ಚಹಾ ಕುಡಿಯುವ ನೆಪದಲ್ಲಿ ಬಿಜೆಪಿಗೆ ಕರೆದುಕೊಂಡಿದ್ದರು! ಮರಳಿ ಕೈ ಸೇರಿದ ಕಾರ್ಪೋರೇಟರ್
Team Udayavani, Dec 5, 2019, 10:26 AM IST
ಬೆಂಗಳೂರು: ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ಕಾರ್ಪೋರೇಟರ್ ವಸಂತ್ ಕುಮಾರ್ ಅವರು ಮತ್ತೆ ಕೈ ತೆಕ್ಕೆಗೆ ಮರಳಿದ್ದಾರೆ.
ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಪಂಗಿ ರಾಮನಗರ ವಾರ್ಡ್ ನ ಕಾರ್ಪೋರೇಟರ್ ವಸಂತ್ ಕುಮಾರ್ ಅವರನ್ನು ದಿನೆಶ್ ಗುಂಡೂರಾವ್ ಮನವೊಲಿಸಿ ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದಾರೆ.
ನಂತರ ಮಾತನಾಡಿದ ದಿನೇಶ್ ಗುಂಡೂರಾವ್, ಈ ಚುನಾವಣೆಯಲ್ಲಿ ಬಿಜೆಪಿಯವರು ಏನೆನ್ ಮಾಡ್ತಿದಾರೆ ಎಂದು ಗೊತ್ತಾಗುತ್ತಿದೆ. ವಸಂತಕುಮಾರ್ ನಮ್ಮ ಜೊತೆಯಲ್ಲಿಯೇ ಇದ್ದರು.
ಅವರಿಗೆ ಟೀ ಕುಡಿಯುವ ನೆಪ ಮಾಡಿ ಅವರನ್ನು ಕರೆದುಕೊಂಡು ಹೋಗಿ ಹೂಬೊಕ್ಕೆ ಕೊಟ್ಟು ಫೋಟೊ ತೆಗೆದುಕೊಂಡು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ಅವರು ಒತ್ತಡಕ್ಕೆ ಒಳಗಾಗಿದ್ದರು. ಆದರೆ ಬಿಜೆಪಿಯವರ ಒತ್ತಡಕ್ಕೆ ಒಳಗಾಗದೆ ಮಾತೃಪಕ್ಷಕ್ಕೆ ಬಂದಿದ್ದಾರೆ. ಇದರಲ್ಲಿ ಸ್ವತ ಸಿಎಂ ಇದರಲ್ಲಿ ಭಾಗಿಯಾಗಿರುವುದು ಖಂಡನೀಯ. ಅವರು ಯಾವ ಪರಿಸ್ಥಿತಿಗೆ ಹೋಗಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ಬಿಜೆಪಿ ಈ ರೀತಿಯ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್