Throws Mic: ಸಂಗೀತ ಕಾರ್ಯಕ್ರಮದ ವೇಳೆ ಪ್ರೇಕ್ಷಕರ ಮೇಲೆ ಮೈಕ್ ಎಸೆದ ಪಾಕ್ ಗಾಯಕ

ತಾನು ಮಾಡಿದ ತಪ್ಪಿಗೆ ಸ್ಪಷ್ಟನೆ ನೀಡಿದ ಗಾಯಕ

Team Udayavani, Jan 31, 2024, 12:43 PM IST

Throws Mic: ಸಂಗೀತ ಕಾರ್ಯಕ್ರಮದ ವೇಳೆ ಅಭಿಮಾನಿಗಳ ಮೇಲೆ ಮೈಕ್ ಎಸೆದ ಪಾಕ್ ಗಾಯಕ

ಇಸ್ಲಾಮಾಬಾದ್: ಪಾಕಿಸ್ತಾನಿ ಗಾಯಕ ಮತ್ತು ಗೀತರಚನೆಕಾರ ಬಿಲಾಲ್ ಸಯೀದ್ ಅವರು ಇತ್ತೀಚೆಗೆ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಪ್ರೇಕ್ಷಕರತ್ತ ಮೈಕ್ ಎಸೆದು ವೇದಿಕೆಯಿಂದ ಹೊರನಡೆದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಕಾರಣವಾಯಿದೆ.

ಪಾಕಿಸ್ತಾನದ ಫಾಲಿಯಾದಲ್ಲಿ ಪಂಜಾಬ್ ಗ್ರೂಪ್ ಆಫ್ ಕಾಲೇಜ್ (ಪಿಜಿಸಿ) ಯುವ ಸಂಗೀತ ಉತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಗಾಯಕ ಬಿಲಾಲ್ ಸಯೀದ್ ತನ್ನ 2012 ರ ಹಿಟ್ ಸಾಂಗ್ ‘ಕು ಕು’ ಅನ್ನು ಹಾಡುತ್ತಿರುವುದು ನೋಡಬಹುದು ಈ ನಡುವೆ ಇದ್ದಕ್ಕಿದ್ದಂತೆ ಹಾಡು ನಿಲ್ಲಿಸಿ ಕೈಯಲ್ಲಿದ್ದ ಮೈಕ್ ಅನ್ನು ಪ್ರೇಕ್ಷಕರ ಮೇಲೆ ಬಲವಾಗಿ ಎಸೆದು ಸಂಗೀತ ಕಚೇರಿಯ ಮಧ್ಯದಲ್ಲೇ ವೇದಿಕೆಯಿಂದ ಹೊರನಡೆದಿದ್ದಾರೆ. ಇದರಿಂದ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಗೊಂದಲಕ್ಕೆ ಒಳಗಾಗಿದ್ದಾರೆ ವೇದಿಕೆಯಿಂದ ಹೊರನಡೆದ ಗಾಯಕ ಮತ್ತೆ ಬರಲೇ ಇಲ್ಲ ಇದರಿಂದ ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ಕೊನೆಗೊಳಿಸಬೇಕಾಯಿತು.

 

ಇದರಿಂದ ಕೋಪಗೊಂಡ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಗೀತಕಾರನ ವಿರುದ್ಧ ಕಿಡಿಕಾರಿದ್ದಾರೆ ಅಲ್ಲದೆ ಕೆಲವರು ಈತನನ್ನು ಅಮೆರಿಕದ ರಾಪರ್ ಕಾರ್ಡಿ ಬಿ ಗೆ ಹೋಲಿಸಿ ಕಾಮೆಂಟ್ ಮಾಡಿದ್ದಾರೆ. ಯಾಕೆಂದರೆ ಆತನೂ ಒಂದು ಕಾರ್ಯಕ್ರಮದಲ್ಲಿ ಇದೇ ರೀತಿ ಮೈಕ್ ಎಸೆದಿದ್ದ ಹಾಗಾಗಿ ಆತನಿಗೆ ಹೋಲಿಸಿ ಕಿಡಿಕಾರಿದ್ದಾರೆ.

