ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ
Team Udayavani, Jul 30, 2021, 7:00 PM IST
ಬನಹಟ್ಟಿ : ಕಳೆದ ಹಲವಾರು ದಿನಗಳಿಂದ ಮಹಾರಾಷ್ಟ್ರದಲ್ಲಿನ ಮಳೆ ಮತ್ತು ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿರುವುದರಿಂದ ಬಾಘಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ 4 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿದು ಬರುತ್ತಿತ್ತು. ಇಂದು ಶುಕ್ರವಾರ ಅದರ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಸಂತ್ರಸ್ತರಲ್ಲಿ ನೆಮ್ಮದಿ ಮೂಡಿಸಿದೆ.
ಗುರುವಾರ ಯಾವುದೇ ರೀತಿಯ ಏರಿಳಿತವಾಗದಿದ್ದರೂ ಇಂದು ಶುಕ್ರವಾರ ಸುಮಾರು 70 ಸಾವಿರ ಕ್ಯೂಸೆಕ್ಸ್ ನಷ್ಟು ನೀರು ಕಡಿಮೆಯಾಗಿರುವುದು ಈ ಭಾಗದ ಜನರಿಗೆ ಹಾಗೂ ರೈತರಿಗೆ ನಿರಾಳತೆ ಮೂಡಿಸಿದೆ.
ಪ್ರತಿ ವರ್ಷ ಕೃಷ್ಣಾ ನದಿ ತುಂಬಿ ಹರಿದು ಹಿನ್ನೀರಿನಿಂದ ಸಂಕಷ್ಟಕ್ಕೆ ಒಳಗಾಗುವ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮೊದಲೇ ಕೋವಿಡ್ನಿಂದಾಗಿ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಒದ್ದಾಡುತ್ತಿರುವಾಗ ಪ್ರವಾಹ ರೈತರ ಬದುಕನ್ನು ಕೊಚ್ಚಿಕೊಂಡು ಹೋಗಿದೆ. ಆ ನಿಟ್ಟಿನಲ್ಲಿ ಸರಕಾರ ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ಮಾಡಿ ಸಂತ್ರಸ್ತರಿಗೆ ಸರಿಯಾದ ರೀತಿಯಲ್ಲಿ ಶಾಶ್ವತ ಪರಿಹಾರದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ಈ ಭಾಗದ ಜನರ ಹಾಗೂ ರೈತರ ಅಭಿಪ್ರಾಯವಾಗಿದೆ. ಪ್ರತಿ ವರ್ಷ ಹಿನ್ನಿರಿನ ಸಂಕಷ್ಟದಿAದ ನೊಂದಿರುವ ಜನರು ಶಾಶ್ವತ ಪರಿಹಾರವಬೊಂದೆ ಇದಕ್ಕೆ ಮಾರ್ಗ ಎನ್ನುತ್ತಿದ್ದಾರೆ.
ಇದನ್ನೂ ಓದಿ :ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ
ಇಂದು ಶುಕ್ರವಾರ ಹಿಪ್ಪರಗಿ ಜಲಾಶಯಕ್ಕೆ 3 ಲಕ್ಷ 42ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರಬೀಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 527.5 ಮೀ ಇದೆ. ಘಟಪ್ರಭಾ ನದಿ ಹಾಗೂ ಕೃಷ್ಣಾ ನದಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು