ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಹಿಂದೂಗಳು ಒಳ್ಳೆಯವರಲ್ಲ : ಸಚಿವ ವಿ.ಸೋಮಣ್ಣ


Team Udayavani, Sep 10, 2020, 5:57 PM IST

ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಹಿಂದೂಗಳು ಒಳ್ಳೆಯವರಲ್ಲ : ಸಚಿವ ವಿ.ಸೋಮಣ್ಣ

ಬೆಂಗಳೂರು : ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ -ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.

ನಗರದ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ನೆರವೇರಿಸಿ ಮಾತನಾಡಿದ ಸೋಮಣ್ಣ, ಈ ಕೆಲಸಕ್ಕೂ ಜಾತಿ ಧರ್ಮಕ್ಕೂ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸೋಮಣ್ಣ, ಕೋವಿಡ್ ನಿಂದಾಗಿ ಸಾಮಾನ್ಯ ಬಡವ ಕಳೆದ ಐದು ತಿಂಗಳಿನಿಂದ ಕಂಗಾಲಾಗಿದ್ದಾನೆ. ಕಾಂಗ್ರೆಸ್ ನವರು 75 ವರ್ಷಗಳಿಂದ ನಿಮ್ಮನ್ನ ವೋಟ್ ಬ್ಯಾಂಕ್ ಗಾಗಿ ಬಳಸಿಕೊಂಡಿದ್ದಾರೆ, ಬಳಸಿಕೊಳ್ಳುತ್ತಿದ್ದಾರೆ. ಇನ್ನು ಎಷ್ಟು ವರ್ಷ ನೀವು ಮೋಸ ಹೋಗ್ತೀರಾ..?. ನಾನು ಯಾವತ್ತಾದರೂ ಅನ್ಯಾಯ ಮಾಡಿದ್ದೀನಾ..? ಆದರೂ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ನನಗೆ ಬೂಟಾಟಿಕೆ ಗೊತ್ತಿಲ್ಲ, ನಾನು ಕಾಮ್ ಕರ್ನೆ ವಾಲಾ ( ಜನರ ಕೆಲಸ ಮಾಡುವವನು) ಎಂದು ಹೇಳಿದರು.

ಇದನ್ನೂ ಓದಿ : ಮಜೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬೊಳ್ಳಿ

ಇನ್ನಾದರೂ ನೀವು ಬದಲಾಗಿ, ದೇಶದಲ್ಲಿ ನರೇಂದ್ರ ಮೋದಿ ಅವರು ಬದಲಾವಣೆಯ ಪರ್ವ ಶುರು ಮಾಡಿದ್ದಾರೆ. ನಿಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತೆ ಮಾಡಿ ಎಂದ ಸೋಮಣ್ಣ ಅವರು, ಅಭಿವೃದ್ಧಿಗಾಗಿ ನೀವು ನಮ್ಮನ್ನ ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು. ನಾನು ಈ ಪ್ರದೇಶದ ಬಡವರಿಗಾಗಿ 1 ಸಾವಿರ ಮನೆಗಳನ್ನು ಕಟ್ಟಿಕೊಡುತ್ತಿದ್ದೇನೆ. ನನ್ನ ಬೆಂಬಲಿಸದಿದ್ದರೂ ಪರವಾಗಿಲ್ಲ. ಆದ್ರೆ ನನ್ನ ವಿರುದ್ಧ ಸುಮ್ಮನೆ ಅಪಪ್ರಚಾರ ಮಾಡಬೇಡಿ. ನಾನು ಬಸವ ತತ್ವದಲ್ಲಿ ನಂಬಿಕೆಯನ್ನಿಟ್ಟುಕೊಂಡು ಅದರಂತೆ ನಡೆಯುತ್ತಿರುವ ವ್ಯಕ್ತಿ. ಅದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನೀವು ಬೆಂಬಲಿಸದಿದ್ದರೂ ನಾನು ನಿಮ್ಮ ಸೇವೆ ಮಾಡುತ್ತೇನೆ. ಈ ಈದ್ಗಾ ಮೈದಾನವನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನ ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದ್ರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ. ಜಮೀರ್ ಕೇವಲ ಮುಸಲ್ಮಾರ ಎಂಎಲ್ ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್ ಎ ಎಂದು ಹೇಳಿದರು.

