ಜೋಶಿಮಠಕ್ಕೆ 2000 ಕೋಟಿ ರೂ. ಪರಿಹಾರ ಒದಗಿಸಲು ಉತ್ತರಾಖಾಂಡ ಸರ್ಕಾರದಿಂದ ಕೇಂದ್ರಕ್ಕೆ ಮನವಿ
Team Udayavani, Mar 10, 2023, 3:16 PM IST
ಡೆಹರಾಡೂನ್: ಭೂಕುಸಿತದಿಂದಾಗಿ ನಲುಗಿಹೋಗಿರುವ ಉತ್ತರಾಖಾಂಡದ ಪ್ರಸಿದ್ಧ ಪ್ರವಾಸಿ ತಾಣ ಜೋಶಿಮಠದ ಕುಸಿತ ನಿಯಂತ್ರಣ ಮತ್ತು ಜನರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ 2000 ಕೋಟಿ ರೂ. ಪರಿಹಾರ ಒದಗಿಸುವಂತೆ ಉತ್ತರಾಖಾಂಡ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಉತ್ತರಾಖಾಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಾರ್ಯದರ್ಶಿ ಆರ್. ಮೀನಾಕ್ಷಿ ಸುಂದರಮ್ ಮಾಹಿತಿ ನೀಡಿದ್ದಾರೆ.
ʻರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂತಿಮ ವರದಿ ಬಂದ ಬಳಿಕ ನಾವು ಕೇಳಿದ ಪರಿಹಾರದ ಮೊತ್ತದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆʼ ಎಂದೂ ಹೇಳಿದ್ದಾರೆ.
ಉತ್ತರಾಖಾಂಡ ಸರ್ಕಾರ ಮಾರ್ಚ್ 3 ರಿಂದಲೇ ಕಟ್ಟಡಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡುವ ಕಾರ್ಯವನ್ನು ಆರಂಭಿಸಿದೆ. ಇದಕ್ಕಾಗೇ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನೇತೃತ್ವದಲ್ಲಿ ಪುನರ್ವಸತಿ ಯೋಜನೆಯೊಂದನ್ನು ಪ್ರಾರಂಭಿಸಲಾಗಿದ್ದು ಮೊದಲ ದಿನವೇ ಮೂರು ಕುಟಂಬಗಳಿಗೆ ಒಟ್ಟು 63.20 ಲಕ್ಷ ರೂ. ಮೊತ್ತದ ಪರಿಹಾರವನ್ನು ನೀಡಲಾಗಿದೆ.
ಜೋಶಿಮಠದ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಫೆಬ್ರವರಿಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಉತ್ತರಾಖಾಂಡ ಸರ್ಕಾರ ತೀರ್ಮಾನ ಕೈಗೊಂಡಿತ್ತು.
ಇದನ್ನೂ ಓದಿ : ತನ್ನೊಂದಿಗೆ ಮಾತು ಬೇಡ ಎಂದ ಮಹಿಳೆಯನ್ನು ಹತ್ಯೆಗೈದ ಕ್ಯಾಬ್ ಚಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್