ಮನೆಯಲ್ಲೂ ಮಾಸ್ಕ್ ಧರಿಸಿ : ಸಾರ್ವಜನಿಕರಿಗೆ ಕೇಂದ್ರ ಸರಕಾರ ಸಲಹೆ


Team Udayavani, Apr 27, 2021, 7:15 AM IST

ಮನೆಯಲ್ಲೂ ಮಾಸ್ಕ್ ಧರಿಸಿ : ಸಾರ್ವಜನಿಕರಿಗೆ ಕೇಂದ್ರ ಸರಕಾರ ಸಲಹೆ

ಹೊಸದಿಲ್ಲಿ: “ಈಗ ಮನೆಗಳಲ್ಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾದಂಥ ಸಮಯ ಬಂದಿದೆ. ಅದರಲ್ಲೂ ವಿಶೇಷವಾಗಿ ನಿಮ್ಮ ಸುತ್ತಮುತ್ತ ಕೊರೊನಾ ಸೋಂಕಿತರು ಇದ್ದರೆ, ಮಾಸ್ಕ್ ಧರಿಸಿಕೊಂಡಷ್ಟೂ ನೀವು ಸುರಕ್ಷಿತರಾಗಿರುತ್ತೀರಿ’ ಎಂದು ಕೇಂದ್ರ ಸರಕಾರ ಸೋಮವಾರ ದೇಶವಾಸಿಗಳಿಗೆ ಸಲಹೆ ನೀಡಿದೆ.

ಜತೆಗೆ ಕೊರೊನಾ ಸೋಂಕಿನ ಕುರಿತು ಅನಗತ್ಯವಾಗಿ ಆತಂಕಕ್ಕೊಳಗಾಗದಿರಿ. ಇದರಿಂದ ಯಾವುದೇ ಲಾಭವಿಲ್ಲ ಎಂದೂ ಸ್ಪಷ್ಟ ಪಡಿಸಿದೆ. ಇತ್ತೀಚೆಗಷ್ಟೇ ಲ್ಯಾನ್ಸೆಟ್‌ ವರದಿಯು, “ಕೊರೊನಾ ಸೋಂಕು ಗಾಳಿಯ ಮೂಲಕವೂ ಹಬ್ಬುತ್ತದೆ’ ಎಂದು ಹೇಳಿತ್ತು. ಈ ವರದಿಯ ಬೆನ್ನಲ್ಲೇ ಸರಕಾರದಿಂದ ಇಂಥದ್ದೊಂದು ಸಲಹೆ ಕೇಳಿಬಂದಿರುವುದು ಮಹತ್ವ ಪಡೆದಿದೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಹಾಗೂ ಹಿರಿಯ ಅಧಿಕಾರಿಗಳು, ದೇಶದ ಜನರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಕೆಲವು ವಿಚಾರಗಳನ್ನು ತಿಳಿಸಿದ್ದಾರೆ.

“ವೈದ್ಯರ ಸೂಚನೆಯಿಲ್ಲದೇ ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ. ಸುಖಾಸುಮ್ಮನೆ ಉದ್ವೇಗಕ್ಕೆ ಒಳಗಾಗಬಾರದು. ದೇಶದಲ್ಲಿ ಈಗ ಸಾಕಷ್ಟು ವೈದ್ಯಕೀಯ ಆಮ್ಲಜನಕ ಲಭ್ಯವಿದೆ. ಅವುಗಳನ್ನು ಆಸ್ಪತ್ರೆಗಳಿಗೆ ರವಾನಿಸುವುದೇ ಸವಾಲಾಗಿದೆ. ಎಲ್ಲ ಆಸ್ಪತ್ರೆಗಳಿಗೂ ಸಾಕಷ್ಟು ಆಮ್ಲಜನಕ ಪೂರೈಕೆಯಾಗುವಂತೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅಗರ್ವಾಲ್‌ ಹೇಳಿದ್ದಾರೆ.