ಇದನ್ನೂ ಓದಿ : ಲಡಾಖ್-ಫಿಂಗರ್ 4; ತಂತ್ರಗಾರಿಕೆಯಿಂದಲೇ ಚೀನಾ ಸೇನೆಯನ್ನು ಕಟ್ಟಿ ಹಾಕಿದ ಭಾರತೀಯ ಸೇನಾಪಡೆ!

ನಿಮಗೆ ನೂರು ಕೋಟಿ ರೂಪಾಯಿ ಕೆಲಸ ಇದ್ದರೂ ಪರವಾಗಿಲ್ಲ ನಾನು ಮಾಡಿಕೊಡುತ್ತೇನೆ. ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ಕೊಟ್ಟಿಕೊಡುತ್ತಿದ್ದೇನೆ. ಈ ವರೆಗೂ ಯಾರು ಚಾಲೆಂಜ್ ಹಾಕಿಲ್ಲ, ಜೂನ್ ಒಳಗೆ ಮನೆ ಕಟ್ಟಿಕೊಡುತ್ತೇನೆ. ಇದು ಆಗಿಲ್ಲ ಎಂದ್ರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದು ನಾನು ಮಾತ್ರ. ನಾನು ಕೆಲಸ ಮಾಡಿ ತೋರಿಸುತ್ತೇನೆ. ಯಾಕೆ ಈ ಹಿಂದೆ ಇದ್ದವರು ಮಾಡಲ್ಲಿಲ್ಲ..? ಎಂದು ಪ್ರಶ್ನಿಸಿದರು.

ನಾವ್ಯಾರು ನಿಮ್ಮ ಶತ್ರುಗಳಲ್ಲ, ನಾವು ಯಾರಿಗೂ ಅನ್ಯಾಯ ಮಾಡುವವರಲ್ಲ. ಇನ್ನೂ ಎರಡು ಮುಕ್ಕಾಲು ವರ್ಷ ನನಗೆ ಅಧಿಕಾರ ಇದೆ. ಅದನ್ನು ನೀವು ಉಪಯೋಗಿಸಿಕೊಳ್ಳಿ ಎಂದ ಸೋಮಣ್ಣ, ನನಗೆ ಬೆಂಬಲಿಸದಿದ್ದರೂ ಪರವಾಗಿಲ್ಲ, ಆದ್ರೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.

ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ. ನಿಮ್ಮಲ್ಲಿರುವ ಬಡವರ ಲೀಸ್ಟ್ ಕೊಡಿ, ಅವರಿಗೆ ಮನೆ ಕೊಟ್ಟಿಕೊಡಲು ಮೂರುವರೆ ಲಕ್ಷ ರೂಪಾಯಿ ದುಡ್ಡು ಕೊಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಚಿವರು, ನಾಯಂಡ ಹಳ್ಳಿ ವಾರ್ಡ್ ಸಂಖ್ಯೆ – 131ರಲ್ಲಿ ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಅಂಡರ್ ಪಾಸ್ ಅನ್ನು ಅಭಿವೃದ್ದಿ ಪಡಿಸಿ ಲೋಕಾರ್ಪಣೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿಯೇ ನನ್ನ ಧ್ಯೇಯ, ತಾಂತ್ರಿಕವಾಗಿ ಸರ್ವೆ ಮಾಡಿಸಿ ಯಾರಿಗೂ ತೊಂದರೆ ಆಗದಂತೆ ಈ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಜನರ ಪ್ರತಿನಿಧಿಗಳು ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆನ್ನುವುದು ನನ್ನ ಸಂಕಲ್ಪವಾಗಿದೆ. ಈ ಅಂಡರ್ ಪಾಸ್ ಯೋಜನೆಯನ್ನು ಸುಮಾರು 8.30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.