ಗ್ರಾಮ ವಾಸ್ತವ್ಯ ವಾರ್! ಶೂನ್ಯ ಸಾಧನೆ ಬಿಜೆಪಿ ಟೀಕೆಗೆ, ಸಿಎಂ ಕುಮಾರಸ್ವಾಮಿ ಉತ್ತರ


Team Udayavani, Jun 24, 2019, 6:49 PM IST

HDK_and_BSY

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪನವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ಆರೋಗ್ಯಕರವಾಗಿರುವುದಿಲ್ಲ. ಅದರಲ್ಲೂ ವೈಯಕ್ತಿಕ ವಿಷಯಗಳ ಬಗ್ಗೆ ಮಾಡಿರುವ ಪ್ರಸ್ತಾಪಗಳು ಕೀಳು ಅಭಿರುಚಿಯಿಂದ ಕೂಡಿದೆ. ಸರ್ಕಾರಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಗ್ರಾಮ ವಾಸ್ತವ್ಯ:

ಹಿಂದೆ ಗ್ರಾಮ ವಾಸ್ತವ್ಯ ಮಾಡಿದ ಹಳ್ಳಿಗಳ ಅಭಿವೃದ್ಧಿ ಕುರಿತು ಯಡಿಯೂರಪ್ಪನವರು ಕಿರುಹೊತ್ತಗೆಯನ್ನು ಬಿಡುಗಡೆ ಮಾಡಿದ್ದಾರೆ. ನಾನು ಇದಕ್ಕೆ ಮುಂಚಿತವಾಗಿಯೇ ಈ ಗ್ರಾಮಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ತರಿಸಿಕೊಂಡಿದ್ದೇನೆ. ನಾನು ಅಧಿಕಾರದಲ್ಲಿದ್ದ 20 ತಿಂಗಳ ಅವಧಿಯಲ್ಲಿ 47 ಗ್ರಾಮಗಳಲ್ಲಿ ವಾಸ್ತವ್ಯ ಮಾಡಿದ್ದೇನೆ. ಈ ಗ್ರಾಮಗಳಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನೂ ಲಗತ್ತಿಸಿದ್ದೇನೆ. ನನ್ನ ಗ್ರಾಮ ವಾಸ್ತವ್ಯದ ಪರಿಕಲ್ಪನೆ ಕೇವಲ ಆ ಗ್ರಾಮದ ಅಭಿವೃದ್ಧಿ ಮಾತ್ರವಲ್ಲ. ಸ್ಥಳೀಯವಾಗಿ ಜನರ ವೈಯಕ್ತಿಕ ಸಮಸ್ಯೆಗಳಿಗೂ, ಸ್ಥಳದಲ್ಲಿಯೇ ಪರಿಹಾರ ದೊರಕಿಸುವುದು, ಜನರ ಆಶಯಗಳನ್ನು ಅರ್ಥೈಸಿಕೊಂಡು ಯೋಜನೆಗಳನ್ನು ರೂಪಿಸುವುದು, ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರಕಿಸಲು ಇರುವ ತೊಡಕುಗಳನ್ನು ನಿವಾರಿಸುವುದು ಗ್ರಾಮ ವಾಸ್ತವ್ಯದಿಂದ ಸಾಧ್ಯ.

ರೈತರ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ, ಸುವರ್ಣ ಗ್ರಾಮ ಯೋಜನೆ, ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜುಗಳ ಸ್ಥಾಪನೆ, 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ ಮೊದಲಾದ ಉಪಕ್ರಮಗಳಿಗೆ ಪ್ರೇರಣೆ ನನ್ನ ಗ್ರಾಮ ವಾಸ್ತವ್ಯದ ಅನುಭವಗಳು. ನಾನು ತಂಗಿದ ಗ್ರಾಮಗಳಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಸಾಧ್ಯವಾಗಿದೆ. ಆದರೆ ನಂತರದ ದಿನಗಳಲ್ಲಿ ಸನ್ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿ ಆದಾಗ ಈ ಗ್ರಾಮಗಳಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆಂಬ ಮಾಹಿತಿ ನೀಡಲಿ.

ಗ್ರಾಮ ವಾಸ್ತವ್ಯ ವ್ಯರ್ಥ, ಅದಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪ್ರಯಾಣ ವೆಚ್ಚ, ಶಾಲೆಯಲ್ಲಿ ಉಳಿದುಕೊಳ್ಳಲು ಕನಿಷ್ಠ ಸೌಲಭ್ಯ ಮಾತ್ರ ನನ್ನ ವೆಚ್ಚ. ಇದೇ ಸಂದರ್ಭ ಬಳಸಿ, ವಿವಿಧ ಇಲಾಖೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ/ ಉದ್ಘಾಟನೆ ಮಾಡಿದ್ದಲ್ಲಿ, ಅವುಗಳು ಗ್ರಾಮ ವಾಸ್ತವ್ಯದ ವೆಚ್ಚದ ವ್ಯಾಪ್ತಿಗೆ ಬರುವುದಿಲ್ಲ. ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ 58 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಆದರೆ ವಾಸ್ತವತೆಯನ್ನು ತಿಳಿದುಕೊಂಡು ಜವಾಬ್ದಾರಿಯುತ ಸ್ಥಾನದಲ್ಲಿರುವ ಯಡಿಯೂರಪ್ಪನವರು ಮಾತನಾಡಬೇಕೆಂದು ನಾನು ಆಶಿಸುತ್ತೇನೆ.

