ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ: ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಎಚ್ ಡಿಕೆ
Team Udayavani, Apr 9, 2020, 6:28 PM IST
ಬೆಂಗಳೂರು: ಜಗತ್ತು ಕೋವಿಡ್-19 ಸೋಂಕು ಸಂಕಟದಿಂದ ಪಾರಾಗುವುದು ಹೇಗೆ ಎಂದು ಚಿಂತಿಸುತ್ತಿದ್ದರೆ ಬಿಜೆಪಿ ನಾಯಕರು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ ಎಂದು ಪ್ರಶ್ನಿಸಿದ್ದಾರೆ.
ಒಂದು ಸಮುದಾಯವನ್ನು ಕೋವಿಡ್-19 ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಎಚ್ ಡಿ ಕುಮಾರಸ್ವಾಮಿಯವರು ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.
ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ.
1/3 pic.twitter.com/T7AWjrNaK7— H D Kumaraswamy (@hd_kumaraswamy) April 9, 2020
ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ?@BSYBJP@CMofKarnataka
2/3— H D Kumaraswamy (@hd_kumaraswamy) April 9, 2020
ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ?
3/3— H D Kumaraswamy (@hd_kumaraswamy) April 9, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್