ಇನ್ನು ಗರ್ಭಿಣಿಯರಿಗೂ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ


Team Udayavani, Jun 30, 2021, 8:00 AM IST

ಇನ್ನು ಗರ್ಭಿಣಿಯರಿಗೂ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ಹೊಸದಿಲ್ಲಿ: ದೇಶಾದ್ಯಂತ ಇನ್ನು ಮುಂದೆ ಗರ್ಭಿಣಿಯರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸರಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಗರ್ಭ ಧರಿಸುವಿಕೆಯು ಕೊರೊನಾ ರಿಸ್ಕ್ ಅನ್ನು ಹೆಚ್ಚಿಸುವುದಿಲ್ಲ’ ಎಂಬುದನ್ನು ಸ್ಪಷ್ಟಪಡಿಸಿದೆ.

ಬಹುತೇಕ ಗರ್ಭಿಣಿಯರಿಗೆ ಸೋಂಕಿಗೊಳಗಾದರೂ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರ ಆರೋಗ್ಯ ಬೇಗನೆ ಹದಗೆಡಬಹುದು. ಹೀಗಾಗಿ ತಮ್ಮನ್ನು ಹಾಗೂ ತಮ್ಮ ಹೊಟ್ಟೆಯಲ್ಲಿರುವ ಮಗುವನ್ನು ರಕ್ಷಿಸಿಕೊಳ್ಳಬೇಕೆಂದರೆ ಅವರು ಲಸಿಕೆ ಪಡೆಯುವುದು ಮುಖ್ಯ ಎಂದು ಸರಕಾರ ತಿಳಿಸಿದೆ.

ಮಾರ್ಗಸೂಚಿಯಲ್ಲೇನಿದೆ?: ಗರ್ಭಿಣಿಯರಿಗೆ ಸೋಂಕು ತಗಲಿದರೂ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದೇ ಗುಣಮುಖರಾಗಿದ್ದಾರೆ. ಆದರೆ ಗಂಭೀರ ರೋಗ ಲಕ್ಷಣ ಇರುವವರಿಗೆ ಅಪಾಯ ಹೆಚ್ಚಿರುವ ಕಾರಣ, ಅಂಥವರು ಆಸ್ಪತ್ರೆಗೆ ದಾಖಲಾಗಲೇಬೇಕು. ಅತ್ಯಧಿಕ ರಕ್ತದೊತ್ತಡ, ಮಧುಮೇಹ, ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ, ಅತಿಕಾಯ, 35 ವರ್ಷ ಮೇಲ್ಪಟ್ಟವರು ಹೆಚ್ಚಿನ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಕೊರೊನಾ ಸೋಂಕಿತ ತಾಯಿಗೆ ಜನಿಸಿದ ಶೇ.95ರಷ್ಟು ಮಕ್ಕಳು ಆರೋಗ್ಯವಂತರಾಗಿದ್ದಾರೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಧಿ ಪೂರ್ವ ಹೆರಿಗೆ, ಮಗುವಿನ ತೂಕ ಇಳಿಕೆಯಂಥ ಘಟನೆಗಳು ನಡೆದಿವೆ ಎಂದೂ ತಿಳಿಸಲಾಗಿದೆ.

ಎಲ್ಲ ಗರ್ಭಿಣಿಯರೂ ಕೋವಿನ್‌ ಆ್ಯಪ್‌ ನಲ್ಲಿ ನೋಂದಣಿ ಮಾಡಿಕೊಂಡು ಅಥವಾ ಲಸಿಕಾ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದು ಸರಕಾರ ತಿಳಿಸಿದೆ. ಜತೆಗೆ, ಅವರಿಗೆ ಲಸಿಕೆ ನೀಡುವ ಮುನ್ನ ಆ ಕುರಿತು ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ನೀಡುವಂತೆ ಮುಂಚೂಣಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ಇದೇ ವೇಳೆ, ಸೋಮವಾರದಿಂದ ಮಂಗಳವಾರಕ್ಕೆ ದೇಶದಲ್ಲಿ 37,566 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 907 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.