UP Judge;ಲೈಂಗಿಕ ಕಿರುಕುಳ:..ಸಾಯಲು ಅನುಮತಿ ಕೊಡಿ;CJIಗೆ ಮಹಿಳಾ ಜಡ್ಜ್ ಬರೆದ ಪತ್ರ ವೈರಲ್
2023ರ ಜುಲೈನಲ್ಲಿ ಮಹಿಳಾ ಜಡ್ಜ್ ಹೈಕೋರ್ಟ್ ನ ಆಂತರಿಕ ದೂರು ಸಮಿತಿಗೆ ದೂರನ್ನು ಸಲ್ಲಿಸಿದ್ದರು
Team Udayavani, Dec 15, 2023, 12:07 PM IST
ನವದೆಹಲಿ: ಹಿರಿಯ ನ್ಯಾಯಾಧೀಶರ ಲೈಂಗಿಕ ಕಿರುಕುಳದಿಂದ ರೋಸಿ ಹೋಗಿ, ತನಗೆ ಸಾಯಲು ಅನುಮತಿ” ಕೊಡಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಲ್ಲಿ ಉತ್ತರಪ್ರದೇಶದ ಮಹಿಳಾ ನ್ಯಾಯಾಧೀಶೆಯೊಬ್ಬರು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಸಿಜೆಐ ಸೂಚಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Mandya: ಕೌಟುಂಬಿಕ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
“ನಾನು ಮಿತಿಮೀರಿದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನನ್ನ ಕಸದಂತೆ ನಡೆಸಿಕೊಳ್ಳಲಾಗುತ್ತಿದೆ. ನಾನೊಂದು ನಿರುಪಯುಕ್ತ ಕೀಟ ಎಂಬಂತೆ ಭಾಸವಾಗುತ್ತಿದೆ” ಎಂಬುದಾಗಿ ನ್ಯಾಯಾಧೀಶೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಅವರ ಸೂಚನೆ ಮೇರೆಗೆ, ಸುಪ್ರೀಂಕೋರ್ಟ್ ನ ಜನರಲ್ ಸೆಕ್ರೆಟರಿ ಅತುಲ್ ಎಂ.ಕುಹ್ರೇಕರ್ ಅವರು ಅಲಹಾಬಾದ್ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಗೆ ಪತ್ರ ಬರೆದು ಮಹಿಳಾ ಜಡ್ಜ್ ದೂರಿನ ಕುರಿತು ವರದಿ ನೀಡುವಂತೆ ತಿಳಿಸಿರುವುದಾಗಿ ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಈ ಬಹಿರಂಗ ಪತ್ರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ನ ಹಂಗಾಮಿ ಜಸ್ಟೀಸ್ ಅವರಿಗೂ ಕೂಡಾ ಸೆಕ್ರೆಟರಿ ಜನರಲ್ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
2023ರ ಜುಲೈನಲ್ಲಿ ಮಹಿಳಾ ಜಡ್ಜ್ ಹೈಕೋರ್ಟ್ ನ ಆಂತರಿಕ ದೂರು ಸಮಿತಿಗೆ ದೂರನ್ನು ಸಲ್ಲಿಸಿದ್ದರು. ಆ ಹಿನ್ನೆಲೆಯಲ್ಲಿ ಜಡ್ಜ್ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಆದರೆ ತನಿಖೆ ಕಾಟಾಚಾರಕ್ಕೆ ನಡೆಸಲಾಗಿತ್ತು. ಅದರಿಂದ ಯಾವುದೇ ಕ್ರಮ ಜರುಗಲಿಲ್ಲ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ನನಗೆ ಎಲ್ಲಿಯೂ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ನನಗೆ ಬದುಕುವ ಯಾವ ಇಚ್ಛೆಯೂ ಇಲ್ಲ. ಕಳೆದ ಒಂದೂವರೆ ವರ್ಷದಿಂದ ನಡೆದಾಡುವ ಶವದಂತೆ ಮಾಡಲಾಗಿದೆ. ನನಗೆ ಈ ಜೀವರಹಿತ ಶರೀರ ಬೇಕಾಗಿಲ್ಲ. ಕನಿಷ್ಠ ಪಕ್ಷ ನನಗೆ ಸಾಯಲು ಅನುಮತಿ ಕೊಡಿ” ಎಂದು ಸಿಜೆಐಗೆ ಬರೆದ ಎರಡು ಪುಟಗಳ ಪತ್ರದಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