ಭಾರತದ ಫಿಟ್ಟೆಸ್ಟ್‌ ಪೊಲೀಸ್‌ ಅಧಿಕಾರಿ ಯಾರು ಗೊತ್ತಾ… ಇವರೇ ನೋಡಿ


Team Udayavani, Jul 25, 2023, 6:30 PM IST

sachin atulkar

ಯಶಸ್ಸು ಎಂಬುದು ಯಾರ ಹೆಸರಿಗೂ ಬರೆದಿಡುವಂತದ್ದಲ್ಲ. ಸ್ವತಃ ಶ್ರಮಪಟ್ಟು ಸಂಪಾದಿಸಿಕೊಳ್ಳುವಂತದ್ದು.  ಹೀಗೆ ಶ್ರಮಪಟ್ಟು ಪೊಲೀಸ್‌ ಅಧಿಕಾರಿಯಾಗಿದ್ದೂ ಅಲ್ಲದೇ ಭಾರತದ ಫಿಟ್ಟೆಸ್ಟ್‌ ಪೊಲೀಸ್‌ ಅಧಿಕಾರಿ ಎಂದು ಗೂಗಲ್‌  ಕೂಡ ತೋರಿಸುವಷ್ಟರ ಮಟ್ಟಿಗೆ ಬೆಳೆದುಬಿಟ್ಟಿದ್ದಾರೆ ಈ ಅಧಿಕಾರಿ.

ಮಧ್ಯ ಪ್ರದೇಶ ಕ್ಯಾಡರ್‌ನ ಐಪಿಎಸ್‌ ಅಧಿಕಾರಿ ಸಚಿನ್‌ ಅತುಲ್‌ಕರ್‌ ಅವರು ತಮ್ಮ ಫಿಟ್ನೆಸ್‌ನಿಂದಲೇ ಹಲವು ಬಾರಿ ಸೋಷಿಯಲ್‌ ಮೀಡಿಯಾ ಸೆನ್ಸೇಷನ್‌ ಆಗಿ ಮೂಡಿಬಂದಿದ್ಧಾರೆ.

ಮಧ್ಯ ಪ್ರದೇಶದಲ್ಲಿ ಆಗಸ್ಟ್‌, 8 1984 ರಲ್ಲಿ ಹುಟ್ಟಿದ್ದ ಸಚಿನ್‌ ಅತುಲ್‌ಕರ್‌ ಬಿಕಾಂ ಪದವೀಧರರು. ಪದವಿ ಮುಗಿಸಿ ಯುಪಿಎಸ್‌ಸಿ ಪರೀಕ್ಷೆಯ ತಯಾರಿಯಲ್ಲಿ ತೊಡಗಿಸಿಕೊಂಡರು. 2007 ರಲ್ಲಿ ಕೇವಲ ತನ್ನ 22 ನೇ ವರ್ಷ ವಯಸ್ಸಿನಲ್ಲೇ ದೇಶದ ಕಠಿಣ ಪರೀಕ್ಷೆಯನ್ನು 258 ನೇ ರ‍್ಯಾಂಕಿನೊಂದಿಗೆ ಪಾಸಾಗಿ ಆ ಸಮಯದ ಕಿರಿಯ IPS ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಆಟಗಾರನಾಗಿರುವ ಸಚಿನ್‌ ಅತುಲ್‌ಕರ್‌ 2006ರಲ್ಲಿ IPS ಅಧಿಕಾರಿಯಾದರು. ಅತುಲ್‌ ಕರ್ ಮಧ್ಯ ಪ್ರದೇಶದ ಉಜ್ಜೈನಿಯ ಎಸ್‌ಪಿ ಆಗಿದ್ದಾಗ ಅವರು ತೋರಿದ್ದ ದಿಟ್ಟತನದಿಂದಾಗಿಯೂ ಪ್ರಸಿದ್ಧರಾಗಿದ್ದರು.

ಪ್ರಸ್ತುತ ಅವರು ಮಧ್ಯ ಪ್ರದೆಶದ ಛಿನ್ದ್ವಾರಾ ಜಿಲ್ಲೆಯ DIG ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ DIG ಹುದ್ದೆಗೇರಿದ ಭಾರತದ ಅತ್ಯಂತ ಕಿರಿಯ IPS ಅಧಿಕಾರಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ತಮ್ಮ 38ನೇ ವಯಸ್ಸಿನಲ್ಲೂ, ಬ್ಯುಸಿ ಜೀವನದ ನಡುವೆಯೂ ಇಷ್ಟೊಂದು ಫಿಟ್‌ ಆಗಿದ್ದು ಯುವ ಜನರಿಗೆ ಸ್ಪೂರ್ತಿಯಾಗಿದ್ದಾರೆ.

