ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು
ನಾನು ತರಗತಿಯೊಳಗೆ ಬಂದಾಗ, ಚಿರತೆ ಇದ್ದಿರುವುದು ಕಾಣಿಸಿತ್ತು.
Team Udayavani, Dec 2, 2021, 1:10 PM IST
ಲಕ್ನೋ: ಉತ್ತರಪ್ರದೇಶದ ಅಲಿಗಢ್ ನಲ್ಲಿನ ಶಾಲೆಯೊಂದಕ್ಕೆ ಚಿರತೆಯೊಂದು ನುಗ್ಗಿ ತರಗತಿಯಲ್ಲಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ದಾಳಿ ನಡೆಸಿರುವ ಘಟನೆ ಬುಧವಾರ(ಡಿಸೆಂಬರ್ 01) ನಡೆದಿದೆ.
ಇದನ್ನೂ ಓದಿ:ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ
ಅಲಿಗಢ್ ನ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನ ತರಗತಿಯೊಳಕ್ಕೆ ಚಿರತೆಯೊಂದು ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ನಡೆಸಿತ್ತು. ಬಳಿಕ ಚಿರತೆಯನ್ನು ಕ್ಲಾಸ್ ರೂಂನೊಳಕ್ಕೆ ಕೂಡಿಹಾಕಲಾಗಿತ್ತು. ತರಗತಿಯೊಳಗೆ ಚಿರತೆ ನುಗ್ಗಿದ ವಿಷಯ ತಿಳಿದು, ಶಾಲೆಯ ಹೊರಗೆ ಸಿಬಂದಿಗಳು, ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಲ್ಲದೇ ಅರಣ್ಯಾಧಿಕಾರಿಗಳು ಚಿರತೆಯನ್ನು ಹಿಡಿದು ಕೊಂಡೊಯ್ಯುವವರೆಗೆ ತರಗತಿಯ ಹೊರಗೆ ಕಾಯುವಂತಾಗಿತ್ತು ಎಂದು ವರದಿ ವಿವರಿಸಿದೆ.
“ನಾನು ತರಗತಿಯೊಳಗೆ ಬಂದಾಗ, ಚಿರತೆ ಇದ್ದಿರುವುದು ಕಾಣಿಸಿತ್ತು. ಕೂಡಲೇ ನಾನು ಹೊರಗೆ ಬರುತ್ತಿದ್ದಾಗ, ನನ್ನ ಮೇಲೆ ದಾಳಿ ನಡೆಸಿತ್ತು” ಎಂದು ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿ ಲಕ್ಕಿ ರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾನೆ.
ವಿದ್ಯಾರ್ಥಿ ಕೈಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಾಗಿ ಕಾಲೇಜು ಪ್ರಾಂಶುಪಾಲರಾದ ಯೋಗೇಶ್ ಯಾದವ್ ತಿಳಿಸಿದ್ದಾರೆ. ವಿದ್ಯಾರ್ಥಿ ಹೊರಬಂದ ಕೂಡಲೇ ಕೋಣೆಗೆ ಬೀಗ ಹಾಕಿ, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು. ತರಗತಿಯೊಳಗೆ ಅಡ್ಡಾಡುತ್ತಿರುವ ಚಿರತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದಾಗಿ ವರದಿ ಹೇಳಿದೆ.
ವಿಡಿಯೋ ಕೃಪೆ: ಟಿವಿ9
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