2024ರ ಲೋಕಸಭಾ ಚುನಾವಣೆಯಲ್ಲೂ ಗೆಲುವು: ಸಿದ್ದರಾಮಯ್ಯ

-ಪೆಟ್ರೋಲ್‌ ಡೀಸೆಲ್‌ ಅಡುಗೆ ಅನಿಲ, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ

Team Udayavani, Jun 11, 2023, 7:08 AM IST

SIDDA IMP

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ. ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೇವೆ. ಆಗ ಪೆಟ್ರೋಲ್‌ ಡೀಸೆಲ್‌ ಅಡುಗೆ ಅನಿಲ, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಶನಿವಾರ  ನಡೆದ ಬೃಹತ್‌ ಕೃತಜ್ಞತಾ ಸಮರ್ಪಣಾ ಸಭೆಯನ್ನುದ್ದೇಶಿಸಿ ಮಾತನಾಡಿ, ಬಡವರ, ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, ಅವರಿಗಾ-ಇವರಿಗಾ ಎನ್ನುವ ಗೊಂದಲ ಸೃಷ್ಟಿಸುತ್ತಾರೆ. ನೀವು ಗೊಂದಲಕ್ಕೆ ಒಳಗಾಗಬೇಡಿ. ಯೋಜನೆಗಳ ಅನುಕೂಲ ಪಡೆಯಿರಿ ಎಂದು ಹೇಳಿದರು.

ಇದು ನನ್ನ ಕೊನೇ ಚುನಾವಣೆ ಆಗಿದೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರಿಸುತ್ತೇನೆ ಎಂದರು. ಗಗನಕ್ಕೇರಿರುವ ರಸಗೊಬ್ಬರ ಬೆಲೆಯನ್ನು ಕಡಿಮೆ ಮಾಡಿ ಎಂದು ಸಭೆಯಲ್ಲಿದ್ದ ರೈತರು ಕೂಗಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ರಸಗೊಬ್ಬರ ಬೆಲೆ ಏರಿಸಿರುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ. ಬೆಲೆ ಇಳಿಸಬೇಕಾಗಿರುವುದೂ ಮೋದಿ ಸರ್ಕಾರವೇ. ಆದರೆ ಅವರು ಬೆಲೆ ಇಳಿಸಲ್ಲ. ನಾವು 2024 ರ ಲೋಕಸಭಾ ಚುನಾವಣೆಯಲ್ಲೂ ಗೆಲ್ಲುತ್ತೇವೆ. ಆಗ  ಬೆಲೆಗಳನ್ನು ಇಳಿಸುತ್ತೇವೆ ಎಂದರು. ಆಗ ನೆರೆದಿದ್ದ ಜನ, ನೀವು ಪ್ರಧಾನಿ ಆಗಬೇಕು ಎಂದು ಮುಗಿಲು ಮುಟ್ಟುವಂತೆ ಕೂಗಿದರು.

ವರುಣ ತಾಲೂಕು ಕೇಂದ್ರವಾಗಬೇಕೆಂದು ಜನರು ಕೇಳಿಲ್ಲ

ಮೈಸೂರು: ಮೈಸೂರು ಜಿಲ್ಲೆಯಲ್ಲಿ  ವರುಣ ತಾಲೂಕು ಕೇಂದ್ರವಾಗಬೇಕೆಂದು ಜನರು ಕೇಳಿಲ್ಲ ಎಂದು ವರುಣ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸುತ್ತೂರಿನ ಹೆಲಿಪ್ಯಾಡ್‌ನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,   ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ  ಬಂದರೆ ವರುಣ ಕ್ಷೇತ್ರವನ್ನು ತಾಲೂಕು ಮಾಡುತ್ತೇವೆ ಎಂದು ಹೇಳಿದ್ದರು. ಇದನ್ನು ಜನ ಕೇಳಿಲ್ಲ. ವರುಣ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ. ಎಲ್ಲಿಯೂ ಜನ  ಕೇಳಿಲ್ಲ.  ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು  ಮಾಡುವುದಿಲ್ಲ. ವರುಣ ಕ್ಷೇತ್ರದ ಜನರು ಕೇಳಿದರೆ ಮಾಡುತ್ತೇವೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ಧಾಗ ತಮಗೆ ಬೇಕಾದವರಿಗೆ  ಭೂಮಿ ನೀಡಿರುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿಗಳು ಉತ್ತರಿಸಿದರು.

