ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ


Team Udayavani, Jan 31, 2023, 10:26 PM IST

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ ಮಾಡುವ ಪ್ರಸಕ್ತ 2023 ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಯನ್ನು ಸಾಹಿತಿಗಳಿಗೆ ಪ್ರದಾನಗೊಳಿಸಿ, ಅವರು ಮಾತನಾಡಿದರು.

2500 ವರ್ಷಗಳ ಹಿಂದೆ ಗ್ರೀಸ್ ದೇಶದಲ್ಲಿ ಜನಾತಂತ್ರ ವ್ಯವಸ್ಥೆ ಜಾರಿಯಲ್ಲಿತ್ತು. 80 ಹಾಗೂ 90ರ ದಶಕದ ಹಿಂದೆ ನಡೆದ ಚುನಾವಣೆಗಳೂ ಅತ್ಯಂತ ಪಾವಿತ್ರ್ಯದ ರೀತಿಯಲ್ಲಿ ಮತದಾನ ನಡೆದ ಉದಹಾರಣೆಗಳಿವೆ. ಅಂದು ಊಟ ಕೊಟ್ಟು ಓಟು ಕೊಟ್ಟು ಹಳುಹಿಸುತ್ತಿದ್ದರು. ಆದರೆ ಇಂದು ಒಂದು ಮತಕ್ಕೆ 6ಸಾವಿರ ಕೊಡುವ ಕಾಲ ಬಂದಿದೆ ಎಂದರು.

ಟಿಕೆಟ್‌ಗಾಗಿ 20 ಕೋಟಿ ಕೊಡಲು ಸಿದ್ಧ ಎಂಬುದಾಗಿ ಆಕಾಂಕ್ಷಿಯೊಬ್ಬರು ಹೇಳಿದ್ದು ವರದಿಯಾಗಿದೆ. ಚುನಾವಣೆಗೆ ಎಷ್ಟು ಖರ್ಚು ಮಾಡಬಲ್ಲರು ಎಂಬುದನ್ನು ಊಹಿಸಿದರೆ ಅವರಿಂದ ಜನರು ಏನು ನಿರೀಕ್ಷಿಸಬಹುದು ಎಂಬುದನ್ನೂ ಊಹಿಸಬಹುದು. ರಿಯಲ್ ಎಸ್ಟೇಟ್ ಕುಳಗಳು ರಾಜಕಾರಣಕ್ಕೆ ಇಳಿದಿರುವುದರಿಂದ ನಾವು ಎಲ್ಲಿ ನಿಂತಿದ್ದೇವೆ ಎಂಬುದೇ ಅರ್ಥವಾಗದಾಗಿದೆ ಎಂದರು.

ಎಲ್ಲಾ ಬಗೆಯ ಸಾಹಿತ್ಯಗಳು ನಮ್ಮಲ್ಲಿವೆ. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿರುವ ನಮಗೆ ರಾಜಕೀಯ ಸಾಹಿತ್ಯದ ಅಗತ್ಯವಿದೆ. ಆದರೆ ನಮ್ಮಲ್ಲಿರುವ ಸಾಹಿತಿಗಳು ರಾಜಕಾರಣ ಮತ್ತು ರಾಜಕೀಯ ಸಾಹಿತ್ಯವನ್ನು ಮೈಲಿಗೆಯಿಂದ ನೋಡುವುದು ಜನತಂತ್ರ ವ್ಯವಸ್ಥೆಗೆ ಅಪಾಯಕಾರಿ. ಹೀಗಾಗಿ ರಾಜಕೀಯ ಸಾಹಿತ್ಯದ ಮೂಲಕ ಜನತಂತ್ರ ವ್ಯವಸ್ಥೆ ಎಚ್ಚರಿಸುವ ಕೆಲಸವನ್ನು ಸಾಹಿತಿಗಳೂ ಮಾಡಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ1 ಲಕ್ಷ ನಗದು, ಸ್ಮರಣಿಕೆ ಫಲಕ ಒಳಗೊಂಡ ಈ ಪ್ರಶಸ್ತಿಯನ್ನು ಪ್ರತ್ಯೇಕ ತಲಾ 50 ಸಾವಿರದಂತೆ ಮೂಲತ: ಧಾರವಾಡದವರೇ ಆದ ವಿಮರ್ಶಕ, ಚಿಂತಕರಾದ ಡಾ.ರಾಜೇಂದ್ರ ಚೆನ್ನಿ ಹಾಗೂ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಕವಿ ಡಾ.ಜಿನದತ್ತ ದೇಸಾಯಿ ಅವರಿಗೆ ಪ್ರದಾನ ಮಾಡಲಾಯಿತು.

ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮಾತನಾಡಿದರು. ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಪುರಸ್ಕೃತರಾದ ಡಾ.ಜಿನದತ್ತ ದೇಸಾಯಿ ಅವರ ಕುರಿತು ಡಾ.ಶಾಂತಾ ಇಮ್ರಾಪೂರ ಹಾಗೂ ಡಾ.ರಾಜೇಂದ್ರ ಚೆನ್ನಿ ಅವರ ಕುರಿತು ಕುಮಟಾದ ಡಾ.ಎಂ.ಜಿ.ಹೆಗಡೆ ಅಭಿನಂದನಾಪರ ನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಶಿರಸಿಯ ಪ್ರೊ.ಎಚ್.ಆರ್.ಅಮರನಾಥ ಸಂಪಾದಕತ್ವದ ಪ್ರೊ.ಬೇಂದ್ರೆ ಮಾಸ್ತರರ ಅಮರವಾಣಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. ಡಾ|ಎನ್.ವೈ.ಮಟ್ಟಿಹಾಳ, ಡಾ.ದ.ರಾ. ಬೇಂದ್ರೆ ಟ್ರಸ್ಟ್ ಸದಸ್ಯ ಕಾರ್ಯದರ್ಶಿಯಾದ ಕುಮಾರ ಬೆಕ್ಕೇರಿ, ಪ್ರಕಾಶ ಬಾಳಿಕಾಯಿ ಪಾಲ್ಗೊಂಡಿದ್ದರು.

ಜಗದ ಕವಿ, ಯುಗದ ಕವಿ ಎಂಬುದಾಗಿ ಬೇಂದ್ರೆ ಅವರನ್ನು ನಾವು ಬಣ್ಣಿಸಿ ಹಾಡಿ ಹೊಗಳಿದರೂ, ಅವರನ್ನು ಕರ್ನಾಟಕ ಅಷ್ಟು ಆತ್ಮೀಯವಾಗಿ ಒಪ್ಪಿಕೊಳ್ಳದ ಬೇಸರ ಅವರನ್ನು ಕಾಡಿತ್ತು. ಹೀಗಾಗಿ ಅವರು ಅತ್ಯಂತ ನೋವಿನಿಂದ ‘ಧಾರವಾಡದ ಬೆಣ್ಣೆಗೆ ಧಾರಣೆ ಆಗಲಿಲ್ಲ’ ಅಂದಿದ್ದರು. ಸರ್ಕಾರಕ್ಕೆ ಹೃದಯ ಹಾಗೂ ಸಾಂಸ್ಕೃತಿಕ ಲೋಕದ ಸ್ಪರ್ಶ ಇದ್ದರೆ, ವಿಶ್ವ ಕವಿ ದಿನವನ್ನು ಒಪ್ಪಿಕೊಂಡು ಆಚರಿಸಬೇಕು. ಬೇಂದ್ರೆ ಅವರ ಹೆಸರನ್ನು ನಾಡು ನೆನೆಯಬೇಕೆಂದ ಎಚ್.ವಿಶ್ವನಾಥ ಅವರು, ‘ಮೂಡಲ ಮನೆಯ ಮುತ್ತಿನ ನೀರಿನ…’ ಹಾಡನ್ನು ಹಾಡಿದರು.

ಇದನ್ನೂ ಓದಿ: ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಯಡಿಯೂರಪ್ಪ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.