ಮದುವೆ ಸೀಸನ್‌ ಆರಂಭ; ತ್ವಚೆಯ ಆರೈಕೆಗೆ ಮನೆಯಲ್ಲೇ ತಯಾರಿಸಿ ನೈಸರ್ಗಿಕ ಫೇಸ್‌ ಪ್ಯಾಕ್‌

ಫೇಶಿಯಲ್ ಮಾಡಿಸಿಕೊಳ್ಳುವುದು ಅಥವಾ ದುಬಾರಿ ಕ್ರೀಮ್ ಬಳಸುವುದು ಸಾಮಾನ್ಯ.

ಕಾವ್ಯಶ್ರೀ, Nov 28, 2022, 5:40 PM IST

beauty tips natural d uv

ಮದುವೆ ಸೀಸನ್‌ ಈಗಾಗಲೇ ಪ್ರಾರಂಭವಾಗಿದೆ. ಪಾರ್ಟಿ, ಫಂಕ್ಷನ್‌, ರಿಸೆಪ್ಷನ್, ಮೆಹಂದಿ ಹೀಗೆ ಸಾಲು ಸಾಲು ಕಾರ್ಯಕ್ರಮಗಳಿಗೆ ಭೇಟಿ ನೀಡಬೇಕಾಗಿರುತ್ತದೆ. ಹೆಚ್ಚಿನವರು ಬೇರೆ  ಸಮಯಕ್ಕಿಂತ ಮದುವೆ ಸಮಯದಲ್ಲಿ ತ್ವಚೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದರಲ್ಲೂ ಮದುವೆ, ಪಾರ್ಟಿ, ಫಂಕ್ಷನ್ ಇರುವಾಗ ಮುಖ ಕಾಂತಿಯುತವಾಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಯಾವುದಾದರೂ ಪಾರ್ಲರ್‌ಗೆ ಹೋಗಿ ಫೇಶಿಯಲ್ ಮಾಡಿಸಿಕೊಳ್ಳುವುದು ಅಥವಾ ದುಬಾರಿ ಕ್ರೀಮ್ ಬಳಸುವುದು ಸಾಮಾನ್ಯ.

ಇವೆಲ್ಲಾ ಚರ್ಮದ ಹೊಳಪಿಗೆ ಒಳ್ಳೆಯದೆ. ಆದರೆ ಕ್ರೀಮ್‌ನ ಪರಿಣಾಮ ಚರ್ಮಕ್ಕೆ ಸೀಮಿತ ಅವಧಿಗೆ ಮಾತ್ರ ಹೊಳಪು ನೀಡುತ್ತದೆ. ಆ ನಂತರ ಮುಖದ ಹೊಳಪು ಕೊನೆಗೊಳ್ಳುತ್ತದೆ. ಇದರಲ್ಲಿ ಕೆಲ ಅಡ್ಡ ಪರಿಣಾಮಗಳಾಗುವ ಸಾಧ್ಯತೆ ಇದೆ. ದುಬಾರಿ ಕ್ರೀಂನ ಬದಲಾಗಿ ಮನೆಯಲ್ಲಿಯೇ ತಯಾರಿಸಬಹುದಾದ ಕೆಲವು ನೈಸರ್ಗಿಕ ಫೇಸ್ ಪ್ಯಾಕ್‌ ಗಳು ಹೊಳೆಯುವ ಚರ್ಮಕ್ಕೆ ಸಹಾಯ ಮಾಡುತ್ತದೆ.

ಫೇಸ್ ಪ್ಯಾಕ್‌ಗಳು ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಉತ್ತಮ. ಪೋಷಕಾಂಶಗಳಿಂದ ತುಂಬಿರುವ ನೈಸರ್ಗಿಕ ಫೇಸ್ ಮಾಸ್ಕ್‌ಗಳು ಚರ್ಮದ ಮೇಲೆ ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ.

ಮುಖ ಕಾಂತಿಯುತವಾಗಲು ಇಂತಹ ಕೆಲ ನೈಸರ್ಗಿಕ ಫೇಸ್‌ ಪ್ಯಾಕ್‌ಗಳ ಬಗ್ಗೆ ಇಲ್ಲಿದೆ ಕೆಲ ಮಾಹಿತಿ:

ನಿಂಬೆ ರಸ- ಅಲೋವೆರಾ ಜೆಲ್‌:

ಅಲೋವೆರಾ ಜೆಲ್‌ಗೆ ನಿಂಬೆ ರಸ ಸೇರಿಸುವುದು ನೈಸರ್ಗಿಕ ಫೇಶಿಯಲ್ ಮಾಡುವ ಅತ್ಯುತ್ತಮ ವಿಧಾನ. ಅಲೋವೆರಾ ಜೆಲ್‌ಗೆ ನಿಂಬೆ ರಸವನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಚೆನ್ನಾಗಿ ಮಸಾಜ್ ಮಾಡಿ ನಂತರ ಮುಖವನ್ನು ಸ್ವಚ್ಛಗೊಳಿಸಿ.

