Watch: ಅಂಗಡಿ ಮುಂಭಾಗದ ಬಲ್ಬ್ ಕದ್ದ ಪೊಲೀಸ್ ಕಾನ್ಸ್ ಟೇಬಲ್ ಅಮಾನತು-ವಿಡಿಯೋ ವೈರಲ್
ವರ್ಮಾಗೆ ಇತ್ತೀಚೆಗಷ್ಟೇ ಪ್ರಮೋಷನ್ ನೀಡಿ ಫುಲ್ಪುರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
Team Udayavani, Oct 15, 2022, 3:42 PM IST
ಲಕ್ನೋ: ಅಂಗಡಿಯ ಹೊರಭಾಗದಲ್ಲಿ ಉರಿಯುತ್ತಿದ್ದ ಬಲ್ಬ್ ಅನ್ನು ಕಳವುಗೈದ ಆರೋಪದಡಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಪೊಲೀಸ್ ಕಾನ್ಸ್ ಟೇಬಲ್ ಅಮಾನತುಗೊಂಡಿದ್ದು, ಬಲ್ಬ್ ಕಳವು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಇಂಡಿಯಾ ಆರ್ಭಟಕ್ಕೆ ಲಂಕಾ ಪತನ: ಏಳನೇ ಬಾರಿಗೆ ಏಷ್ಯಾ ಕಪ್ ಗೆದ್ದ ಭಾರತ ವನಿತಾ ತಂಡ
ಎಂದಿನಂತೆ ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಬಂದ ಸಂದರ್ಭದಲ್ಲಿ ಬಲ್ಬ್ ಕಾಣೆಯಾಗಿರುವುದು ಮಾಲೀಕನ ಗಮನಕ್ಕೆ ಬಂದಿತ್ತು. ಬಳಿಕ ಅವರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ, ಅಚ್ಚರಿಯಾಗಿತ್ತು ಯಾಕೆಂದರೆ ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಬಲ್ಬ್ ತೆಗೆದು ಕಿಸೆಯೊಳಗೆ ಹಾಕಿಕೊಂಡಿರುವ ದೃಶ್ಯ ಸೆರೆಯಾಗಿತ್ತು.
“ಮುಚ್ಚಿದ್ದ ಅಂಗಡಿ ಬಳಿ ಬಂದು ಸುತ್ತಮುತ್ತ ಗಮನಿಸಿದ ನಂತರ ಕಾನ್ಸ್ ಟೇಬಲ್ ರಾಜೇಶ್ ವರ್ಮಾ, ಉರಿಯುತ್ತಿದ್ದ ಬಲ್ಬ್ ಅನ್ನು ತೆಗೆದು, ಕಿಸಿಯೊಳಗೆ ಹಾಕಿ ನಡೆದು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ದಸರಾ ಹಬ್ಬದಂದು ವರ್ಮಾ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.
Uttar Pradesh: Policeman steals LED bulb, caught on CCTV camera #UttarPradesh #LED #WATCH #UPPolice #ViralVideo #वायरल #Prayagraj #cctv pic.twitter.com/WEtp86Lbt2
— Harish Deshmukh (@DeshmukhHarish9) October 15, 2022
ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕವಾಗಿ ತೀವ್ರ ಟೀಕೆ ವ್ಯಕ್ತವಾಗಿದ್ದು, ಬಳಿಕ ಕಾನ್ಸ್ ಟೇಬಲ್ ವರ್ಮಾ ಅವರನ್ನು ಅಮಾನತು ಮಾಡಲಾಗಿದೆ. ವರ್ಮಾಗೆ ಇತ್ತೀಚೆಗಷ್ಟೇ ಪ್ರಮೋಷನ್ ನೀಡಿ ಫುಲ್ಪುರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
ಕತ್ತಲಾಗಿದ್ದರಿಂದ ಆ ಬಲ್ಬ್ ಅನ್ನು ತೆಗೆದು ತಾನು ನಿಂತಿದ್ದ ಜಾಗದಲ್ಲಿ ಬಲ್ಬ್ ಹಾಕಿಕೊಂಡಿರುವುದಾಗಿ ಅಮಾನತುಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್ ವರ್ಮಾ ಸಮಜಾಯಿಷಿ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು