ಕಲಾಪ ಕಾಟಾಚಾರಕ್ಕೆ ನಡೆಯದಿರಲಿ


Team Udayavani, Feb 6, 2021, 6:20 AM IST

ಕಲಾಪ ಕಾಟಾಚಾರಕ್ಕೆ ನಡೆಯದಿರಲಿ

ಪೂರ್ವ ನಿಗದಿಯಂತೆ ವಿಧಾನಸಭೆಯ ಅಧಿವೇಶನ ಮುಕ್ತಾಯವಾಗಿದೆ. ಪರಿಷತ್‌ ಇನ್ನೂ ಮೂರು ದಿನಗಳ ಕಾಲ ವಿಸ್ತರಣೆಯಾಗಿದೆ. ಉಭಯ ಸದನಗಳಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಬೆರಳೆಣಿಕೆಯಷ್ಟು ಸಚಿವರು, ಶಾಸಕರು ಮಾತ್ರ ಪಾಲ್ಗೊಂಡಿದ್ದು, ಬಹುತೇಕ ಸಚಿವರು, ಶಾಸಕರು ಸದನದ ಕಲಾಪಕ್ಕೆ ಹಾಜರಾಗುವುದಕ್ಕೂ ನಿರಾಸಕ್ತಿ ತೋರಿಸಿರುವುದು ಎದ್ದು ಕಾಣುತ್ತಿತ್ತು.

ವರ್ಷದಲ್ಲಿ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು ಎಂದು ರಾಜ್ಯ ಸರಕಾರವೇ ನಿಯಮಗಳನ್ನು ಮಾಡಿಕೊಂಡಿದೆ. ಆದರೆ ನಿಯಮ ಮಾಡಿಕೊಂಡಾಗಿನಿಂದ 60 ದಿನಗಳ ಕಾಲ ಅಧಿವೇಶನ ನಡೆದ ಉದಾಹರಣೆ ಇಲ್ಲ. ಈಗ ವರ್ಷದ ಆರಂಭದ ಜಂಟಿ ಅಧಿವೇಶನ ಏಳು ದಿನ ನಡೆದಿದ್ದು, ಏಳು ದಿನದಲ್ಲಿ 14 ಮಹತ್ವದ ಮಸೂದೆಗಳು ಮಂಡನೆಯಾಗಿ ಅಂಗೀಕೃತಗೊಂಡಿವೆ. ಆದರೆ, ಈ ಮಸೂದೆಗಳ ಮೇಲೆ ಚರ್ಚೆ ಮಾಡಲೂ ಶಾಸಕರು, ಉತ್ತರಿಸಲು ಸಚಿವರು ಇರದಿದ್ದುದು ಕಂಡು ಬಂದಿತು.

ಪ್ರಮುಖವಾಗಿ ಐದು ಖಾಸಗಿ ವಿಶ್ವ ವಿದ್ಯಾನಿಲಯಗಳ ಮಸೂದೆಗಳು ಮಂಡನೆಯಾಗಿ ಅಂಗೀಕಾರಗೊಂಡಿದ್ದು, ಖಾಸಗಿ ವಿವಿಗಳ ಹಾವಳಿಯಿಂದ ಸಾರ್ವಜನಿಕ ವಿವಿಗಳ ಮೇಲೆ ಆಗುತ್ತಿರುವ ಪರಿಣಾಮ ಹಾಗೂ ಶಿಕ್ಷಣದ ಗುಣಮಟ್ಟದ ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆ ನಡೆಸುವ ಜವಾಬ್ದಾರಿಯಿಂದ ಬಹುತೇಕರು ಜಾರಿ ಕೊಂಡಂತಿದೆ. ಅಲ್ಲದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದು ಕೊರೊನಾ ಸಂಕಷ್ಟ ಕಾಲದಲ್ಲಿ ಸಾಮಾನ್ಯ ಜನರ ಮೇಲೆ ಹೊರೆ ಹಾಕಲು ಕಾನೂನು ರೂಪಿಸುತ್ತಿರುವುದನ್ನು ಮುಂದೂಡುವಂತೆ ಆಗ್ರಹಿಸಲೂ ಶಾಸಕರು ಸದನದಲ್ಲಿ ಇರದಿರುವುದು ಎದ್ದು ಕಾಣುತ್ತಿತ್ತು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಯಡಿ ಯೂರಪ್ಪ, ಆರ್‌.ವಿ.ದೇಶಪಾಂಡೆ, ಎಚ್‌.ಕೆ. ಪಾಟೀಲ್‌ರಂತ ಹಿರಿಯ ಸದಸ್ಯರು ಸದನಕ್ಕೆ ಸಕ್ರಿಯವಾಗಿ ಹಾಜರಾಗಿ ಎಲ್ಲ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳುವ ಪರಿ ಸಚಿವರಿಗೆ, ಯುವ ಶಾಸಕರಿಗೆ ಪ್ರೇರಣೆಯಾಗಬೇಕಿದೆ. ತಮ್ಮ ಪ್ರಶ್ನೆಗಳಿದ್ದಾಗ ಮಾತ್ರ ಸದನಕ್ಕೆ ಹಾಜರಾಗಿ ಮತ್ತೆ ಹೊರ ನಡೆಯುವ ಪ್ರವೃತ್ತಿ ಅಧಿವೇಶನದ ಬಗ್ಗೆ ಯುವ ಶಾಸಕರಿಗೆ ಇರುವ ಮನಃಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ವಿಧಾನ ಮಂಡಲದ ಅಧಿವೇಶನ ಇರುವುದೇ ಶಾಸಕರು ಸಮಾಜದ ಒಳಿತಿಗಾಗಿ ಕಾನೂನುಗಳನ್ನು ರೂಪಿಸಲು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು. ಆದರೆ ಅಧಿವೇಶನ ಎನ್ನುವುದು ಕಾಟಾಚಾರದ ಸಭೆಯಂತಾಗುತ್ತಿರುವುದು ಶಾಸಕರಿಗೆ ಸಮಾಜದ ಮೇಲಿನ ಕಳಕಳಿ ಎಷ್ಟು ಎನ್ನುವುದನ್ನು ಪ್ರತಿಬಿಂಬಿಸುವಂತಿದೆ.

ವಿಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಸಚಿವರೂ, ಅಧಿಕಾರಿಗಳೂ ಇಲ್ಲದಿರುವ ಬಗ್ಗೆಯೂ ಗಂಭೀರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರ ನಡೆಸುವವರಿಗೂ ಅಧಿವೇಶನ ಎನ್ನುವುದು ಶಾಸ್ತ್ರ ಮುಗಿಸಿದಂತಾಗುತ್ತಿರುವುದು ದುರದೃಷ್ಟಕರ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರತೀ ಅಧಿವೇಶನದಲ್ಲಿಯೂ ಒಂದು ಮಹತ್ವದ ವಿಚಾರದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಆರಂಭಿಸಿದ್ದು, ಇದು ಶಾಸಕರು ತಮ್ಮನ್ನು ತಾವು ತೆರೆದುಕೊಳ್ಳಲು ಹಾಗೂ ಸಕ್ರಿಯರಾಗಿ ಪಾಲ್ಗೊಳ್ಳಲು ಒಳ್ಳೆಯ ಅವಕಾಶ ನೀಡಿದಂತಾಗುತ್ತಿದೆ. ಆದರೆ, ಸಚಿವರು, ಶಾಸಕರ ನಿರಾಸಕ್ತಿ ಬೇಸರ ಮೂಡಿಸಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.