ಇದೇ ವೇಳೆ ಎಲ್ಲ ರಾಜ್ಯಗಳೂ ರಾಜ್ಯಮಟ್ಟದಲ್ಲಿ ಅಥವಾ ಜಿಲ್ಲಾ ಮಟ್ಟದಲ್ಲಿ “ಡ್ಯಾಶ್‌ ಬೋರ್ಡ್‌’ ರಚಿಸುವ ಮೂಲಕ, ಆಸ್ಪತ್ರೆಗಳು, ಹಾಸಿಗೆಗಳು, ಆ್ಯಂಬುಲೆನ್ಸ್‌ ಸಹಿತ ರಾಜ್ಯದಲ್ಲಿರುವ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಬೇಕು ಎಂದೂ ಸರಕಾರ ಸೂಚಿಸಿದೆ.

3 ವಲಯಗಳಿಗೆ ವಿನಾಯಿತಿ: ವೈದ್ಯಕೀಯೇತರ ಉದ್ದೇಶಗಳಿಗಾಗಿ ದ್ರವೀಕೃತ ಆಮ್ಲಜನಕ ಬಳಕೆಗೆ ನಿರ್ಬಂಧ ಹೇರಿದ ಬೆನ್ನಲ್ಲೇ ಸರಕಾರವು ಮೂರು ವಲಯಗಳಿಗೆ ಇದರಿಂದ ವಿನಾಯಿತಿ ನೀಡಿದೆ. ಆ್ಯಂಪ್ಯೂಲ್‌ ಮತ್ತು ವಯಲ್‌, ಫಾರ್ಮಾಸುಟಿಕಲ್‌ ಮತ್ತು ರಕ್ಷಣ ಪಡೆಗಳಿಗೆ ಇಂಥ ಆಮ್ಲಜನಕಗಳ ಬಳಕೆಗೆ ಅನುಮತಿ ನೀಡಲಾಗಿದೆ.

ಕೇಂದ್ರ ಸರಕಾರದ ಸೂಚನೆಗಳೇನು?
– ಎಲ್ಲ ರಾಜ್ಯಗಳೂ ರಾಜ್ಯಮಟ್ಟದಲ್ಲಿ ಅಥವಾ ಜಿಲ್ಲಾ ಮಟ್ಟದಲ್ಲಿ “ಮಾಹಿತಿ ಕೋಶ’ವೊಂದನ್ನು ರಚಿಸಲಿ
– ಅದರಲ್ಲಿ ಕೊರೊನಾ ಆರೈಕೆ ಕೇಂದ್ರಗಳು, ಆಸ್ಪತ್ರೆಗಳಲ್ಲಿನ ಹಾಸಿಗೆಗಳು, ಆ್ಯಂಬುಲೆನ್ಸ್‌ಗಳು ಹಾಗೂ ಇತರೆ ಎಲ್ಲ ಸೌಲಭ್ಯಗಳ ಕುರಿತು ಮಾಹಿತಿ ಇರಲಿ.
– ಮನೆಯಲ್ಲಿ ಐಸೋಲೇಷನ್‌ ನಲ್ಲಿರುವ ಸೋಂಕಿತರ ಮೇಲೆ ನಿಗಾ ಇಡಿ
– ನಿರ್ಬಂಧ ಹೇರುವುದಿದ್ದರೆ ಅದರ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟವರಿಗೆ ಸ್ಪಷ್ಟ ಮಾಹಿತಿ ನೀಡಿ
– ನಿರ್ದಿಷ್ಟ ಪ್ರದೇಶ, ನಗರ, ಜಿಲ್ಲೆಗಳನ್ನು ಕೇಂದ್ರೀಕರಿಸಿಕೊಂಡು ಸೋಂಕು ನಿಯಂತ್ರಣ ಕ್ರಮ ಕೈಗೊಳ್ಳಿ
– ದೇಶದ ಎಲ್ಲ ಆಸ್ಪತ್ರೆಗಳು ಆಮ್ಲಜನಕವನ್ನು ಜಾಗರೂಕತೆಯಿಂದ, ಸೋರಿಕೆಯಾಗದಂತೆ ಬಳಸಬೇಕು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.