ನಾವು ವಿಕೆಂಡ್ ಕರ್ಫ್ಯೂ ಪಾಲಿಸಲ್ಲ, ವ್ಯಾಪಾರ ನಡೆಸುತ್ತೇವೆ : ಸರಕಾರಕ್ಕೆ HKCCI ಎಚ್ಚರಿಕೆ


Team Udayavani, Aug 26, 2021, 7:35 PM IST

ನಾವು ವಿಕೆಂಡ್ ಕರ್ಫ್ಯೂ ಪಾಲಿಸಲ್ಲ, ವ್ಯಾಪಾರ ನಡೆಸುತ್ತೇವೆ : ಸರಕಾರಕ್ಕೆ HKCCI ಎಚ್ಚರಿಕೆ

ಕಲಬುರಗಿ: ಕೊರೊನಾ ಮೂರನೇ ಅಲೆ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಿಕೆಂಡ್ ಕಪ್ಯೂ೯ ಪಾಲಿಸುವುದಿಲ್ಲ.‌ ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತೇವೆ ಎಂದು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (HKCCI) ಹಾಗೂ ವಿವಿಧ ವ್ಯಾಪಾರದ ಸಂಘಗಳು ಜಂಟಿಯಾಗಿ ಎಚ್ಚರಿಕೆ ನೀಡಿವೆ.

ಚುನಾವಣೆ ನಡೆಯುತ್ತವೆ, ರಾಜಕೀಯ ಸಭೆಗಳು ನಡೆಯುತ್ತವೆ ಬ್ಯಾಂಕ್ ಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.‌ ಮದುವೆ ಇನ್ನಿತರ ಕಾರ್ಯಕ್ರಮಗಳು ನಡೆಯಲು ಅನುಮತಿಯಿದೆ. ಆದರೆ ಬರೀ ಸಣ್ಣ ಪುಟ್ಟ ವ್ಯಾಪಾರ, ವ್ಯವಹಾರ ಕ್ಕೆ ವಾರಾಂತ್ಯ ಕಪ್ಯೂ೯ ಕಲಬುರಗಿ ಜಿಲ್ಲೆಯಲ್ಲಿ ಜಾರಿಗೆ ತರುವುದು ಅವೈಜ್ಞಾನಿಕ ಹಾಗೂ ಸಮಂಜಸವಾಗಿದೆ. ಅದಲ್ಲದೇ ಪಾಸಿಟಿವಿಟಿ ಪ್ರಮಾಣವು ಬಹಳ ಕಡಿಮೆಯಿದೆ. ಹೀಗಾಗಿ ಮುಂಬರುವ ವಾರಾಂತ್ಯ ಕಪ್ಯೂ೯ ಸಂಪೂರ್ಣ ವಾಗಿ ಕಾರ್ಯನಿರ್ವಹಿಸುವುದರ ಮುಖಾಂತರ ಜತೆಗೇ ಇತರ ಹೋರಾಟ ಕೈಗೊಳ್ಳುವುದರ ನಿಟ್ಟಿನಲ್ಲಿ ಸರ್ಕಾರಕ್ಕೆ ಸವಾಲು ಹಾಕುತ್ತೇವೆ ಎಂದು ಎಚ್ಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ್, ಗೌರವ ಕಾರ್ಯದರ್ಶಿ ಶರಣ ಬಸಪ್ಪ ಎಂ ಪಪ್ಪಾ, ಸರಾಫ್ ಬಜಾರ್ ಸಂಘದ ಅಧ್ಯಕ್ಷ ರಾಘವೇಂದ್ರ ಮೈಲಾಪುರ, ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಣ ನರಸಿಂಹ್ ಮೆಂಡನ್, ಬಟ್ಟೆ ಮಾರಾಟ ಸಂಘದ ಕಾರ್ಯದರ್ಶಿ ಆನಂದ ದಂಡೋತಿ ಹೇಳಿದ್ದಾರೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರ ದಲ್ಲೇ ಕಪ್ಯೂ೯ ಜಾರಿ ಇಲ್ಲ.‌ ಅದಲ್ಲದೇ ರೈಲು, ಬಸ್ ಗಳ ಮೂಲಕ ಸರಳವಾಗಿ ಮಹಾರಾಷ್ಟ್ರ ದಿಂದ ಬರಲಾಗುತ್ತಿದೆ. ಚೆಕ್ ಪೋಸ್ಟ್ ನಲ್ಲಿ ಪ್ರವೇಶಾತಿಗೆ ಯಾವುದೇ ನಿರ್ಬಂಧ ಇಲ್ಲ.

