98 ವರ್ಷದ ಈ ತಾತನ ಕೆಲಸ ಎಂಥವರಿಗೂ ಸ್ಪೂರ್ತಿ..!
98 ವರ್ಷದ ಈ ತಾತ
Team Udayavani, Mar 10, 2021, 9:53 PM IST
ರಾಯ್ ಬರೇಲಿ : ಜೀವನ ನಡೆಸುವುದು ಎಷ್ಟು ಕಷ್ಟ ಅಂದ್ರೆ ಕೆಲವರಿಗೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ವಯಸ್ಸಾಗಿರೊ ಅದೆಷ್ಟೋ ಜನ ತಮ್ಮ ಮಕ್ಕಳಿಂದ ದೂರವಾಗಿ ಭಿಕ್ಷೆ ಬೇಡಿ ಬದುಕು ಸಾಗಿಸುತ್ತಿದ್ದಾರೆ. ಆದ್ರೆ ಅಂತಹ ವಯಸ್ಸಾದ ಮಂದಿಗೆ ಈ ತಾತ ಸ್ಪೂರ್ತಿಯಾಗಿದ್ದಾರೆ.
ಹೌದು ಉತ್ತರ ಪ್ರದೇಶದ ರಾಯ್ ಬರೇಲಿ ಪ್ರದೇಶದ ವಿಜಯ ಪಾಲ್ ಎಂಬ 98 ವರ್ಷದ ತಾತ ತನ್ನ ಜೀವನ ನಡೆಸಲು ಚಾನ ಚಾಟ್(ಶೇಂಗಾ ಬೀಜಗಳಿಂದ ಮಾಡಿದ ಪದಾರ್ಥ) ಮಾಡಿ ಮಾರುತ್ತಿದ್ದಾರೆ. ಯಾರೋ ಈ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಪೋಸ್ಟ್ ಮಾಡಿದ ಕೆಲ ಹೊತ್ತಿನಲ್ಲೆ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು ಮೆಚ್ಚುಗೆಗೆ ವ್ಯಕ್ತವಾಗುತ್ತಿದೆ.
A 98 yr old man who sells chana outside his village in UP’s Rae Bareli was felicitated yesterday by @VaibhavIAS .The gentleman’s story gained traction after this viral video shot by a customer where he can be heard saying this is not out of compulsion but to stay fit … pic.twitter.com/oLokIr3dMj
— Alok Pandey (@alok_pandey) March 5, 2021
ಈ ಇಳಿ ವಯಸ್ಸಿನಲ್ಲೂ ಹೀಗೇಕೆ ಕೆಲಸ ಮಾಡುತ್ತಿದ್ದೀರಿ ಎಂದು ತಾತನಿಗೆ ಕೇಳಿದ್ರೆ, ಇದೇನು ಕಡ್ಡಾಯವಲ್ಲ. ಆದ್ರೆ ಮನೆಯಲ್ಲಿ ಕುಳಿತು ಏನು ಮಾಡೋದು ಅಂತ ಇಲ್ಲಿ ವ್ಯಾಪಾರ ಮಾಡುತ್ತೇನೆ ಎಂದಿದ್ದಾರೆ.
ಆದ್ರೆ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ತಾತ ವಿಜಯ್ ಪಾಲ್ ಮೇಲೆ ಕನಿಕರ ಬಾರದಿರದು. ಇನ್ನು ತಾತನ ವಿಡಿಯೋ ನೋಡಿದ ಉತ್ತರ ಪ್ರದೇಶ ಸರ್ಕಾರ ಗೌರವಿಸಿದೆ. ಅಲ್ಲದೆ ಆ ಪ್ರದೇಶ ಜಿಲ್ಲಾಧಿಕಾರಿ ತಾತನಿಗೆ 11000 ಹಣ ಮತ್ತು ಒಂದು ಊರುಗೋಲನ್ನು ಕೊಡಿಸಿದೆ.
ನೋಡಿ ಇಂತಹ ಇಳಿ ವಯಸ್ಸಿನಲ್ಲೂ ಯಾರಿಗೂ ಭಾರವಾಗದೆ ತನ್ನ ಕಾಲ ಮೇಲೆ ತಾನು ನಿಲ್ಲಬೇಕು ಎಂಬ ಹಂಬಲದಿಂದ ತಾತ ಸಣ್ಣ ವ್ಯಾಪಾರ ಮಾಡುತ್ತಿದ್ದಾರೆ. ಈ ತಾತ ಅದೆಷ್ಟೋ ಜನರಿಗೆ ಮಾದರಿಯಾಗಿದ್ದಾರೆ ಅಂದ್ರೆ ತಪ್ಪಾಗುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