ಸಚಿನ್‌ ಅತುಲ್‌ಕರ್‌ ಫಿಟ್ನೆಸ್‌ ಮಂತ್ರ:

ಸಚಿನ್‌ ಅತುಲ್‌ಕರ್‌ ಪೊಲೀಸ್‌ ಅಧಿಕಾರಿಯಾದಾಗಿನಿಂದ ತಮ್ಮ ಫಿಟ್ನೆಸ್‌ ಬಗ್ಗೆ ವಿಶೇಷ ಕಾಳಜಿ ಹೊಂದಿದ್ಧಾರೆ. ಪ್ರತಿ ದಿನ 1 ಗಂಟೆಗೂ ಹೆಚ್ಚು ಕಾಲ ಜಿಮ್‌ನಲ್ಲಿ ಕಾಲ ಕಳೆಯುತ್ತಾರೆ. ಇವರ ಫಿಟ್ನೆಸ್‌ ಕಾಳಜಿ ಅದೆಷ್ಟೋ ಬಾರಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಜಿಮ್‌ನಲ್ಲಿನ ದೈಹಿಕ ವ್ಯಾಯಾಮ ಮತ್ತು ಯೋಗ ತನ್ನ ಫಿಟ್ನೆಸ್‌ ಯಶಸ್ಸಿನ ಗುಟ್ಟು ಎಂದು ಸಚಿನ್‌ ಹೇಳಿಕೊಂಡಿದ್ದಾರೆ.

ಬಾಲ್ಯದಿಂದಲೇ ಕ್ರೀಡೆಯೆಡೆಗೆ ಆಕರ್ಷಿತರಾಗಿದ್ದ ಸಚಿನ್‌ ಅತುಲ್‌ಕರ್‌ 1999 ರಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಟೂರ್ನಿಯಲ್ಲೂ ಭಾಗವಹಿಸಿದ್ದಾರೆ. ಪೊಲೀಸ್‌ ಅಕಾಡಮಿಯಲ್ಲಿನ ಟ್ರೈನಿಂಗ್‌ ಸಮಯದಲ್ಲಿ ಕುದುರೆ ಸವಾರಿಯಲ್ಲಿ ಚಿನ್ನದ ಪದಕವನ್ನೂ ತನ್ನದಾಗಿಸಿಕೊಂಡಿದ್ದರು.

ಸಚಿನ್‌ ಅತುಲ್‌ಕರ್‌, ಭಾರತದ ಫಿಟ್ಟೆಸ್ಟ್‌ ಪೊಲೀಸ್‌ ಅಧಿಕಾರಿ ಮಾತ್ರವಲ್ಲ, ಭಾರತದ ʻಹ್ಯಾಂಡ್‌ಸಮ್‌ʼ ಪೊಲೀಸ್‌ ಅಧಿಕಾರಿಯೂ ಆಗಿದ್ದಾರೆ. ತಮ್ಮ ಅತ್ಯಾಕರ್ಷಕ ಮೈಕಟ್ಟಿನಿಂದ ದೊಡ್ಡ ದೊಡ್ಡ ಮಾಡೆಲ್‌ಗಳಿಗೂ ದೇಹಾದಾರ್ಡ್ಯ ಪಟುಗಳಿಗೂ ಹುಬ್ಬೇರುವಂತೆ ಮಾಡಿರುವ ಇವರು, ಯುವ ಜನರು ಫಿಟ್ನೆಸ್‌ ಬಗ್ಗೆ ಕಾಳಜಿ ವಹಿಸುವಂತೆ ಪ್ರೇರೇಪಣೆಯನ್ನೂ ಮಾಡುತ್ತಾರೆ.  ದೇಶದ ಅದೆಷ್ಟೋ ಯುವ ಜನರಿಗೆ ಸಚಿನ್‌ ಅತುಲ್‌ಕರ್‌ ಅವರು IPS ಅಧಿಕಾರಿ ಆಗಿರುವ ದಾರಿ ಎಷ್ಟು ಪ್ರೇರಣಾದಾಯಕವೋ ಅವರ ಫಿಟ್ನೆಸ್‌ ಕೂಡಾ ಅಷ್ಟೇ ಸ್ಫೂರ್ತಿಯದ್ದಾಗಿದೆ ಎಂದರೆ ಅತಿಶಯೋಕ್ತಿಯಲ್ಲ.

~ ಪ್ರಣವ್‌ ಶಂಕರ್‌

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.