ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ


Team Udayavani, Jan 22, 2021, 12:39 PM IST

ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ

ಪಣಜಿ: ವರ್ಚುಯಲ್ ವರ್ಸಸ್ ರಿಯಲ್ ಅಥವಾ ಫಿಸಿಕಲ್! ಈ ಚರ್ಚೆ ಆರಂಭವಾಗಿರುವುದು ಗೋವಾ ಚಿತ್ರೋತ್ಸವದಲ್ಲಿ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಚಿತ್ರೋತ್ಸವಕ್ಕೆ ಹೈಬ್ರಿಡ್ ರೂಪ ನೀಡಲಾಗಿದೆ. ಚಿತ್ರ ರಸಿಕರೂ ವರ್ಚುಯಲ್ ಮತ್ತು ಫಿಸಿಕಲ್ ರೂಪದಲ್ಲಿ ನೋಂದಣಿ ಮಾಡಲು ಅವಕಾಶವಿತ್ತು. ಅದರಂತೆಯೇ ಎರಡು ಸಾವಿರಕ್ಕೂ ಹೆಚ್ಚು ಮಂದಿ ಫಿಸಿಕಲ್ ಚಿತ್ರೋತ್ಸವಕ್ಕೆ ಸುಮಾರು ಒಂದರಿಂದ ಒಂದೂವರೆ ಸಾವಿರ (ಅಧಿಕೃತ ಮಾಹಿತಿ ಲಭ್ಯವಾಗಿಲ್ಲ) ಮಂದಿ ನೋಂದಣಿ ಮಾಡಿಸಿದ್ದಾರೆ. ಒಟ್ಟೂ ಚಿತ್ರೋತ್ಸವ ಐದು ಸಾವಿರ ಮಂದಿಗೆ ತಲುಪಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ಹೈಬ್ರಿಡ್ ರೂಪ

ವರ್ಚುಯಲ್ ಹಾಗೂ ಫಿಸಿಕಲ್ ಎನ್ನುವ ನೆಲೆಯಲ್ಲಿ ಚಿತ್ರೋತ್ಸವವನ್ನು ಹೈಬ್ರಿಡ್ ರೂಪದಲ್ಲಿ ಯೋಜಿಸಲಾಗಿದೆ. ಆದರೆ ಚಿತ್ರೋತ್ಸವದಲ್ಲಿ ಭಾಗವಹಿಸಿದ ಹಲವಾರು ಚಿತ್ರ ರಸಿಕರು, ಬೌದ್ದಿಕ ಆಯಾಮಗಳಿರುವ ಯಾವುದೇ ಉತ್ಸವಗಳು ಈ ರೀತಿ ನಡೆದರೆ ಉದ್ದೇಶ ಈಡೇರದು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಕೊರೊನಾ ಕಾರಣದಿಂದ ಈ ಉತ್ಸವದ ರೀತಿಯನ್ನು ಅನಿವಾರ್ಯವಾಗಿ ಒಪ್ಪಬಹುದು. ಆದರೆ ಇದೇ ಮಾದರಿಯ ಉತ್ಸವ ಮುಂದುವರಿದರೆ ಕಷ್ಟ ಎನ್ನುತ್ತಾರೆ ಮುಂಬಯಿಯಿಂದ ಬಂದಿರುವ ಚಿತ್ರ ರಸಿಕರೊಬ್ಬರು.

ಇದೇ ಅಭಿಪ್ರಾಯವನ್ನು ಕೇರಳದ ಚಿತ್ರ ರಸಿಕರೊಬ್ಬರು ವ್ಯಕ್ತಪಡಿಸುತ್ತಾರೆ. ಈ ಚಿತ್ರೋತ್ಸವವನ್ಬು ಈ ವರ್ಷ ನಿಲ್ಲಿಸಬಾರದೆಂಬ ಕಾರಣಕ್ಕೆ ನಡೆಸಿರುವುದು ಸರಿ. ಆದರೆ, ಇದೇ ಮಾದರಿ ಮುಂದುವರಿಯುವುದು ಕಷ್ಟ.

ಇದನ್ನೂ ಓದಿ:ಎಷ್ಟು ವರ್ಷ ಆಯ್ತು ಅನ್ನೋದಕ್ಕಿಂತ ಏನ್‌ ಕೊಡ್ತೀವಿ ಅನ್ನೋದು ಮುಖ್ಯ: ಪೊಗರು ಧ್ರುವ ಮಾತು

ವರ್ಚುಯಲ್ ಮಾದರಿ ಹಲವರಿಗೆ ಇಷ್ಟವಾಗಿಲ್ಲ. ಜತೆಗೆ ಚಿತ್ರೋತ್ಸವದಲ್ಲಿ ಕನಿಷ್ಟ ಮಾಹಿತಿಗೂ ಆನ್ ಲೈನ್ ಅವಲಂಬಿಕೆಗೂ ಬೇಸರ ವ್ಯಕ್ತವಾಗಿದೆ. ಚಿತ್ರದ ಮಾಹಿತಿ, ವೇಳಾಪಟ್ಟಿ ಎಲ್ಲವೂ ಆನ್ ಲೈನ್ ಮೂಲಕವೇ ಪಡೆಯಬೇಕಿದೆ. ಕೆಟಲಾಗ್ ಸಹ ಪುಸ್ತಕ ರೂಪದಲ್ಲಿ ಲಭ್ಯವಾಗುತ್ತಿಲ್ಲ.

ವರ್ಚುಯಲ್ ಕಷ್ಟವೇಕೆ?

ಒಂದು ಸಿನಿಮಾ ನಾವು ಆನ್ ಲೈನ್ ನಲ್ಲಿ ಯಾವುದೇ ಅಡಚಣೆ ಇಲ್ಲದೇ ನೋಡಬೇಕಾದರೆ ಕನಿಷ್ಟ 25 ಎಂಬಿ ವೇಗದ ಇಂಟರ್ ನೆಟ್ ಸೌಲಭ್ಯ ಹೊಂದಿರಬೇಕು. ಇದು ಎಲ್ಲರಿಗೂ ಕಷ್ಟ. ಹಾಗಾಗಿ ಬಹಳ ಜನರಿಗೆ ತಲುಪುವುದೂ ಕಷ್ಟ ಎಂಬುದು ಹಲವರ ಅನಿಸಿಕೆ.

ವರ್ಚುಯಲ್ ಅಥವಾ ರಿಯಲ್ ಎಂಬ ಗೊಂದಲದಲ್ಲಿ ಈ ಚಿತ್ರೋತ್ಸವ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಒಂದಂತೂ ಖಚಿತ. ಇದರಲ್ಲಿನ ಅನುಭವ ಮುಂದಿನ ಬೇರೆ ಬೇರೆ ಚಿತ್ರೋತ್ಸವಗಳ ರೂಪವನ್ನು ನಿರ್ಧರಿಸುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.