ಶೀಗಂಧ- ಅರಶಿನ:

ಶ್ರೀಗಂಧದ ಪುಡಿ, ಕಡಲೆ ಹಿಟ್ಟು, ಒಂದು ಚಿಟಿಕೆ ಅರಿಶಿನ, ಸ್ವಲ್ಪ ರೋಸ್ ವಾಟರ್ ಸೇರಿಸಿ ಮಿಶ್ರಣ ಮಾಡಿ ಚರ್ಮ, ಮುಖ, ಕುತ್ತಿಗೆಗೆ ಹಚ್ಚಿ ಅರ್ಧ ಗಂಟೆ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ಸ್ವಚ್ಛಗೊಳಿಸಿ.

ಶೀಗಂಧ- ಅಲೋವೆರಾ:

ಅಲೋವೆರಾ ಜೆಲ್ ಗೆ ಶ್ರೀಗಂಧದ ಪುಡಿ ಬೆರೆಸಿ ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಹಚ್ಚಿ 15 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ಚೆನ್ನಾಗಿ ಮುಖ ತೊಳೆಯಿರಿ. ಉತ್ತಮ ಫಲಿತಾಂಶಕ್ಕಾಗಿ ಇದನ್ನು ವಾರಕ್ಕೆರಡು ಬಾರಿ ಬಳಸಿದರೆ ಮುಖ ಹೊಳಪಾಗುತ್ತದೆ.

ಚಾಕೊಲೇಟ್- ಜೇನುತುಪ್ಪ-ನಿಂಬೆ

ಕರಗಿಸಿದ ಡಾರ್ಕ್ ಚಾಕೊಲೇಟ್ ಗೆ ಜೇನುತುಪ್ಪ ಹಾಗೂ ನಿಂಬೆ ರಸ ಹಿಂಡಿ ಮಿಶ್ರಣ ಮಾಡಿ ಮುಖ ಹಾಗೂ ಕುತ್ತಿಗೆಗೆ ಹಚ್ಚಿ 20 ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಸ್ವಚ್ಛಗೊಳಿಸಿ.

ಜೇನುತುಪ್ಪ- ಅಲೋವೆರಾ:

ಜೇನುತುಪ್ಪಕ್ಕೆ ಅಲೋವೆರಾ ಜೆಲ್‌ ಸೇರಿಸಿ ಮುಖದ ಮೇಲೆ ಚೆನ್ನಾಗಿ ಮಸಾಜ್ ಮಾಡಿ 15 ನಿಮಿಷಗಳ ಕಾಲ ಅಥವಾ ಪೂರ್ತಿ ಒಣಗಿದ ಬಳಿಕ ಮುಖವನ್ನು ಚೆನ್ನಾಗಿ ತೊಳೆಯಿರಿ.

ಆವಕಾಡೊ-ಬಾದಾಮಿ

ಆವಕಾಡೊ ತಿರುಳನ್ನು ಚೆನ್ನಾಗಿ ಮ್ಯಾಶ್ ಮಾಡಿ ಅದಕ್ಕೆ ಅರ್ಧ ಚಮಚ ಬಾದಾಮಿ ಎಣ್ಣೆ ಸೇರಿಸಿ ಮಿಶ್ರಣ ಮಾಡಿ ಈ ಫೇಸ್ ಮಾಸ್ಕ್ ಮುಖ ಮತ್ತು ಕುತ್ತಿಗೆಯ ಎಲ್ಲಾ ಭಾಗಗಳಿಗೂ ಹಚ್ಚಿ 20 ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಸ್ವಚ್ಛಗೊಳಿಸಿ.

ಅಕ್ಕಿಹಿಟ್ಟು-ನಿಂಬೆ- ಅಲೋವೆರಾ ಜೆಲ್

ಅಕ್ಕಿ ಹಿಟ್ಟಿನೊಂದಿಗೆ ನಿಂಬೆ ಮತ್ತು ಅಲೋವೆರಾ ಜೆಲ್ ಬೆರೆಸಿ ಮುಖಕ್ಕೆ ಹಚ್ಚಿ. ಈ ಮಾಸ್ಕ್ ಒಣಗಿದ ಬಳಿಕ 5 ನಿಮಿಷಗಳ ಕಾಲ ಚೆನ್ನಾಗಿ ಮಸಾಜ್ ಮಾಡಿ ತೊಳೆಯಿರಿ. ಈ ಪೇಸ್ಟ್‌ನಿಂದ ಸ್ಕ್ರಬ್ ಮಾಡುವುದರಿಂದ ಮುಖದಲ್ಲಿನ ಸತ್ವ ರಹಿತ ಚರ್ಮದ ಕೋಶಗಳನ್ನು ತೆಗೆದುಹಾಕುವುದರೊಂದಿಗೆ ಮುಖ ಹೊಳೆಯಲು ಕೂಡಾ ಸಹಕರಿಯಾಗಿದೆ.

ಉತ್ತಮ ಫಲಿತಾಂಶಕ್ಕಾಗಿ ಫೇಸ್‌ ಪ್ಯಾಕ್‌ ಹಚ್ಚುವ ಮುನ್ನ ಮುಖವನ್ನು ಚೆನ್ನಾಗಿ ಸ್ವಚ್ಛಗೊಳಿಸಬೇಕು. ಮುಖದ ಜೊತೆಗೆ ಕುತ್ತಿಗೆ ಭಾಗಕ್ಕೂ ಹಚ್ಚಬೇಕು. ವಾರಕ್ಕೆ 2-3 ಬಾರಿ ಹಚ್ಚುವುದು ಉತ್ತಮ.

*ಕಾವ್ಯಶ್ರೀ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.