ಪ್ರಧಾನಮಂತ್ರಿ ಆವಾಸ್ ಯೋಜನೆ ಕಳಪೆ ಸಾಧನೆ ಖಾದರ್ ಆಕ್ರೋಶ
Team Udayavani, Mar 9, 2020, 10:30 PM IST
ಬೆಂಗಳೂರು: ಕೆಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ರಾಜ್ಯ ಸರ್ಕಾರ ಕಳಪೆ ಸಾಧನೆ ಮಾಡಿರುವ ಬಗ್ಗೆ ಮಾಜಿ ಸಚಿವ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಸೂರು ಕಟ್ಟಿಕೊಡಬೇಕು. ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಹಣ ನೀಡಬೇಕು. 2019-20 ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 41 ಸಾವಿರ ಫಲಾನುಭವಿಗಳಲ್ಲಿ ಕೇವಲ 21 ಮನೆಗಳನ್ನು ಮಾತ್ರ ಪೂರ್ಣಗೊಳಿಸಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ. ಕನಿಷ್ಠ 20 ಸಾವಿರ ಮನೆಗಳನ್ನಾದರೂ ನಿರ್ಮಾಣ ಮಾಡಿರಬೇಕಿತ್ತು ಎಂದು ವಾಗ್ಧಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅದರೊಂದಿಗೆ ಇಚ್ಚಾ ಶಕ್ತಿಯ ಕೊರತೆ ಇರುವುದರಿಂದ ಬಡವರ ಪರ ಯೋಜನೆ ಮೂಲೆಗುಂಪಾಗಿದೆ. ರಾಜ್ಯ ಸರ್ಕಾರ ಜನರ ಸಮಸ್ಯೆ ಬಗೆ ಹರಿಸುವ ಬದಲು ಅವರ ಆಂತರಿಕ ತಿಕ್ಕಾಟ ಬಗೆ ಹರಿಸುವುದರಲ್ಲಿಯೇ ಹೆಚ್ಚು ಸಮಯ ಮೀಸಲಿಟ್ಟಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