ಭಾರತ ಬಂದ್ ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ : ವಾಹನ ಸಂಚಾರ ಎಂದಿನಂತೆ
Team Udayavani, Dec 8, 2020, 12:10 PM IST
ವಿಜಯಪುರ: ಕೃಷಿ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಆಹಾರ ಭದ್ರತೆ ಸೇರಿದಂತೆ ವಿವಿಧ ಕಾನೂನು ತಿದ್ದುಪಡಿ ವಿರೋಧಿಸಿ ರೈತ ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ವಿಜಯಪುರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಸ್ ಸಂಚಾರ, ಆಟೋ, ನಗರ ಸಾರಿಗೆ ಸೇರಿದಂತೆ ಎಲ್ಲ ಸಂಚಾರ ಸುಗಮವಾಗಿ ನಡೆಯುತ್ತಿದೆ. ಅಂಗಡಿ, ಬೀದಿಬದಿ ವ್ಯಾಪಾರ, ಪೆಟ್ರೋಲ್ ಬಂಕ್, ಸರ್ಕಾರಿ ಕಛೇರಿ ಕೆಲಸಗಳು ಎಂದಿನಂತೆ ಸಹಜವಾಗಿದೆ.
ಬಂದ್ ಬೆಂಬಲಿಸಿ ಬಸ್ ನಿಲ್ದಾಣದ ಎದುರು ಬೆಳಿಗ್ಗೆ ಬೈಕ್ ರ್ಯಾಲಿ ನಡೆಸಲು ಮುಂದಾದಾಗ ಪೊಲೀಸರು ಮೆರವಣಿಗೆ ತಡದು, ಪ್ರತಿಭಟನಾಕಾರರನ್ನು ಚದುರಿಸಿದರು.
ನಂತರ ಅಂಬೇಡ್ಕರ್ ವೃತ್ತದಲ್ಲಿ ರೈತ, ಕಾರ್ಮಿಕ ಹಾಗೂ ಪ್ರಗತಿಪರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಭೆ ಸೇರಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಛೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಇದನ್ನೂ ಓದಿ:ಮಂಗಳೂರು: ನಂತೂರು ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