ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಲು ಸಿಎಂಗೆ ಮನವಿ
Team Udayavani, Sep 18, 2019, 12:28 PM IST
ಬೆಂಗಳೂರು: ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಅನರ್ಹ ಶಾಸಕ ಆನಂದ್ ಸಿಂಗ್ ಹಾಗೂ ಉಜ್ಜಯಿನಿ ಜಗದ್ಗುರುಗಳು ಮುಖ್ಯಮಂತ್ರಿ ಯಡಿಯೂರಪ್ಪರಲ್ಲಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಯನ್ನು ಗೃಹ ಕಚೇರಿ ಕೃಷ್ಣಾ ದಲ್ಲಿ ಭೇಟಿ ಮಾಡಿ ಮಾತನಾಡಿದ ಆನಂದ್ ಸಿಂಗ್, ಜನಪ್ರತಿನಿಧಿಗಳು ಹಾಗೂ ಜನರು ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ವಿಶ್ವದಲ್ಲಿ ಹೆಸರುವಾಸಿಯಾಗಿರೋ ನಗರವೆಂದು ವಿಜಯನಗರವನ್ನು ಯುನೆಸ್ಕೋ ಪರಿಗಣಿಸಿದೆ. ವಿಜಯನಗರ ಸಾಮ್ರಾಜ್ಯ ಎಂದಿಗೂ ಮರೆಯಲು ಸಾಧ್ಯವಾಗಲಾರದು. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಿದರೆ ಆಡಳಿತಾತ್ಮಕವಾಗಿ ತುಂಬ ಅನುಕೂಲವಾಗುತ್ತೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಜ್ಜಯಿನಿ ಸದ್ಗುರುಗಳು ಮಾತನಾಡಿ ವಿಜಯನಗರದ ಗತ ವೈಭವ ಮರುಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತಿನ ಮೈಸೂರು ದಸರಾಕ್ಕೆ ಪ್ರೇರಣೆಯೇ ಆಗಿನ ವಿಜಯನಗರ ಸಾಮ್ರಾಜ್ಯ. ಹಾಗಾಗಿ ಈ ನೆಲಕ್ಕೆ ಅದರದ್ದೇ ಆದ ವಿಶೇಷ ಗುಣಗಳು ಇದೆ.ಅದ್ದರಿಂದ ಇದನ್ನು ಜಿಲ್ಲೆಯ ನ್ನಾಗಿ ಮಾಡಬೇಕು ಅಂತ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷಾತೀತವಾಗಿ ವಿಜಯನಗರ ವನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಒತ್ತಾಯಿಸಿದ್ದರಿಂದ , ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗೊಳೊಂದಿಗೆ ಚರ್ಚೆ ನಡೆಸಿ ಮುಂದಿನ ಸಚಿವ ಸಂಪುಟದಲ್ಲಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?