ಗ್ರಾಮ ವಾಸ್ತವ್ಯ ಪ್ರಚಾರದ ಗಿಮಿಕ್ ಅಲ್ಲ. ಅಂತಃಕರಣ, ಮಾನವೀಯತೆ, ತಾಯಿ ಹೃದಯದಿಂದ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಗ್ರಾಮ ವಾಸ್ತವ್ಯ ಸಾಧ್ಯ.

ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕು ಶ್ರೀರಾಮಪುರ ಗ್ರಾಮದಲ್ಲಿ ನಸುಕಿನ ಜಾವದ ವರೆಗೆ ನನ್ನೊಂದಿಗೆ ಗ್ರಾಮ ವಾಸ್ತವ್ಯ ಮಾಡಿದ್ದ ಯಡಿಯೂರಪ್ಪನವರಿಗೆ ಅಂದು ಸಿಹಿಯಾಗಿದ್ದು, ಇಂದು ಕಹಿಯಾಗಿರುವುದು ಏಕೆ?

ಆಡಳಿತಾತ್ಮಕ ವಿಚಾರಗಳಿಗೆ ರಚನಾತ್ಮಕವಾಗಿ ಟೀಕೆ ಮಾಡಿದಲ್ಲಿ, ನಾನು ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳುತ್ತೇನೆ. ಆದರೆ ಸರ್ಕಾರದ ವ್ಯಾಪ್ತಿಗೆ ಬಾರದ ನನ್ನ ವೈಯಕ್ತಿಕ ವಿಷಯಗಳ ಬಗ್ಗೆ ಪದೇ ಪದೇ ಮಾತನಾಡಿ, ವಿರೋಧ ಪಕ್ಷದ ನಾಯಕರ ಸ್ಥಾನದ ಘನತೆಗೆ ಕುಂದು ತರಬಾರದೆಂದು ಮಾಧ್ಯಮಗಳ ಮೂಲಕ ಸನ್ಮಾನ್ಯ ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ರೈತರ ಆತ್ಮಹತ್ಯೆ:

ಕಳೆದ ಒಂದು ವರ್ಷದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಶೇ. 30 ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಮಾನ್ಯ ವಿರೋಧ ಪಕ್ಷದ ನಾಯಕರೂ ಗಮನಿಸಿರಬಹುದೆಂದು ಭಾವಿಸುತ್ತೇನೆ.  ಆದರೆ ಇದನ್ನು ಸಾಧನೆ ಎಂದು ಹೇಳಿಕೊಳ್ಳಲಾಗದು. ರೈತರ ಆತ್ಮಹತ್ಯೆ ಪ್ರಕರಣ ಶೂನ್ಯವಾಗಬೇಕು ಎನ್ನುವುದು ನಮ್ಮ ಆಶಯ. ಇದನ್ನು ಸಾಕಾರಗೊಳಿಸುವ ದೃಢ ಸಂಕಲ್ಪದಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ವಿಚಾರದಲ್ಲಿ ರಾಜಕೀಯ ಮಾಡದೆ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಮಾತನಾಡಬೇಕೆ ಹೊರತು, ರೈತರ ಸ್ಥೈರ್ಯವನ್ನು ಕುಗ್ಗಿಸುವ ಯಾವ ಪ್ರಯತ್ನವೂ ಆರೋಗ್ಯಕರವಲ್ಲ.

ಐಎಂಎ ಹಗರಣ:

ಐಎಂಎ ಹಗರಣ ಕುರಿತು ಸರ್ಕಾರ ಕಣ್ಣುಮುಚ್ಚಿ ಕುಳಿತಿಲ್ಲ. ಎಸ್ಐಟಿ ರಚಿಸಿ, ತನಿಖೆ ನಡೆಸಲಾಗುತ್ತಿದೆ. ಯಡಿಯೂರಪ್ಪನವರ ಬಳಿ ಸರ್ಕಾರದ ಸಚಿವರು, ಶಾಸಕರು ಮತ್ತಿತರರು ಈ ಹಗರಣದಲ್ಲಿ ಭಾಗಿಯಾಗಿರುವ ಕುರಿತು ಸೂಕ್ತ ದಾಖಲೆಗಳಿದ್ದರೆ, ಎಸ್ಐಟಿಗೆ ನೀಡಲಿ. ಪ್ರಕರಣವು ತನಿಖಾ ಹಂತದಲ್ಲಿ ಇರುವಾಗ ದಾಖಲೆಗಳಿಲ್ಲದೆ, ರಾಜಕೀಯ ನಾಯಕರ ಹೆಸರನ್ನು ಪ್ರಸ್ತಾಪಿಸಿ, ತನಿಖೆಯ ಹಾದಿ ತಪ್ಪಿಸುವುದು ಸೂಕ್ತವಲ್ಲ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.