2,795 ಮಂದಿ ಜೀವ ಕಳೆದುಕೊಂಡಿದ್ದಾರೆ. ಕಳೆದ 35 ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಸಕ್ರಿಯ ಸೋಂಕು ಸಂಖ್ಯೆ ಕೂಡ 43 ದಿನಗಳ ಬಳಿಕ 18,95,520ಕ್ಕೆ ಇಳಿದಿದೆ. ಅಂದರೆ ಕಳೆದ 24 ತಾಸುಗಳ ಅವಧಿಯಲ್ಲಿ 1,30,572 ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 6.62 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್