ಸಂಗೀತ ಕಾರ್ಯಕ್ರಮದ ವೇಳೆ ಮೈಕ್ ಎಸೆದ ಕುರಿತು ಕೊನೆಗೂ ಮೌನ ಮುರಿದ ಪಾಕ್ ಸಂಗೀತಕಾರ ಬಿಲಾಲ್ ‘ ವೇದಿಕೆ ಎಂಬುದು ಯಾವತ್ತಿಗೂ ನನ್ನ ಪ್ರಪಂಚವಾಗಿದೆ; ಪ್ರದರ್ಶನ ನೀಡುವಾಗ ನನ್ನ ಮನಸ್ಸು ಸಂಪೂರ್ಣ ಪ್ರದರ್ಶನದ ಮೇಲಿರುತ್ತದೆ, ಪ್ರೇಕ್ಷಕರಿಗೆ ಯಾವುದೇ ರೀತಿಯಲ್ಲೂ ತೊಂದರೆ, ಕಿರಿಕಿರಿ ಆಗಬಾರದೆಂಬುದೇ ನನ್ನ ಗುರಿ, ಸಾಧ್ಯವಾದಷ್ಟು ಪ್ರೇಕ್ಷಕರಿಗೆ ಮನರಂಜನೆ ನೀಡುಬೇಕೆನ್ನುವುದು ನನ್ನ ಉದ್ದೇಶ ಇದಕ್ಕಾಗಿ ನನ್ನ ಅನಾರೋಗ್ಯ, ಒತ್ತಡ, ಚಿಂತೆಗಳನ್ನು ಮರೆತು ಬಿಡುತ್ತೇನೆ, ನನ್ನ ಅಭಿಮಾನಿಗಳಿಗಾಗಿ ನಾನು ಪ್ರದರ್ಶನ ಮಾಡುವಾಗ ಎಲ್ಲವನ್ನೂ ಬಿಟ್ಟುಬಿಡುತ್ತೇನೆ. ಮತ್ತು ಏನೇ ಆಗಲಿ, ನನಗೆ ಮತ್ತು ನನ್ನ ವೇದಿಕೆಗೆ ನನ್ನಿಂದ ಸಲ್ಲಬೇಕಾದ ಗೌರವಕ್ಕೆ ಏನೂ ಅಡ್ಡಿಯಾಗಬಾರದು ಎಂಬುದು ನನ್ನ ಧ್ಯೇಯ ಎಂದು ಹೇಳಿಕೊಂಡಿದ್ದಾರೆ.

‘ನಾನು ನನ್ನ ಅಭಿಮಾನಿಗಳನ್ನು ಹೆಚ್ಚು ಪ್ರೀತಿಸುತ್ತೇನೆ ಮತ್ತು ಕೆಲವೊಮ್ಮೆ ಆ ಪ್ರೀತಿ ಎರಡೂ ಕಡೆಯವರಿಗೂ ಅಗಾಧವಾಗಿ ಕಾಣುತ್ತದೆ. ಜನಸಂದಣಿಯಲ್ಲಿ ಯಾರೋ ಒಬ್ಬರು ಅನುಚಿತವಾಗಿ ವರ್ತಿಸುವುದು ಇದು ಮೊದಲ ಬಾರಿಗೆ ಅಲ್ಲ, ಆದರೆ ನಾನು ತಪ್ಪು ಪ್ರತಿಕ್ರಿಯೆ ನೀಡಿದ್ದು ಅದು ಮೊದಲ ಬಾರಿಗೆ! ನಾನು ಎಂದಿಗೂ ವೇದಿಕೆಯನ್ನು ಬಿಡಬಾರದಿತ್ತು,” ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Bilal Saeed (@bilalsaeed_music)

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.