200 ಯೂನಿಟ್‌ ವಿದ್ಯುತ್‌ನ್ನು ಎಲ್ಲರೂ ತೆಗೆದುಕೊಳ್ಳಲೇಬೇಕು ಎಂದು ಕಡ್ಡಾಯವಿಲ್ಲ. ತೆಗೆದುಕೊಳ್ಳುವವರು ಪಡೆಯಬಹುದು. ಬೇಡ ಎನ್ನುವವರು ಬಿಲ್‌ ಹಣ ಕಟ್ಟಬಹುದು. ಒಂದು ವರ್ಷದಲ್ಲಿ ಬಳಕೆ ಮಾಡುವ ಯೂನಿಟ್‌ಗಳ ಸರಾಸರಿ ಆಧರಿಸಿ ಶೇ.10  ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಎಲ್ಲವನ್ನೂ ಒತ್ತಾಯಪೂರ್ವಕವಾಗಿ ಪಡೆದುಕೊಳ್ಳುವ ಪ್ರಯತ್ನ ಮಾಡಲಾಗುವುದು. -ಸಿದ್ದರಾಮಯ್ಯ, ಮುಖ್ಯಮಂತ್ರಿ

ಜೀರೋ ಟ್ರಾಫಿಕ್‌ ಕೊಟ್ಟಿದ್ದಕ್ಕೆ ಸಿದ್ದು ಗರಂ

ಮೈಸೂರು: ಮುಖ್ಯಮಂತ್ರಿಯಾಗಿರುವ ನನಗೆ ಜೀರೋ ಟ್ರಾಫಿಕ್‌ ಬೇಡ ಎಂದಿದ್ದೆ. ಆದರೂ, ಜೀರೋ ಟ್ರಾಫಿಕ್‌ ಏಕೆ ಕೊಟ್ಟಿದ್ದೀರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌  ಅವರ ವಿರುದ್ಧ ಗರಂ ಆದರು. ಮುಖ್ಯಮಂತ್ರಿಯಾದ ನಂತರ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಶಿಷ್ಟಾಚಾರದಂತೆ ಪೊಲೀಸರು ಜೀರೋ ಟ್ರಾಫಿಕ್‌ ನೀಡಿದ್ದರು. ಮೈಸೂರಿನ ಮಂಡಕಳ್ಳಿ ವಿಮಾನನಿಲ್ದಾಣದಿಂದ ಜಿಲ್ಲಾ ಪಂಚಾಯಿತಿ ಆವರಣದವರೆಗೂ ಜೀರೋ ಟ್ರಾಫಿಕ್‌ ನೀಡಲಾಗಿತ್ತು. ಇದರಿಂದ ಸಿದ್ದರಾಮಯ್ಯ ಗರಂ ಆದರು.  ನಾನು ಜೀರೋ ಟ್ರಾಫಿಕ್‌ ಬೇಡ ಎಂದಿದ್ದೆ. ಆದರೂ, ಏಕೆ ಮಾಡಿದ್ದೀರಿ? ಎಂದು  ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದರು. ಆಗ ಪೊಲೀಸ್‌ ಆಯುಕ್ತರು ಮೌನಕ್ಕೆ ಶರಣಾದರು. ಜೀರೋ ಟ್ರಾಫಿಕ್‌ ಮಾಡಬೇಡಿ ಎಂದು ಸಿದ್ದರಾಮಯ್ಯ ಸೂಚಿಸಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.