ಇದನ್ನೂ ಓದಿ :ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್‌

ಕಳೆದ ಎರಡು ವರ್ಷಗಳಿಂದ ವ್ಯಾಪಾರ ಇಲ್ಲದಿದ್ದಕ್ಕೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದೇವೆ. ಅಂಗಡಿ ಮುಂಗಟ್ಟುಗಳ ಬಾಡಿಗೆ ಹಾಗೂ ವಿದ್ಯುತ್ ಬಿಲ್ ಕಟ್ಟಲಿಕ್ಕಾಗುತ್ತಿಲ್ಲ. ವ್ಯಾಪಾರ ನಡೆಯೋದೇ ಶನಿವಾರ ಹಾಗೂ ರವಿವಾರ ಈ ಎರಡು ದಿನ ಬಂದ್ ಮಾಡಿದರೆ ನಷ್ಟ ವ್ಯಾಪಾರೀಗಳಿಗೆ ಆಗುತ್ತದೆ. ಒಂದು ವೇಳೆ ಕಪ್ಯೂ೯ ಜಾರಿ ಮಾಡುವುದಾದರೆ ಸೋಮವಾರ, ಮಂಗಳವಾರ ಈ ಎರಡು ದಿನ ಸಂಪೂರ್ಣ ಬಂದ್ ಮಾಡಲಿ. ಎಲ್ಲವೂ ಕಾರ್ಯನಿರ್ವಹಿಸಿ ಬರೀ ಸಣ್ಣ ಪುಟ್ಟ ವ್ಯಾಪಾರಕ್ಕೆ ಬ್ರೇಕ್ ಹಾಕಿರುವುದು ಯಾವ ನ್ಯಾಯ. ಕೊವಿಡ್ ನಿಯಂತ್ರಣಕ್ಕೆ ಬೆಂಬಲವಿದೆ. ಆದರೆ ಎಲ್ಲವೂ ಸುಗಮವಾಗಿ ನಡೆದು ತಮಗಷ್ಟೇ ನಿಬಂ೯ಧ ಹಾಕುತ್ತಿರುವುದು ಅನ್ಯಾಯ ಹಾಗೂ ಶೋಷಣೆಯ ಪರಮಾವಧಿಯಾಗಿದೆ. ಪೊಲೀಸ್ ಅವರು ತಮ್ಮನ್ನು ಅತ್ಯಂತ ಕೆಟ್ಟ ದ್ದಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ವ್ಯಾಪಾರೀಗಳು ಅಳಲು ತೋಡಿಕೊಂಡರು.

ಲಾಕ್ ಡೌನ್ ವೇಳೆಯಲ್ಲಿ ರಾಜ್ಯದ ಯಾವುದೇ ನಗರ ಹಾಗೂ ಜಿಲ್ಲೆಯಲ್ಲಿ ಹಾಕಲಾಗದ ಕೆಎಡಿ ಕಾಯ್ದೆಯಡಿ 374 ವ್ಯಾಪಾರಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗ ಪೊಲೀಸರು ಜಾಮೀನು ಪಡೆದುಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಇದನ್ನೆಲ್ಲ ನೋಡುವಾಗ ವಿಷ ಕುಡಿದು ಸಾಯಬೇಕೆನಿಸುತ್ತಿದೆ ಎಂದು ನೋವು ತೋಡಿಕೊಂಡರು. ಎಚ್ಕೆಸಿಸಿಐ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.