ಎಲ್ಜಿ ಪಾಲಿಮರ್ಸ್ಗೆ 50 ಕೋಟಿ ದಂಡ
ಹಸುರು ನ್ಯಾಯಮಂಡಳಿಯಿಂದ ಮಧ್ಯಾಂತರ ಆದೇಶ
Team Udayavani, May 9, 2020, 6:15 AM IST
ಹೊಸದಿಲ್ಲಿ: ವಿಶಾಖಪಟ್ಟಣದಲ್ಲಿ ಸಾವುನೋವಿಗೆ ಕಾರಣವಾದ ಎಲ್ಜಿ ಪಾಲಿಮರ್ಸ್ ಕಂಪೆನಿಗೆ ರಾಷ್ಟ್ರೀಯ ಹಸುರು ನ್ಯಾಯಮಂಡಳಿ (ಎನ್ಜಿಟಿ) 50 ಕೋಟಿ ರೂ. ದಂಡ ವಿಧಿಸಿದೆ. ಇದು ಮಧ್ಯಾಂತರ ಆದೇಶವಾಗಿದ್ದು, ಕೇಂದ್ರ ಸರಕಾರ ಹಾಗೂ ಆಂಧ್ರಪ್ರದೇಶ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಿರುವ ಎನ್ಜಿಟಿ, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿದೆ.
ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಎನ್ಜಿಟಿ ಮುಖ್ಯಸ್ಥ ನ್ಯಾ| ಆದರ್ಶ್ ಕುಮಾರ್ ಗೋಯೆಲ್, ಕಂಪೆನಿಯಲ್ಲಿ ಸುರಕ್ಷಾ ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈಗ ಮಧ್ಯಾಂತರವಾಗಿ ವಿಧಿಸಲಾಗಿರುವ ದಂಡವನ್ನು, ಕಂಪೆನಿಯ ಮಾರುಕಟ್ಟೆ ಮೌಲ್ಯವನ್ನು ಪರಿಗಣಿಸಿ ವಿಧಿಸ ಲಾಗಿದೆ. ಈ ದಂಡವನ್ನು ಕಂಪೆನಿಯು ವಿಶಾಖಪಟ್ಟಣ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಪಾವತಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿ ದಂತೆ ಎನ್ಜಿಟಿಯ ಮುಂದಿನ ಆದೇಶಗಳಿಗೆ ಕಂಪೆನಿ ಬದ್ಧವಾಗಿರಬೇಕು’ ಎಂದು ಸೂಚಿಸಿದರು.
ಇಲಾಖೆಗಳಿಗೆ ನೋಟಿಸ್
ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ, ಎಲ್ಜಿ ಪಾಲಿಮರ್ಸ್ ಇಂಡಿಯಾ, ಆಂಧ್ರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ವಿಶಾಖ ಪಟ್ಟಣ ಜಿಲ್ಲಾಧಿಕಾರಿಯವರಿಗೂ ನೋಟಿಸ್ ಜಾರಿ ಗೊಳಿಸಿರುವ ಎನ್ಜಿಟಿ, ಮೇ 18ರಂದು ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು ಅಂದು ತಾನು ನೀಡಿ ರುವ ನೋಟಿಸ್ಗೆ ಪ್ರತ್ಯುತ್ತರ ನೀಡಬೇಕೆಂದು ಸೂಚಿಸಿದೆ.
ಸಮಿತಿ ರಚನೆ
ಅನಿಲ ಸೋರಿಕೆಯ ಹಿಂದಿನ ಲೋಪದೋಷಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನ್ಯಾ| ಆದರ್ಶ್ ಕುಮಾರ್ ರಚಿಸಿದ್ದಾರೆ. ಎನ್ಜಿಟಿಯಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆ ಮೇ 18ರಂದು ಜರಗಲಿದ್ದು ಅಷ್ಟರೊಳಗೆ ಈ ಸಮಿತಿ ತನ್ನ ವರದಿ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?