ಭಾರತಕ್ಕೆ ಮತ್ತೊಂದು ಆಘಾತ: ಟೀಂ ಇಂಡಿಯಾ ಆಲ್ ರೌಂಡರ್ ವಿಶ್ವಕಪ್ ನಿಂದಲೇ ಔಟ್
ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ತೆರಯಲಿದೆ ವಿಶ್ವಕಪ್ ಬಾಗಿಲು
Team Udayavani, Jul 1, 2019, 2:52 PM IST
ಲಂಡನ್: ರವಿವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದ ಟೀಂ ಇಂಡಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಗಾಯದ ಮೇಲೆ ಬರೆ ಎಳೆದಿದೆ. ಆಲ್ ರೌಂಡರ್ ವಿಜಯ್ ಶಂಕರ್ ಕಾಲ್ಬೆರಳ ಗಾಯದಿಂದಾಗಿ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.
ಇತ್ತೀಚೆಗಷ್ಟೇ ನೆಟ್ಸ್ ನಲ್ಲಿ ಅಭ್ಯಾಸ ಮಾಡುವ ವೇಳೆ ಜಸ್ಪ್ರೀತ್ ಬುಮ್ರಾ ಎಸೆದ ಯಾರ್ಕರ್ ಎಸೆತ ವಿಜಯ್ ಶಂಕರ್ ಕಾಲಿಗೆ ಬಡಿದಿತ್ತು. ಈ ವೇಳೆ ಕಾಲಿನ ಬೆರಳಿಗೆ ಗಾಯ ಮಾಡಿಕೊಂಡಿದ್ದ ವಿಜಯ್ ಶಂಕರ್ ಗೆ ಹೆಚ್ಚಿನ ಗಾಯವಾಗಿಲ್ಲ, ಶೀಘ್ರ ಗುಣಮುಖರಾಗುತ್ತಾರೆ ಎಂದು ಟೀಂ ಮ್ಯಾನೇಜ್ಮೆಂಟ್ ಹೇಳಿದ್ದರೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಈ ತಮಿಳುನಾಡು ಆಲ್ ರೌಂಡರ್ ಕಣಕ್ಕಿಳಿದಿರಲಿಲ್ಲ.
ಆದರೆ ಈಗ ವಿಜಯ್ ಗಾಯದ ಗಂಭೀರತೆ ಹೆಚ್ಚಾದ ಕಾರಣ ಅವರಿಗೆ ಮೂರು ವಾರಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವರದಿಯಾಗಿದೆ. ಹೀಗಾಗಿ ಅವರು ತಂಡದಿಂದ ಹೊರಬೀಳಬೇಕಾಗಿದೆ.
ಕನ್ನಡಿಗ ಮಯಾಂಕ್ ಸೇರ್ಪಡೆ ಸಾಧ್ಯತೆ
ವಿಜಯ್ ಶಂಕರ್ ರಿಂದ ತೆರವಾದ ಸ್ಥಾನಕ್ಕೆ ಕ್ನನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಸೇರಿಸಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಈ ಬಗ್ಗೆ ಐಸಿಸಿಗೆ ಮನವಿ ಮಾಡಿರುವ ಬಿಸಿಸಿಐ, ಮಯಾಂಕ್ ಅಗರ್ವಾಲ್ ಸೇರ್ಪಡೆಗೆ ಅನುಮತಿ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!